ETV Bharat / state

ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಅರಣ್ಯ ಇಲಾಖೆ ಗುಮಾಸ್ತ! - ಚಾಮರಾಜನಗರ ಅರಣ್ಯ ಇಲಾಖೆ ಗುಮಾಸ್ತ

ಭೂ ಪರಿವರ್ತನೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯ ಇಲಾಖೆ ಗುಮಾಸ್ತನೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರದ ಕೆಎಸ್ಆರ್​ಟಿಸಿ ನಿಲ್ದಾಣದಲ್ಲಿ ನಡೆದಿದೆ.

Demand for bribery for land conversion: ACB trapped Forest Department clerk!
ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಅರಣ್ಯ ಇಲಾಖೆ ಗುಮಾಸ್ತ!
author img

By

Published : Feb 12, 2020, 8:29 PM IST

ಚಾಮರಾಜನಗರ: ಭೂ ಪರಿವರ್ತನೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯ ಇಲಾಖೆ ಗುಮಾಸ್ತನೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ಕೆಎಸ್ಆರ್​ಟಿಸಿ ನಿಲ್ದಾಣದಲ್ಲಿ ನಡೆದಿದೆ.

ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಅರಣ್ಯ ಇಲಾಖೆ ಗುಮಾಸ್ತ!

ಚಾಮರಾಜನಗರ ಅರಣ್ಯ ಕಚೇರಿಯಲ್ಲಿನ ಗುಮಾಸ್ತ ಪುಟ್ಟಸ್ವಾಮಿ ಸಿಕ್ಕಿಬಿದ್ದ ಸಿಬ್ಬಂದಿ. ಹರದನಹಳ್ಳಿಯ ರೈತ ಲಿಂಗರಾಜು ತಮ್ಮ ಜಮೀನಿನ ಭೂ ಪರಿವರ್ತನೆ ಮಾಡಿಕೊಡಲು ಅರ್ಜಿ ಸಲ್ಲಿಸಿದಾಗ ಈತ 3 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಇಂದು ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಲಿಂಗರಾಜು ಅವರಿಂದ 2500 ರೂ. ಪಡೆಯುವಾಗ ಎಸಿಬಿ ಇನ್ಸ್​ಪೆಕ್ಟರ್ ದೀಪಕ್ ಅವರ ಕೈಗೆ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಣವನ್ನು ವಶಕ್ಕೆ ಪಡೆದು, ಆರೋಪಿ ಪುಟ್ಟಸ್ವಾಮಿಯನ್ನು ವಿಚಾರಣೆಗೊಳಪಡಿಸಿದ್ದಾರೆ.

ಚಾಮರಾಜನಗರ: ಭೂ ಪರಿವರ್ತನೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅರಣ್ಯ ಇಲಾಖೆ ಗುಮಾಸ್ತನೊಬ್ಬ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ಕೆಎಸ್ಆರ್​ಟಿಸಿ ನಿಲ್ದಾಣದಲ್ಲಿ ನಡೆದಿದೆ.

ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಅರಣ್ಯ ಇಲಾಖೆ ಗುಮಾಸ್ತ!

ಚಾಮರಾಜನಗರ ಅರಣ್ಯ ಕಚೇರಿಯಲ್ಲಿನ ಗುಮಾಸ್ತ ಪುಟ್ಟಸ್ವಾಮಿ ಸಿಕ್ಕಿಬಿದ್ದ ಸಿಬ್ಬಂದಿ. ಹರದನಹಳ್ಳಿಯ ರೈತ ಲಿಂಗರಾಜು ತಮ್ಮ ಜಮೀನಿನ ಭೂ ಪರಿವರ್ತನೆ ಮಾಡಿಕೊಡಲು ಅರ್ಜಿ ಸಲ್ಲಿಸಿದಾಗ ಈತ 3 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಇಂದು ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಲಿಂಗರಾಜು ಅವರಿಂದ 2500 ರೂ. ಪಡೆಯುವಾಗ ಎಸಿಬಿ ಇನ್ಸ್​ಪೆಕ್ಟರ್ ದೀಪಕ್ ಅವರ ಕೈಗೆ ಹಣದ ಸಮೇತ ಸಿಕ್ಕಿಬಿದ್ದಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹಣವನ್ನು ವಶಕ್ಕೆ ಪಡೆದು, ಆರೋಪಿ ಪುಟ್ಟಸ್ವಾಮಿಯನ್ನು ವಿಚಾರಣೆಗೊಳಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.