ETV Bharat / state

ಚಾಮರಾಜನಗರ: ಹೆದ್ದಾರಿ ತಡೆದು ಬೆಂಕಿ ಹಚ್ಚಿ ಪ್ರತಿಭಟನೆ, ಹೋರಾಟಗಾರರ ಬಂಧನ

author img

By

Published : Sep 25, 2020, 3:00 PM IST

ಸ್ತೆಯಲ್ಲಿ ಬೆಂಕಿ ಹಚ್ಚುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ವಾಹನ ದಟ್ಟನೆ ಉಂಟಾಗಿ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.

Farmer and Anti-Labor Act against Farmers' protest chamarajanagara
ಚಾಮರಾಜನಗರ: ಹೆದ್ದಾರಿ ತಡೆದು ಬೆಂಕಿ ಹಚ್ಚಿ ಪ್ರತಿಭಟನೆ, ಹೋರಾಟಗಾರರ ಬಂಧನ

ಕೊಳ್ಳೇಗಾಲ (ಚಾಮರಾಜನಗರ): ಭೂ ಸುಧಾರಣೆ, ಎಪಿಎಂಸಿ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಚಾಮರಾಜನಗರ: ಹೆದ್ದಾರಿ ತಡೆದು ಬೆಂಕಿ ಹಚ್ಚಿ ಪ್ರತಿಭಟನೆ, ಹೋರಾಟಗಾರರ ಬಂಧನ

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರ ಕೂಗುತ್ತಾ ಎಡಿಬಿಐ ಸರ್ಕಲ್​ವರಗೆ ಸಾಗಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ಬಸವರಾಜು ಮಾತನಾಡಿ, ಪ್ರಧಾನಿ ಮೋದಿ ಅವರು ಕಪ್ಪು ಹಣ ತಂದು ದೇಶ ಉದ್ಧಾರ ಮಾಡುತ್ತಾರೆ ಎಂದು ಭಾವಿಸಿದ್ದೆವು. ಆದರೆ, ನೋಟು ಅಮಾನ್ಯೀಕರಣದಿಂದ ಕಾರ್ಖಾನೆಗಳು ಮುಚ್ಚಿದವು, ಇದೀಗ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಂದಿದ್ದಾರೆ ಇದರಿಂದ ರೈತರಿಗೆ ಅನಾನೂಕೂಲವಾಗುತ್ತಿದೆ. ಈಗಿಂದಿಗಲೇ ಭೂ ಸುಧಾರಣಾ, ಎಪಿಎಂಸಿ ಹಾಗೂ ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳ ಸುಗ್ರೀವಾಜ್ಞೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಿ ಪ್ರಧಾನ ಮಂತ್ರಿಗಳೇ ದೇಶ ಬಿಟ್ಟು ತೊಲಗಿ ಎಂದು ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೇ ವೇಳೆ ರಸ್ತೆಯಲ್ಲಿ ಬೆಂಕಿ ಹಚ್ಚುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ವಾಹನ ದಟ್ಟನೆ ಉಂಟಾಗಿ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.

ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ತಡೆ:

ರಸ್ತೆಯಲ್ಲಿ 50ಕ್ಕೂ ಹೆಚ್ಚು ಹೋರಾಟಗಾರರು ಕುಳಿತು ಕಾಯ್ದೆಗಳು ವಾಪಸ್ ಪಡೆಯಲು ಆಗ್ರಹಿಸಿ ಸಿಎಂ ಯಡಿಯೂರಪ್ಪ, ಸಚಿವರಾದ ಬಿ.ಸಿ.ಪಾಟೀಲ್, ಸಿಟಿ ರವಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಎಸ್​​ಡಿಪಿಐ ಪ್ರತಿಭಟನೆ:

ಲಾರಿ ಸ್ಟ್ಯಾಂಡ್​​ನಿಂದ ಪಚ್ಚಪ್ಪ ವೃತ್ತದವರೆಗೆ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಎಸ್​​ಡಿಪಿಐ ಸಂಘಟನೆ ಪ್ರತಿಭಟನಾ ಮೆರವಣಿಗೆ ನಡೆಸಿ ಕಾಯ್ದೆ ವಾಪಸ್​ಗೆ ಆಗ್ರಹಿಸಿದರು. ಗುಂಡ್ಲುಪೇಟೆಯಲ್ಲೂ ರೈತ ಸಂಘದ ಕಾರ್ಯಕರ್ತರು ಚಳವಳಿ ನಡೆಸಿದರು.

ಹೋರಾಟಗಾರರ ಬಂಧನ: ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 30ಕ್ಕೂ ಹೆಚ್ಚು ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಗುಂಡ್ಲುಪೇಟೆಯಲ್ಲೂ ಹಲವು ಹೋರಾಟಗಾರರನ್ನು ಬಂಧಿಸಿದ್ದಾರೆ.

ಕೊಳ್ಳೇಗಾಲ (ಚಾಮರಾಜನಗರ): ಭೂ ಸುಧಾರಣೆ, ಎಪಿಎಂಸಿ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಚಾಮರಾಜನಗರ: ಹೆದ್ದಾರಿ ತಡೆದು ಬೆಂಕಿ ಹಚ್ಚಿ ಪ್ರತಿಭಟನೆ, ಹೋರಾಟಗಾರರ ಬಂಧನ

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರ ಕೂಗುತ್ತಾ ಎಡಿಬಿಐ ಸರ್ಕಲ್​ವರಗೆ ಸಾಗಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡ ಬಸವರಾಜು ಮಾತನಾಡಿ, ಪ್ರಧಾನಿ ಮೋದಿ ಅವರು ಕಪ್ಪು ಹಣ ತಂದು ದೇಶ ಉದ್ಧಾರ ಮಾಡುತ್ತಾರೆ ಎಂದು ಭಾವಿಸಿದ್ದೆವು. ಆದರೆ, ನೋಟು ಅಮಾನ್ಯೀಕರಣದಿಂದ ಕಾರ್ಖಾನೆಗಳು ಮುಚ್ಚಿದವು, ಇದೀಗ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಂದಿದ್ದಾರೆ ಇದರಿಂದ ರೈತರಿಗೆ ಅನಾನೂಕೂಲವಾಗುತ್ತಿದೆ. ಈಗಿಂದಿಗಲೇ ಭೂ ಸುಧಾರಣಾ, ಎಪಿಎಂಸಿ ಹಾಗೂ ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳ ಸುಗ್ರೀವಾಜ್ಞೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಿ ಪ್ರಧಾನ ಮಂತ್ರಿಗಳೇ ದೇಶ ಬಿಟ್ಟು ತೊಲಗಿ ಎಂದು ಪ್ರತಿಭಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೇ ವೇಳೆ ರಸ್ತೆಯಲ್ಲಿ ಬೆಂಕಿ ಹಚ್ಚುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ವಾಹನ ದಟ್ಟನೆ ಉಂಟಾಗಿ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.

ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ತಡೆ:

ರಸ್ತೆಯಲ್ಲಿ 50ಕ್ಕೂ ಹೆಚ್ಚು ಹೋರಾಟಗಾರರು ಕುಳಿತು ಕಾಯ್ದೆಗಳು ವಾಪಸ್ ಪಡೆಯಲು ಆಗ್ರಹಿಸಿ ಸಿಎಂ ಯಡಿಯೂರಪ್ಪ, ಸಚಿವರಾದ ಬಿ.ಸಿ.ಪಾಟೀಲ್, ಸಿಟಿ ರವಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

ಎಸ್​​ಡಿಪಿಐ ಪ್ರತಿಭಟನೆ:

ಲಾರಿ ಸ್ಟ್ಯಾಂಡ್​​ನಿಂದ ಪಚ್ಚಪ್ಪ ವೃತ್ತದವರೆಗೆ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಎಸ್​​ಡಿಪಿಐ ಸಂಘಟನೆ ಪ್ರತಿಭಟನಾ ಮೆರವಣಿಗೆ ನಡೆಸಿ ಕಾಯ್ದೆ ವಾಪಸ್​ಗೆ ಆಗ್ರಹಿಸಿದರು. ಗುಂಡ್ಲುಪೇಟೆಯಲ್ಲೂ ರೈತ ಸಂಘದ ಕಾರ್ಯಕರ್ತರು ಚಳವಳಿ ನಡೆಸಿದರು.

ಹೋರಾಟಗಾರರ ಬಂಧನ: ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ 30ಕ್ಕೂ ಹೆಚ್ಚು ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಗುಂಡ್ಲುಪೇಟೆಯಲ್ಲೂ ಹಲವು ಹೋರಾಟಗಾರರನ್ನು ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.