ETV Bharat / state

ಚಾಮರಾಜನಗರ: ಹಸು ಹುಡಕಾಡಲು ತೆರಳಿದ್ದ ವ್ಯಕ್ತಿ ಆನೆ ದಾಳಿಗೆ ಬಲಿ - Chamrajnagar latest update news

ಕಾಡಂಚಿನಲ್ಲಿ ಮೇಯಲು ಬಿಟ್ಟಿದ್ದ ಹಸು ಹುಡುಕಾಟಕ್ಕೆ ತೆರಳಿದ್ದ ವ್ಯಕ್ತಿಯೋರ್ವ ಆನೆ ದಾಳಿಗೆ ಬಲಿಯಾಗಿದ್ದಾನೆ. ಚಾಮರಾಜನಗರ ತಾಲೂಕಿನ ಹೊಂಗಲವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

elephant attack
ಆನೆ ದಾಳಿಗೆ ಬಲಿಯಾದ ವ್ಯಕ್ತಿ
author img

By

Published : Nov 5, 2020, 9:30 AM IST

ಚಾಮರಾಜನಗರ: ತಪ್ಪಿಸಿಕೊಂಡಿದ್ದ ಹಸು ಹುಡುಕಲು ತೆರಳಿದ್ದ ವ್ಯಕ್ತಿಯೊಬ್ಬ ಆನೆದಾಳಿಗೆ ಬಲಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೊಂಗಲವಾಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗುರುಸ್ವಾಮಿ(50) ಮೃತ ದುರ್ದೈವಿ. ಬುಧವಾರ ಸಂಜೆ ಮನೆಗೆ ಹಸು ಬಾರದಿದ್ದರಿಂದ ಡೈರಿಗೆ ಹಾಲು ಹಾಕಲು ತಡವಾಗುತ್ತದೆ ಎಂದು ಕಾಡಂಚಿನಲ್ಲಿ ಮೇಯಲು ಬಿಟ್ಟಿದ್ದ ಹಸು ಹುಡುಕಾಡುತ್ತಿರುವಾಗ ಆನೆಯೊಂದು ದಾಳಿ ಮಾಡಿ ಕೊಂದು ಹಾಕಿದೆ ಎನ್ನಲಾಗಿದೆ.

ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೆ.ಗುಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದೆ.

ಚಾಮರಾಜನಗರ: ತಪ್ಪಿಸಿಕೊಂಡಿದ್ದ ಹಸು ಹುಡುಕಲು ತೆರಳಿದ್ದ ವ್ಯಕ್ತಿಯೊಬ್ಬ ಆನೆದಾಳಿಗೆ ಬಲಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೊಂಗಲವಾಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗುರುಸ್ವಾಮಿ(50) ಮೃತ ದುರ್ದೈವಿ. ಬುಧವಾರ ಸಂಜೆ ಮನೆಗೆ ಹಸು ಬಾರದಿದ್ದರಿಂದ ಡೈರಿಗೆ ಹಾಲು ಹಾಕಲು ತಡವಾಗುತ್ತದೆ ಎಂದು ಕಾಡಂಚಿನಲ್ಲಿ ಮೇಯಲು ಬಿಟ್ಟಿದ್ದ ಹಸು ಹುಡುಕಾಡುತ್ತಿರುವಾಗ ಆನೆಯೊಂದು ದಾಳಿ ಮಾಡಿ ಕೊಂದು ಹಾಕಿದೆ ಎನ್ನಲಾಗಿದೆ.

ಚಾಮರಾಜನಗರ ಪೂರ್ವ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೆ.ಗುಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.