ETV Bharat / state

ಚಾಮರಾಜನಗರ: ನಾಳೆಯಿಂದ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ, ತಪ್ಪಿದ್ರೆ ಬೀಳುತ್ತೆ ದಂಡ! - undefined

ಚಾಮರಾಜನಗರ ಜಿಲ್ಲಾದ್ಯಂತ ಜು.1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ. ಆನಂದ್​ ಕುಮಾರ್ ತಿಳಿಸಿದ್ದಾರೆ.

ನಾಳೆಯಿಂದ ಹೆಲ್ಮೆಟ್ ಕಡ್ಡಾಯ
author img

By

Published : Jun 30, 2019, 3:26 PM IST

Updated : Jun 30, 2019, 4:07 PM IST

ಚಾಮರಾಜನಗರ: ಬೈಕ್ ಸವಾರರು ಅಪಘಾತದಲ್ಲಿ ಮೃತಪಡುತ್ತಿರುವುದು ಮತ್ತು ಗಂಭೀರವಾಗಿ ಗಾಯಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಚಾಮರಾಜನಗರ ಜಿಲ್ಲಾದ್ಯಂತ ಜು.1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.

ಈ ಕುರಿತು ಕಳೆದ ಮೂರು ದಿನದಿಂದ ಜಿಲ್ಲಾ ಪೊಲೀಸ್ ಇಲಾಖೆ ಸಾಕಷ್ಟು ಪ್ರಚಾರ ನಡೆಸಿದ್ದು, ಹೆಲ್ಮೆಟ್ ಧರಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ.

ನಾಳೆಯಿಂದ ಹೆಲ್ಮೆಟ್ ಕಡ್ಡಾಯ

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ. ಆನಂದ್​ ಕುಮಾರ್ ಈಟಿವಿ ಭಾರತ್​ನೊಂದಿಗೆ ಮಾತನಾಡಿ, ಹೆಲ್ಮೆಟ್ ಧಾರಣೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲೆಯ ಅಪರಾಧ ವರದಿ ಗಮನಿಸಿದಾಗ ಕೊಲೆ, ಹಲ್ಲೆಯಾಗುವರಿಗಿಂತ ಹೆಚ್ಚು ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಸಂಖ್ಯೆ ಹೆಚ್ಚಿದೆ. ಹೊಸ ನಿಯಮದಂತೆ ಜು.1 ರಿಂದ ದಂಡ ವಿಧಿಸಲಾಗಲಿದ್ದು, ಬೈಕ್ ಸವಾರರು ಮತ್ತು ಆಟೋ ಚಾಲಕರು ಸಂಚಾರ ನಿಯಮಗಳನ್ನು ಪಾಲಿಸಿ ಸಂಯಮ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಹೆಲ್ಮೆಟ್ ವ್ಯಾಪಾರ ಜೋರು:

ಹೆಲ್ಮೆಟ್ ಕಡ್ಡಾಯಗೊಳಿಸುತ್ತಿದ್ದಂತೆ ಜಿಲ್ಲಾಕೇಂದ್ರದಲ್ಲಿ ಹೆಲ್ಮೆಟ್ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಜೋಡಿ ರಸ್ತೆ, ಸತ್ತಿ ರಸ್ತೆ, ಗುಂಡ್ಲುಪೇಟೆ ವೃತ್ತ, ರಾಮಸಮುದ್ರದ ರಸ್ತೆಗಳಲ್ಲಿ ಹೆಲ್ಮೆಟ್ ವ್ಯಾಪಾರಿಗಳು ಟೆಂಟ್ ಹಾಕಿದ್ದಾರೆ. ಹೆಲ್ಮೆಟ್​​ಗೆ ಬೇಡಿಕೆ ಸೃಷ್ಟಿಯಾಗಿರುವುದರಿಂದ ಜನರಿಂದ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.

ಚಾಮರಾಜನಗರ: ಬೈಕ್ ಸವಾರರು ಅಪಘಾತದಲ್ಲಿ ಮೃತಪಡುತ್ತಿರುವುದು ಮತ್ತು ಗಂಭೀರವಾಗಿ ಗಾಯಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಚಾಮರಾಜನಗರ ಜಿಲ್ಲಾದ್ಯಂತ ಜು.1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.

ಈ ಕುರಿತು ಕಳೆದ ಮೂರು ದಿನದಿಂದ ಜಿಲ್ಲಾ ಪೊಲೀಸ್ ಇಲಾಖೆ ಸಾಕಷ್ಟು ಪ್ರಚಾರ ನಡೆಸಿದ್ದು, ಹೆಲ್ಮೆಟ್ ಧರಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ.

ನಾಳೆಯಿಂದ ಹೆಲ್ಮೆಟ್ ಕಡ್ಡಾಯ

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಡಿ. ಆನಂದ್​ ಕುಮಾರ್ ಈಟಿವಿ ಭಾರತ್​ನೊಂದಿಗೆ ಮಾತನಾಡಿ, ಹೆಲ್ಮೆಟ್ ಧಾರಣೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲೆಯ ಅಪರಾಧ ವರದಿ ಗಮನಿಸಿದಾಗ ಕೊಲೆ, ಹಲ್ಲೆಯಾಗುವರಿಗಿಂತ ಹೆಚ್ಚು ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಸಂಖ್ಯೆ ಹೆಚ್ಚಿದೆ. ಹೊಸ ನಿಯಮದಂತೆ ಜು.1 ರಿಂದ ದಂಡ ವಿಧಿಸಲಾಗಲಿದ್ದು, ಬೈಕ್ ಸವಾರರು ಮತ್ತು ಆಟೋ ಚಾಲಕರು ಸಂಚಾರ ನಿಯಮಗಳನ್ನು ಪಾಲಿಸಿ ಸಂಯಮ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಹೆಲ್ಮೆಟ್ ವ್ಯಾಪಾರ ಜೋರು:

ಹೆಲ್ಮೆಟ್ ಕಡ್ಡಾಯಗೊಳಿಸುತ್ತಿದ್ದಂತೆ ಜಿಲ್ಲಾಕೇಂದ್ರದಲ್ಲಿ ಹೆಲ್ಮೆಟ್ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಜೋಡಿ ರಸ್ತೆ, ಸತ್ತಿ ರಸ್ತೆ, ಗುಂಡ್ಲುಪೇಟೆ ವೃತ್ತ, ರಾಮಸಮುದ್ರದ ರಸ್ತೆಗಳಲ್ಲಿ ಹೆಲ್ಮೆಟ್ ವ್ಯಾಪಾರಿಗಳು ಟೆಂಟ್ ಹಾಕಿದ್ದಾರೆ. ಹೆಲ್ಮೆಟ್​​ಗೆ ಬೇಡಿಕೆ ಸೃಷ್ಟಿಯಾಗಿರುವುದರಿಂದ ಜನರಿಂದ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.

Intro:ನಾಳೆಯಿಂದ ಗಡಿಜಿಲ್ಲೆಯಲ್ಲಿ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ: ತಪ್ಪಿದರೇ ಬೀಳತ್ತೆ ೧ ಸಾವಿರ ರೂ. ದಂಡ!


ಚಾಮರಾಜನಗರ: ಬೈಕ್ ಸವಾರರು ಅಪಘಾತದಲ್ಲಿ ಮೃತಪಡುತ್ತಿರುವುದು ಮತ್ತು ಗಂಭೀರವಾಗಿ ಗಾಯಗೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ ಚಾಮರಾಜನಗರ ಜಿಲ್ಲಾದ್ಯಂತ ಜು.೧ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.

Body:ಈ ಕುರಿತು ಕಳೆದ ಮೂರು ದಿನದಿಂದ ಜಿಲ್ಲಾ ಪೊಲೀಸ್ ಇಲಾಖೆ ಸಾಕಷ್ಟು ಪ್ರಚಾರ ನಡೆಸಿದ್ದು ಹೆಲ್ಮೆಟ್ ಧರಿಸದಿದ್ದಲ್ಲಿ ೧ ಸಾವಿರ ರೂ. ದಂಡ ವಿಧಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದೆ.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಈಟಿವಿಯೊಂದಿಗೆ ಮಾತನಾಡಿ, ಹೆಲ್ಮೆಟ್ ಧಾರಣೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಜಿಲ್ಲೆಯ ಅಪರಾಧ ವರದಿ ಗಮನಿಸಿದಾಗ ಕೊಲೆ, ಹಲ್ಲೆಯಾಗುವರಿಗಿಂತ ಹೆಚ್ಚು ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಸಂಖ್ಯೆ ಹೆಚ್ಚಿದೆ. ಹೊಸ ನಿಯಮದಂತೆ ಜು.೧ರಿಂದ ದಂಡ ವಿಧಿಸಲಾಗಲಿದ್ದು ಬೈಕ್ ಸವಾರರು ಮತ್ತು ಆಟೋ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸಿ ಸಂಯಮ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಹೆಲ್ಮೆಟ್ ವ್ಯಾಪಾರ ಜೋರು:

ಹೆಲ್ಮೆಟ್ ಕಡ್ಡಾಯಗೊಳಿಸುತ್ತಿದ್ದಂತೆ ಜಿಲ್ಲಾಕೇಂದ್ರದಲ್ಲಿ ಹೆಲ್ಮೆಟ್ ವ್ಯಾಪಾರ ಜೋರಾಗಿ ನಡೆಯುತ್ತಿದೆ. ಜೋಡಿ ರಸ್ತೆ, ಸತ್ತಿ ರಸ್ತೆ, ಗುಂಡ್ಲುಪೇಟೆ ವೃತ್ತ, ರಾಮಸಮುದ್ರದ ರಸ್ತೆಗಳಲ್ಲಿ ಹೆಲ್ಮೆಟ್ ವ್ಯಾಪಾರಿಗಳು ಟೆಂಟ್ ಹಾಕಿದ್ದಾರೆ.

Conclusion:ಹೆಲ್ಮೆಟ್ ಗೆ ಬೇಡಿಕೆ ಸೃಷ್ಟಿಯಾಗಿರುವುದರಿಂದ ಜನರಿಂದ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿದೆ.
Last Updated : Jun 30, 2019, 4:07 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.