ಚಾಮರಾಜನಗರ : ಶಾಕಸ ಎನ್. ಮಹೇಶ್ ಅವರು ಬಿಜೆಪಿ ಸೇರುತ್ತಾರೆ ಎಂದು ರಾಜಕೀಯ ವಲಯದಲ್ಲಿ ಆಗಾಗ ಕೇಳಿ ಬರುತ್ತಿರುವ ಹೇಳಿಕೆಗಳಿಗೆ ಸ್ವತಃ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರೇ ಬಿಜೆಪಿ ಸೇರ್ಪಡೆಯ ಬಗ್ಗೆ ಪಂಚಾಯತ್ ಅಧ್ಯಕ್ಷ ಚುನಾವಣೆ ಪ್ರಕ್ರಿಯೆ ಬಳಿಕ ಪಕ್ಷ ಸೇರ್ಪಡೆಯ ದಿನಾಂಕ ತಿಳಿಸುವುದಾಗಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಗ್ರಾಪಂ ಚುನಾವಣೆ ಮುಗಿದಿದೆ. ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಇರುವುದರಿಂದ ಈ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಿಜೆಪಿ ಸೇರುವ ದಿನವನ್ನು ತಿಳಿಸುತ್ತೇನೆ ಎಂದು ತಿಳಿಸಿದರು.
ಓದಿ: ಬಿಎಸ್ಪಿಗೆ ದೊಡ್ಡ ನಮಸ್ಕಾರ, ನನ್ನ ಶಕ್ತಿ ಡಿಸೆಂಬರ್ ಬಳಿಕ ತೋರಿಸ್ತೇನೆ.. ಶಾಸಕ ಎನ್ ಮಹೇಶ್
ಸಂಪುಟ ವಿಸ್ತರಣಾ ಪಟ್ಟಿಯಲ್ಲಿ ಎನ್.ಮಹೇಶ್ ಅವರ ಹೆಸರಿದ್ದು, ಸಚಿವರಾಗುವ ಜೊತೆಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಾರೆ ಎಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಮಾತಿಗೆ ಉತ್ತರಿಸಿದ ಅವರು, ಸಚಿವ ಸ್ಥಾನದ ಜತೆಗೆ ಜಿಲ್ಲಾ ಉಸ್ತುವಾರಿಯೂ ದೊರೆತರೆ ಅದನ್ನು ಸ್ವೀಕರಿಸುತ್ತೇನೆ. ಮತ್ತು ನಾನು ಸರ್ಕಾರದ ಜೊತೆ ಇರುತ್ತೇನೆ ಎಂದರು.