ETV Bharat / state

ತಮಿಳುನಾಡಿನಿಂದ ಬರುವವರಿಗೂ ಕೋವಿಡ್​ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಸಚಿವ ಸೋಮಶೇಖರ್

author img

By

Published : Jan 20, 2022, 5:12 PM IST

ತಮಿಳುನಾಡಿನಿಂದ ಬರುವ ಪ್ರಯಾಣಿಕರಿಗೆ ಕೋವಿಡ್​ ನೆಗೆಟಿವ್ ರಿಪೋರ್ಟ್ ತರುವುದನ್ನು ಕಡ್ಡಾಯ ಮಾಡಿದ್ದು, ಚೆಕ್ ಪೋಸ್ಟ್​ಗಳನ್ನು ಮತ್ತಷ್ಟು ಬಿಗಿಗೊಳಿಸುವಂತೆ ಇಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

minister s t somashekar
ಸಚಿವ ಎಸ್.ಟಿ. ಸೋಮಶೇಖರ್

ಚಾಮರಾಜನಗರ: ಜಿಲ್ಲೆಯಲ್ಲಿ ಹೊಂದಿಕೊಂಡಿರುವ ಎಲ್ಲಾ ಅಂತಾರಾಜ್ಯ ಗಡಿಗಳಲ್ಲಿ ಮತ್ತಷ್ಟು ಬಿಗಿ ಮಾಡಲಿದ್ದು, ಎಲ್ಲಾ ಕಡೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಬೇಕೆಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಕೋವಿಡ್ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿ, ಕೇರಳದಿಂದ ಬರುವವರಿಗೆ ಮಾತ್ರ ಈಗ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಿದೆ. ಆದರೆ, ಇಂದಿನಿಂದ ತಮಿಳುನಾಡಿನಿಂದ ಬರುವವರಿಗೂ ನೆಗೆಟಿವ್ ರಿಪೋರ್ಟ್ ತರುವುದನ್ನು ಕಡ್ಡಾಯ ಮಾಡಿದ್ದು, ಚೆಕ್ ಪೋಸ್ಟ್​ಗಳನ್ನು ಮತ್ತಷ್ಟು ಬಿಗಿಗೊಳಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಸಚಿವ ಎಸ್.ಟಿ. ಸೋಮಶೇಖರ್

ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲು ಸಿಎಂ ಬೊಮ್ಮಾಯಿ ಅವರು ಏಕಪಕ್ಷೀಯವಾಗಿ ನಿರ್ಧರಿಸಲು ಆಗುವುದಿಲ್ಲ. ತಜ್ಞರ ಸಮಿತಿ, ಸಂಪುಟದೊಂದಿಗೆ ಚರ್ಚಿಸಬೇಕಾಗುತ್ತದೆ‌. ಫೆಬ್ರವರಿ ಮೊದಲನೇ ವಾರದಲ್ಲಿ ಕೊರೊನಾ ಪ್ರಕರಣ ಉತ್ತುಂಗಕ್ಕೆ ಹೋಗಲಿದೆ ಎಂಬ ಅಭಿಪ್ರಾಯವಿದೆ. ಜನರಿಗೆ ಅನೂಕೂಲವೂ ಆಗಬೇಕು, ಆರೋಗ್ಯವನ್ನೂ ಕಾಪಾಡುವ ನಿರ್ಧಾರವನ್ನು ತಜ್ಞರೊಟ್ಟಿಗೆ ಚರ್ಚಿಸಿ ಸಿಎಂ ತಿಳಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ''ನಾನು ಸಿಎಂ ಅಲ್ಲ, ಅದರ ಆಸೆಯೂ ನನಗಿಲ್ಲ'': ಸಚಿವ ಎಸ್.ಟಿ ಸೋಮಶೇಖರ್

ಜಿಲ್ಲೆಯ ಕೆಲ ಶಾಲಾ ಮಕ್ಕಳಲ್ಲಿ ಸೋಂಕು ತಗುಲುತ್ತಿದ್ದು, ರಜೆ ನೀಡುವ ಕುರಿತು ಜಿಲ್ಲಾಧಿಕಾರಿ ನಿರ್ಧಾರ ಕೈಗೊಳ್ಳುತ್ತಾರೆ. ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕೂಡಲೇ ವ್ಯಾಕ್ಸಿನೇಷನ್‌ ಮಾಡಬೇಕೆಂದು ಶಿಕ್ಷಣ ಇಲಾಖೆಗೆ ಸೂಚಿಸಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಾಹೀರಾತು- ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಚಾಮರಾಜನಗರ: ಜಿಲ್ಲೆಯಲ್ಲಿ ಹೊಂದಿಕೊಂಡಿರುವ ಎಲ್ಲಾ ಅಂತಾರಾಜ್ಯ ಗಡಿಗಳಲ್ಲಿ ಮತ್ತಷ್ಟು ಬಿಗಿ ಮಾಡಲಿದ್ದು, ಎಲ್ಲಾ ಕಡೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಬೇಕೆಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಕೋವಿಡ್ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿ, ಕೇರಳದಿಂದ ಬರುವವರಿಗೆ ಮಾತ್ರ ಈಗ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಿದೆ. ಆದರೆ, ಇಂದಿನಿಂದ ತಮಿಳುನಾಡಿನಿಂದ ಬರುವವರಿಗೂ ನೆಗೆಟಿವ್ ರಿಪೋರ್ಟ್ ತರುವುದನ್ನು ಕಡ್ಡಾಯ ಮಾಡಿದ್ದು, ಚೆಕ್ ಪೋಸ್ಟ್​ಗಳನ್ನು ಮತ್ತಷ್ಟು ಬಿಗಿಗೊಳಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಸಚಿವ ಎಸ್.ಟಿ. ಸೋಮಶೇಖರ್

ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲು ಸಿಎಂ ಬೊಮ್ಮಾಯಿ ಅವರು ಏಕಪಕ್ಷೀಯವಾಗಿ ನಿರ್ಧರಿಸಲು ಆಗುವುದಿಲ್ಲ. ತಜ್ಞರ ಸಮಿತಿ, ಸಂಪುಟದೊಂದಿಗೆ ಚರ್ಚಿಸಬೇಕಾಗುತ್ತದೆ‌. ಫೆಬ್ರವರಿ ಮೊದಲನೇ ವಾರದಲ್ಲಿ ಕೊರೊನಾ ಪ್ರಕರಣ ಉತ್ತುಂಗಕ್ಕೆ ಹೋಗಲಿದೆ ಎಂಬ ಅಭಿಪ್ರಾಯವಿದೆ. ಜನರಿಗೆ ಅನೂಕೂಲವೂ ಆಗಬೇಕು, ಆರೋಗ್ಯವನ್ನೂ ಕಾಪಾಡುವ ನಿರ್ಧಾರವನ್ನು ತಜ್ಞರೊಟ್ಟಿಗೆ ಚರ್ಚಿಸಿ ಸಿಎಂ ತಿಳಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ''ನಾನು ಸಿಎಂ ಅಲ್ಲ, ಅದರ ಆಸೆಯೂ ನನಗಿಲ್ಲ'': ಸಚಿವ ಎಸ್.ಟಿ ಸೋಮಶೇಖರ್

ಜಿಲ್ಲೆಯ ಕೆಲ ಶಾಲಾ ಮಕ್ಕಳಲ್ಲಿ ಸೋಂಕು ತಗುಲುತ್ತಿದ್ದು, ರಜೆ ನೀಡುವ ಕುರಿತು ಜಿಲ್ಲಾಧಿಕಾರಿ ನಿರ್ಧಾರ ಕೈಗೊಳ್ಳುತ್ತಾರೆ. ಲಸಿಕೆ ಪಡೆಯದ ವಿದ್ಯಾರ್ಥಿಗಳಿಗೆ ಕೂಡಲೇ ವ್ಯಾಕ್ಸಿನೇಷನ್‌ ಮಾಡಬೇಕೆಂದು ಶಿಕ್ಷಣ ಇಲಾಖೆಗೆ ಸೂಚಿಸಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಾಹೀರಾತು- ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.