ETV Bharat / state

BSY ಪದತ್ಯಾಗ, ಅಭಿಮಾನಿ ಪ್ರಾಣ ತ್ಯಾಗ.. ಕಂಬನಿ ಮಿಡಿದ ಯಡಿಯೂರಪ್ಪ

author img

By

Published : Jul 27, 2021, 11:28 AM IST

Updated : Jul 27, 2021, 11:53 AM IST

ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಕಟ್ಟಾ ಅಭಿಮಾನಿಯಾಗಿದ್ದ ರವಿ ಎಂಬ ಯುವಕನು ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Chamarajnagar
ರವಿ ಆತ್ಮಹತ್ಯೆ

ಚಾಮರಾಜನಗರ: ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದಿದ್ದಕ್ಕೆ ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೊಡ್ಡನಾಗಪ್ಪ ಎಂಬವರ ಮಗ ನಾಗರಾಜಪ್ಪ ಅಲಿಯಾಸ್​ ರವಿ(32) ಆತ್ಮಹತ್ಯೆ ಶರಣಾಗಿರುವ ಅಭಿಮಾನಿ.

ಮೃತ ಯುವಕನು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಕಟ್ಟಾ ಅಭಿಮಾನಿಯಾಗಿದ್ದು, ಯಡಿಯೂರಪ್ಪ ರಾಜೀನಾಮೆ ವಿಚಾರ ತಿಳಿದು ಹಲವರ ಬಳಿ ಬೇಸರ ಹೊರಹಾಕಿದ್ದ ಎನ್ನಲಾಗಿದೆ. ಆದರೆ ಇಂದು ಮುಂಜಾನೆ ತಾನು ನಡೆಸುತ್ತಿದ್ದ ಹೋಟೆಲ್​ನಲ್ಲಿ ನೇಣಿಗೆ ಶರಣಾಗಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡ್ಲುಪೇಟೆ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಿಎಸ್​ವೈ ಸಂತಾಪ: ಅಭಿಮಾನಿ ಆತ್ಮಹತ್ಯೆಗೆ ಬಿ.ಎಸ್‌. ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ. ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು. ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅವರ ಕುಟುಂಬದ ನೋವಿನೊಂದಿಗೆ ತಾನಿದ್ದು, ಅಭಿಮಾನ ಅತಿರೇಕಕ್ಕೆ ಹೋಗದಿರಲಿ ಎಂದು ಮನವಿ ಮಾಡಿದ್ದಾರೆ.

  • ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ. (2/2)

    — B.S. Yediyurappa (@BSYBJP) July 27, 2021 " class="align-text-top noRightClick twitterSection" data=" ">

ಚಾಮರಾಜನಗರ: ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿದಿದ್ದಕ್ಕೆ ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದೊಡ್ಡನಾಗಪ್ಪ ಎಂಬವರ ಮಗ ನಾಗರಾಜಪ್ಪ ಅಲಿಯಾಸ್​ ರವಿ(32) ಆತ್ಮಹತ್ಯೆ ಶರಣಾಗಿರುವ ಅಭಿಮಾನಿ.

ಮೃತ ಯುವಕನು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಕಟ್ಟಾ ಅಭಿಮಾನಿಯಾಗಿದ್ದು, ಯಡಿಯೂರಪ್ಪ ರಾಜೀನಾಮೆ ವಿಚಾರ ತಿಳಿದು ಹಲವರ ಬಳಿ ಬೇಸರ ಹೊರಹಾಕಿದ್ದ ಎನ್ನಲಾಗಿದೆ. ಆದರೆ ಇಂದು ಮುಂಜಾನೆ ತಾನು ನಡೆಸುತ್ತಿದ್ದ ಹೋಟೆಲ್​ನಲ್ಲಿ ನೇಣಿಗೆ ಶರಣಾಗಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡ್ಲುಪೇಟೆ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಿಎಸ್​ವೈ ಸಂತಾಪ: ಅಭಿಮಾನಿ ಆತ್ಮಹತ್ಯೆಗೆ ಬಿ.ಎಸ್‌. ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ. ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು. ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅವರ ಕುಟುಂಬದ ನೋವಿನೊಂದಿಗೆ ತಾನಿದ್ದು, ಅಭಿಮಾನ ಅತಿರೇಕಕ್ಕೆ ಹೋಗದಿರಲಿ ಎಂದು ಮನವಿ ಮಾಡಿದ್ದಾರೆ.

  • ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ. (2/2)

    — B.S. Yediyurappa (@BSYBJP) July 27, 2021 " class="align-text-top noRightClick twitterSection" data=" ">
Last Updated : Jul 27, 2021, 11:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.