ETV Bharat / state

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಕೇಸ್: ಹಿರಿಯ ಮಗಳಿಗೆ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಸಚಿವ

author img

By

Published : Jun 7, 2021, 7:43 PM IST

Updated : Jun 7, 2021, 9:48 PM IST

ಒಂದೇ ಮನೆಯ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಸಚಿವ ಸುರೇಶ್​ ಕುಮಾರ್​ ಸಾಂತ್ವನ ಹೇಳಿದ್ದು, ಆ ಕುಟುಂಬದ ಹಿರಿಯ ಮಗಳಿಗೆ ಸರ್ಕಾರಿ ನೌಕರಿ ಕೊಡುವ ಭರವಸೆ ನೀಡಿದ್ದಾರೆ.

sureshkumar
sureshkumar

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್.ಮೂಕಹಳ್ಳಿ ಗ್ರಾಮಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ, ಖಿನ್ನತೆ ಹಾಗೂ ಇನ್ನಿತರ ಕಾರಣದಿಂದ ಒಂದೇ ಮನೆಯ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಪ್ರತಿಯೊಬ್ಬರ ಜೀವನದಲ್ಲಿ ಕೋವಿಡ್​ನ ಈ ಸಂಕಷ್ಟ ಸಮಯದಲ್ಲಿ ಸಮಸ್ಯೆಗಳು ತಲೆದೋರುವುದು ಸಹಜ. ಇದನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕು. ಮಹಾದೇವಸ್ವಾಮಿ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ದುರದೃಷ್ಟಕರ ಎಂದು ಕಂಬನಿ ಮಿಡಿದರು.

ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಸಚಿವ

ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕುಟುಂಬದ ಹಿರಿಯ ಮಗಳಿಗೆ ಸರ್ಕಾರಿ ಉದ್ಯೋಗ ಕೊಡುವ ಜೊತೆಗೆ ಅವರ ಮನೆಯನ್ನು ದುರಸ್ತಿ ಪಡಿಸಿ ಜಮೀನಿನಲ್ಲಿ ಕೊಳವೆ ಬಾವಿ ಸೌಲಭ್ಯವನ್ನು ಕಲ್ಪಿಸಿ ಜೀವನೋಪಾಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್.ಮೂಕಹಳ್ಳಿ ಗ್ರಾಮಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ, ಖಿನ್ನತೆ ಹಾಗೂ ಇನ್ನಿತರ ಕಾರಣದಿಂದ ಒಂದೇ ಮನೆಯ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಪ್ರತಿಯೊಬ್ಬರ ಜೀವನದಲ್ಲಿ ಕೋವಿಡ್​ನ ಈ ಸಂಕಷ್ಟ ಸಮಯದಲ್ಲಿ ಸಮಸ್ಯೆಗಳು ತಲೆದೋರುವುದು ಸಹಜ. ಇದನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕು. ಮಹಾದೇವಸ್ವಾಮಿ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ದುರದೃಷ್ಟಕರ ಎಂದು ಕಂಬನಿ ಮಿಡಿದರು.

ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಸಚಿವ

ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಕುಟುಂಬದ ಹಿರಿಯ ಮಗಳಿಗೆ ಸರ್ಕಾರಿ ಉದ್ಯೋಗ ಕೊಡುವ ಜೊತೆಗೆ ಅವರ ಮನೆಯನ್ನು ದುರಸ್ತಿ ಪಡಿಸಿ ಜಮೀನಿನಲ್ಲಿ ಕೊಳವೆ ಬಾವಿ ಸೌಲಭ್ಯವನ್ನು ಕಲ್ಪಿಸಿ ಜೀವನೋಪಾಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

Last Updated : Jun 7, 2021, 9:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.