ETV Bharat / state

ಹೈಕೋರ್ಟ್​ನಲ್ಲಿ ಮೇಲ್ಮನವಿಯೂ ವಜಾ: ಶಾಸಕ ಎನ್​.ಮಹೇಶ್ ಬಣದ 7 ನಗರಸಭಾ ಸದಸ್ಯರು ಅನರ್ಹ

author img

By

Published : Jun 14, 2022, 8:09 PM IST

ಈ ಹಿಂದೆ ಜಿಲ್ಲಾಧಿಕಾರಿಗಳ ಆದೇಶವನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್​​ ಆದೇಶ ಪ್ರಶ್ನಿಸಿ ಕೊಳ್ಳೇಗಾಲ ನಗರಸಭೆಯ ಏಳು ಸದಸ್ಯರು ಸಲ್ಲಿಸಿದ್ದ ಮೇಲ್ಮನವಿಯೂ ವಜಾಗೊಂಡಿದೆ. ಈ ಮೂಲಕ ಏಳು ಜನರೂ ತಮ್ಮ ಸದಸ್ಯ ಸ್ಥಾನವನ್ನು ಕಳೆದುಕೊಂಡಂತಾಗಿದೆ.

high-court-dismissed-the-appeal-of-7-kollegala-cmc-members-on-disqualifies
ಹೈಕೋರ್ಟ್​ನಲ್ಲಿ ಮೇಲ್ಮನವಿಯೂ ವಜಾ: ಶಾಸಕ ಎನ್​.ಮಹೇಶ್ ಬಣದ 7 ನಗರಸಭಾ ಸದಸ್ಯರು ಅನರ್ಹ

ಚಾಮರಾಜನಗರ: ಬಹುಜನ ಸಮಾಜವಾದಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಕಾರಣಕ್ಕಾಗಿ ಅನರ್ಹಗೊಂಡ ಕೊಳ್ಳೇಗಾಲ ನಗರಸಭೆಯ ಏಳು ಮಂದಿ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ಹೈಕೋರ್ಟ್​​ನಲ್ಲಿ ವಜಾಗೊಂಡಿದೆ. ತಮ್ಮನ್ನು ನಗರಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕೊಳ್ಳೇಗಾಲ ನಗರಸಭೆ ಸದಸ್ಯರಾಗಿದ್ದ ಪವಿತ್ರಾ ಹಾಗೂ ಇತರ ಆರು ಮಂದಿ ಹೈಕೋರ್ಟ್​​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠವು ಜಿಲ್ಲಾಧಿಕಾರಿ ಆದೇಶವನ್ನು ಎತ್ತಿ ಹಿಡಿದಿತ್ತು.

ಆದರೆ, ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಕುರಿತು ಸುದೀರ್ಘ ವಿಚಾರಣೆಯ ಬಳಿಕ ಹೈಕೋರ್ಟ್ ವಿಭಾಗೀಯ ಪೀಠವು ಮೇಲ್ಮನವಿ ವಜಾಗೊಳಿಸಿ, ಜಿಲ್ಲಾಧಿಕಾರಿ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದೆ.

ರಾಜಕೀಯ ಜಿದ್ದಾಜಿದ್ದಿ: ಬಿಎಸ್​ಪಿಯಿಂದ ಶಾಸಕ ಎನ್.ಮಹೇಶ್ ಉಚ್ಚಾಟನೆಗೊಂಡ ಬಳಿಕ ಕೊಳ್ಳೇಗಾಲ ನಗರಸಭೆ ಚುನಾವಣೆಯಲ್ಲಿ 'ಆನೆ' ಗುರುತಿನಿಂದ ಗೆದ್ದಿದ್ದ 9 ಸದಸ್ಯರಲ್ಲಿ ಏಳು ಮಂದಿ ಸದಸ್ಯರು ಶಾಸಕ ಮಹೇಶ್ ಬಣ ಸೇರಿಕೊಂಡಿದ್ದರು. ಬಳಿಕ 2020ರ ಅ.29ರಂದು ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಎಸ್​ಪಿ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು.

ಇದನ್ನೂ ಓದಿ: ವಿಪ್ ಉಲ್ಲಂಘನೆ : ಕೊಳ್ಳೇಗಾಲ ನಗರಸಭೆ ಸದಸ್ಯರನ್ನು ಅನರ್ಹಗೊಳಿಸಿದ್ದ ಡಿಸಿ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಇದನ್ನು ಉಲ್ಲಂಘಿಸಿದ ಮಹೇಶ್ ಬಣದ ಬಿಎಸ್​​​ಪಿ​ ಏಳು ಮಂದಿ ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು. ಪಕ್ಷದ ವಿಪ್ ಉಲ್ಲಂಘಿಸಿದ್ದ ಸದಸ್ಯರನ್ನು ಹುದ್ದೆಯಿಂದ ಅನರ್ಹಗೊಳಿಸುವಂತೆ ಕೋರಿ ಬಿಎಸ್​​​​ಪಿ ನಗರಸಭೆ ಸದಸ್ಯೆ ಜಿ.ಜಯಮೇರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ್ದ ಅಂದಿನ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಕಾಯ್ದೆ 1987ರ ಅಡಿ ಏಳು ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಕಳೆದ ಸೆ.6ರಂದು ಆದೇಶಿಸಿದ್ದರು.


ಜಿಲ್ಲಾಧಿಕಾರಿಯ ಈ ಆದೇಶದಿಂದ ನಗರಸಭೆ ಸದಸ್ಯಸ್ಥಾನ ಕಳೆದುಕೊಂಡ ಗಂಗಮ್ಮ, ನಾಗಮಣಿ, ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ನಾಸಿರ್ ಷರೀಫ್ ಹಾಗೂ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆದು 2021ರ ಸೆ.25ರಂದು ಜಿಲ್ಲಾಧಿಕಾರಿ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ಮೇಲ್ಮನವಿಯಲ್ಲೂ ಸೋಲುಂಟಾಗಿದೆ.

ಇದನ್ನೂ ಓದಿ: ಇಬ್ಬರು ಶಾಸಕರ ಸದಸ್ಯತ್ವ ರದ್ದುಪಡಿಸಲು ನಾಳೆ ಸ್ಪೀಕರ್​ಗೆ ಜೆಡಿಎಸ್‍ ದೂರು

ಚಾಮರಾಜನಗರ: ಬಹುಜನ ಸಮಾಜವಾದಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಕಾರಣಕ್ಕಾಗಿ ಅನರ್ಹಗೊಂಡ ಕೊಳ್ಳೇಗಾಲ ನಗರಸಭೆಯ ಏಳು ಮಂದಿ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ಹೈಕೋರ್ಟ್​​ನಲ್ಲಿ ವಜಾಗೊಂಡಿದೆ. ತಮ್ಮನ್ನು ನಗರಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕೊಳ್ಳೇಗಾಲ ನಗರಸಭೆ ಸದಸ್ಯರಾಗಿದ್ದ ಪವಿತ್ರಾ ಹಾಗೂ ಇತರ ಆರು ಮಂದಿ ಹೈಕೋರ್ಟ್​​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠವು ಜಿಲ್ಲಾಧಿಕಾರಿ ಆದೇಶವನ್ನು ಎತ್ತಿ ಹಿಡಿದಿತ್ತು.

ಆದರೆ, ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಕುರಿತು ಸುದೀರ್ಘ ವಿಚಾರಣೆಯ ಬಳಿಕ ಹೈಕೋರ್ಟ್ ವಿಭಾಗೀಯ ಪೀಠವು ಮೇಲ್ಮನವಿ ವಜಾಗೊಳಿಸಿ, ಜಿಲ್ಲಾಧಿಕಾರಿ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದೆ.

ರಾಜಕೀಯ ಜಿದ್ದಾಜಿದ್ದಿ: ಬಿಎಸ್​ಪಿಯಿಂದ ಶಾಸಕ ಎನ್.ಮಹೇಶ್ ಉಚ್ಚಾಟನೆಗೊಂಡ ಬಳಿಕ ಕೊಳ್ಳೇಗಾಲ ನಗರಸಭೆ ಚುನಾವಣೆಯಲ್ಲಿ 'ಆನೆ' ಗುರುತಿನಿಂದ ಗೆದ್ದಿದ್ದ 9 ಸದಸ್ಯರಲ್ಲಿ ಏಳು ಮಂದಿ ಸದಸ್ಯರು ಶಾಸಕ ಮಹೇಶ್ ಬಣ ಸೇರಿಕೊಂಡಿದ್ದರು. ಬಳಿಕ 2020ರ ಅ.29ರಂದು ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಎಸ್​ಪಿ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು.

ಇದನ್ನೂ ಓದಿ: ವಿಪ್ ಉಲ್ಲಂಘನೆ : ಕೊಳ್ಳೇಗಾಲ ನಗರಸಭೆ ಸದಸ್ಯರನ್ನು ಅನರ್ಹಗೊಳಿಸಿದ್ದ ಡಿಸಿ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಇದನ್ನು ಉಲ್ಲಂಘಿಸಿದ ಮಹೇಶ್ ಬಣದ ಬಿಎಸ್​​​ಪಿ​ ಏಳು ಮಂದಿ ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು. ಪಕ್ಷದ ವಿಪ್ ಉಲ್ಲಂಘಿಸಿದ್ದ ಸದಸ್ಯರನ್ನು ಹುದ್ದೆಯಿಂದ ಅನರ್ಹಗೊಳಿಸುವಂತೆ ಕೋರಿ ಬಿಎಸ್​​​​ಪಿ ನಗರಸಭೆ ಸದಸ್ಯೆ ಜಿ.ಜಯಮೇರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ್ದ ಅಂದಿನ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ, ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಕಾಯ್ದೆ 1987ರ ಅಡಿ ಏಳು ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಕಳೆದ ಸೆ.6ರಂದು ಆದೇಶಿಸಿದ್ದರು.


ಜಿಲ್ಲಾಧಿಕಾರಿಯ ಈ ಆದೇಶದಿಂದ ನಗರಸಭೆ ಸದಸ್ಯಸ್ಥಾನ ಕಳೆದುಕೊಂಡ ಗಂಗಮ್ಮ, ನಾಗಮಣಿ, ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ನಾಸಿರ್ ಷರೀಫ್ ಹಾಗೂ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ ನಡೆದು 2021ರ ಸೆ.25ರಂದು ಜಿಲ್ಲಾಧಿಕಾರಿ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ಮೇಲ್ಮನವಿಯಲ್ಲೂ ಸೋಲುಂಟಾಗಿದೆ.

ಇದನ್ನೂ ಓದಿ: ಇಬ್ಬರು ಶಾಸಕರ ಸದಸ್ಯತ್ವ ರದ್ದುಪಡಿಸಲು ನಾಳೆ ಸ್ಪೀಕರ್​ಗೆ ಜೆಡಿಎಸ್‍ ದೂರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.