ETV Bharat / state

ಕಬ್ಬಿಗೆ ವೈಜ್ಞಾನಿಕ ದರ ನಿಗದಿಪಡಿಸಲು ಆಗ್ರಹಿಸಿ ಪ್ರತಿಭಟನೆ

author img

By

Published : Nov 4, 2020, 4:50 PM IST

ಕೇಂದ್ರ ಸರ್ಕಾರ ಅವೈಜ್ಞಾನಿಕವಾಗಿ ನಿಗದಿಪಡಿಸಿರುವ ಎಫ್​ಆರ್​ಪಿ ದರವನ್ನು ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೂಡಲೇ ಪ್ರತಿ ಟನ್​ಗೆ 3300 ರೂ. ಎಸ್ಎಪಿ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರು.

protest
ಪ್ರತಿಭಟನೆ

ಚಾಮರಾಜನಗರ: ಕಬ್ಬಿಗೆ ಎಫ್​ಆರ್​ಪಿ ಹಾಗೂ ಎಸ್ಎಪಿ ದರವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆಂದು ಒತ್ತಾಯಿಸಿ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟಿಸಿದರು.

ಚಾಮರಾಜನಗರದಲ್ಲಿ ಪ್ರತಿಭಟಿಸಿದ ಕಬ್ಬು ಬೆಳೆಗಾರರು

ಕೇಂದ್ರ ಸರ್ಕಾರ ಅವೈಜ್ಞಾನಿಕವಾಗಿ ನಿಗದಿಪಡಿಸಿರುವ ಎಫ್​ಆರ್​ಪಿ ದರವನ್ನು ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೂಡಲೇ ಪ್ರತಿ ಟನ್​ಗೆ 3300 ರೂ. ಎಸ್ಎಪಿ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲೆಯ ಕಬ್ಬು ಬೆಳೆಗೆ 15-16 ತಿಂಗಳಾಗಿದ್ದರೂ ಸಕ್ಕರೆ ಕಾರ್ಖಾನೆಗಳು ಹೊರ ಜಿಲ್ಲೆಯಿಂದ ಕಬ್ಬು ತರಿಸಿಕೊಳ್ಳುತ್ತಿವೆ. ಜಿಲ್ಲಾಧಿಕಾರಿಯ ಸೂಚನೆಯೂ ಪಾಲನೆಯಾಗುತ್ತಿಲ್ಲ. ಇದರೊಟ್ಟಿಗೆ ಸಕ್ಕರೆ ಇಳುವರಿಯನ್ನು ಕಾರ್ಖಾನೆಗಳು ಕಡಿಮೆ ತೋರಿಸುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಭಾಗ್ಯರಾಜು, ಕಿನಕಹಳ್ಳಿ ಬಸವಣ್ಣ ಇನ್ನಿತರರು ಇದ್ದರು.

ಚಾಮರಾಜನಗರ: ಕಬ್ಬಿಗೆ ಎಫ್​ಆರ್​ಪಿ ಹಾಗೂ ಎಸ್ಎಪಿ ದರವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕೆಂದು ಒತ್ತಾಯಿಸಿ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟಿಸಿದರು.

ಚಾಮರಾಜನಗರದಲ್ಲಿ ಪ್ರತಿಭಟಿಸಿದ ಕಬ್ಬು ಬೆಳೆಗಾರರು

ಕೇಂದ್ರ ಸರ್ಕಾರ ಅವೈಜ್ಞಾನಿಕವಾಗಿ ನಿಗದಿಪಡಿಸಿರುವ ಎಫ್​ಆರ್​ಪಿ ದರವನ್ನು ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೂಡಲೇ ಪ್ರತಿ ಟನ್​ಗೆ 3300 ರೂ. ಎಸ್ಎಪಿ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲೆಯ ಕಬ್ಬು ಬೆಳೆಗೆ 15-16 ತಿಂಗಳಾಗಿದ್ದರೂ ಸಕ್ಕರೆ ಕಾರ್ಖಾನೆಗಳು ಹೊರ ಜಿಲ್ಲೆಯಿಂದ ಕಬ್ಬು ತರಿಸಿಕೊಳ್ಳುತ್ತಿವೆ. ಜಿಲ್ಲಾಧಿಕಾರಿಯ ಸೂಚನೆಯೂ ಪಾಲನೆಯಾಗುತ್ತಿಲ್ಲ. ಇದರೊಟ್ಟಿಗೆ ಸಕ್ಕರೆ ಇಳುವರಿಯನ್ನು ಕಾರ್ಖಾನೆಗಳು ಕಡಿಮೆ ತೋರಿಸುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಭಾಗ್ಯರಾಜು, ಕಿನಕಹಳ್ಳಿ ಬಸವಣ್ಣ ಇನ್ನಿತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.