ETV Bharat / state

ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ: ಸಚಿವ ನಾರಾಯಣ ಗೌಡ - ಸಚಿವ ನಾರಾಯಣಗೌಡ

ರಾಗಿಣಿಯನ್ನು ಚುನಾವಣಾ ಪ್ರಚಾರಕ್ಕೆ ನಾನು ಕರೆಸಿಲ್ಲ. ಅವರಾಗೇ ಬಂದರೆ ಏನು ಮಾಡಲು ಆಗುತ್ತದೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

ಸಚಿವ ನಾರಾಯಣ ಗೌಡ ಸ್ಪಷ್ಟನೆ
ಸಚಿವ ನಾರಾಯಣ ಗೌಡ ಸ್ಪಷ್ಟನೆ
author img

By

Published : Sep 7, 2020, 12:53 PM IST

ಚಾಮರಾಜನಗರ: ಚಿತ್ರರಂಗಕ್ಕೆ ಮತ್ತು ನನಗೆ ಹೆಚ್ಚಿನ ಸಂಬಂಧ ಇಲ್ಲ. ನಟಿ ರಾಗಿಣಿಯನ್ನು ಚುನಾವಣಾ ಪ್ರಚಾರಕ್ಕೆ ನಾವು ಕರೆಸಿರಲಿಲ್ಲ ಎಂದು ಸಚಿವ ನಾರಾಯಣ ಗೌಡ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಚಿತ್ರರಂಗದಲ್ಲಿ ಕೆಲಸ ಮಾಡುವ ‌ನನ್ನ ಸ್ನೇಹಿತರು ಪ್ರಚಾರಕ್ಕೆ ಕರೆಸಿದ್ದರು. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಶಿವಪ್ರಕಾಶ್ ರಾಗಿಣಿ ಜೊತೆ ಮೂರು ವರ್ಷ ಕಾಲ ಕೆಲಸ ಮಾಡಿದ್ದು, ಅವರ ಹೆಸರು ಸಹ ಕೇಳಿ ಬರುತ್ತಿದೆ. ಇದರ ಬಗ್ಗೆ ಸಹ ನನಗೆ ಗೊತ್ತಿಲ್ಲವೆಂದು ಸ್ಪಷ್ಟಪಡಿಸಿದರು.

ನನ್ನ ಚುನಾವಣಾ ಪ್ರಚಾರಕ್ಕೆ ರಾಗಿಣಿಯನ್ನು ಕರೆಸಿರಲಿಲ್ಲ. ಪ್ರಚಾರಕ್ಕೆ ಬಂದ್ರೆ ನಾವೇನೂ ಮಾಡಲು ಆಗುತ್ತದೆ. ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರು ಇಲ್ಲ. ಸುಖಾಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸಲಾಗ್ತಿದೆ ಎಂದರು.

ಮಂಡ್ಯದ ಹಳ್ಳಿಗಳಲ್ಲಿ ಗಾಂಜಾ ಮಾರಾಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಾಗಮಂಗಲದಲ್ಲಿ ಗಾಂಜಾ ಮಾರಾಟ ನಡೆಯುತ್ತಿದ್ದರೆ ಅಂತವರನ್ನು ಹಿಡಿದು ಪೊಲೀಸರಿಗೊಪ್ಪಿಸಿ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಚಾಮರಾಜನಗರ: ಚಿತ್ರರಂಗಕ್ಕೆ ಮತ್ತು ನನಗೆ ಹೆಚ್ಚಿನ ಸಂಬಂಧ ಇಲ್ಲ. ನಟಿ ರಾಗಿಣಿಯನ್ನು ಚುನಾವಣಾ ಪ್ರಚಾರಕ್ಕೆ ನಾವು ಕರೆಸಿರಲಿಲ್ಲ ಎಂದು ಸಚಿವ ನಾರಾಯಣ ಗೌಡ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಚಿತ್ರರಂಗದಲ್ಲಿ ಕೆಲಸ ಮಾಡುವ ‌ನನ್ನ ಸ್ನೇಹಿತರು ಪ್ರಚಾರಕ್ಕೆ ಕರೆಸಿದ್ದರು. ರಾಗಿಣಿ ಈ ರೀತಿ ಎಂದು ಗೊತ್ತಿರಲಿಲ್ಲ. ಶಿವಪ್ರಕಾಶ್ ರಾಗಿಣಿ ಜೊತೆ ಮೂರು ವರ್ಷ ಕಾಲ ಕೆಲಸ ಮಾಡಿದ್ದು, ಅವರ ಹೆಸರು ಸಹ ಕೇಳಿ ಬರುತ್ತಿದೆ. ಇದರ ಬಗ್ಗೆ ಸಹ ನನಗೆ ಗೊತ್ತಿಲ್ಲವೆಂದು ಸ್ಪಷ್ಟಪಡಿಸಿದರು.

ನನ್ನ ಚುನಾವಣಾ ಪ್ರಚಾರಕ್ಕೆ ರಾಗಿಣಿಯನ್ನು ಕರೆಸಿರಲಿಲ್ಲ. ಪ್ರಚಾರಕ್ಕೆ ಬಂದ್ರೆ ನಾವೇನೂ ಮಾಡಲು ಆಗುತ್ತದೆ. ರಾಗಿಣಿ ಪರವಾಗಿ ನಮ್ಮ ಪಕ್ಷದಲ್ಲಿ ಯಾರು ಇಲ್ಲ. ಸುಖಾಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸಲಾಗ್ತಿದೆ ಎಂದರು.

ಮಂಡ್ಯದ ಹಳ್ಳಿಗಳಲ್ಲಿ ಗಾಂಜಾ ಮಾರಾಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಾಗಮಂಗಲದಲ್ಲಿ ಗಾಂಜಾ ಮಾರಾಟ ನಡೆಯುತ್ತಿದ್ದರೆ ಅಂತವರನ್ನು ಹಿಡಿದು ಪೊಲೀಸರಿಗೊಪ್ಪಿಸಿ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.