ETV Bharat / state

ಮನೆ ಇಲ್ಲದೇ ಮದುವೆಗೆ ಹೆಣ್ಣು ಕೊಡ್ತಿಲ್ಲ: ಚಾಮರಾಜನಗರದ ಜನತಾ ದರ್ಶನದಲ್ಲಿ ವ್ಯಕ್ತಿ ಅಳಲು

author img

By ETV Bharat Karnataka Team

Published : Sep 25, 2023, 5:55 PM IST

ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅಧ್ಯಕ್ಷತೆಯಲ್ಲಿಂದು ಜನತಾ ದರ್ಶನ ಕಾರ್ಯಕ್ರಮ ನಡೆಯಿತು.

janata-darshana-in-chamarajanagar
ಮನೆ ಇಲ್ಲದೇ ಮದುವೆಗೆ ಹೆಣ್ಣು ಕೊಡ್ತಿಲ್ಲ: ಚಾಮರಾಜನಗರದ ಜನತಾ ದರ್ಶನದಲ್ಲಿ ವ್ಯಕ್ತಿ ಅಳಲು
ಚಾಮರಾಜನಗರದ ಜನತಾ ದರ್ಶನದಲ್ಲಿ ವ್ಯಕ್ತಿ ಅಳಲು

ಚಾಮರಾಜನಗರ: ಜಿಲ್ಲೆಯ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿಂದು ಜನತಾ ದರ್ಶನ ಕಾರ್ಯಕ್ರಮ ನಡೆಯಿತು. 280ಕ್ಕಿಂತಲೂ ಹೆಚ್ಚು ಜನರು ಸಚಿವರಿಗೆ ಅಹವಾಲು ಸಲ್ಲಿಸಿ ಅಧಿಕಾರಿಗಳ ವಿರುದ್ಧ ದೂರುಗಳ ಸುರಿಮಳೆಗೈದರು. ಈ ವೇಳೆ, ರಸ್ತೆ ಅಗಲೀಕರಣಕ್ಕಾಗಿ ಸ್ಥಳ ಕೊಟ್ಟು 6 ವರ್ಷಗಳಾದರೂ ಪರಿಹಾರ ಸಿಗದಿದ್ದಕ್ಕೆ ನಾಸಿರ್ ಎಂಬವರು ತೀವ್ರ ಅಸಮಾಧಾನ ಹೊರಹಾಕಿದರು.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಮನೆ ಒಡೆದು ಹಾಕಿದ್ದೀರಿ, ಆದರೆ 6 ವರ್ಷಗಳಾದರೂ ಪರಿಹಾರ ಸಿಕ್ಕಿಲ್ಲ. ಹಣ ಇಲ್ಲದೇ ಮನೆ ಕಟ್ಟಿಕೊಳ್ಳಲಾಗುತ್ತಿಲ್ಲ. ನನಗೆ 40 ವರ್ಷ ಆಗಿದೆ, ಯಾರು ನನಗೆ ಹೆಣ್ಣು ಕೊಡುತ್ತಿಲ್ಲ. ಎಲ್ಲಿ ಹೋದರೂ ಮನೆ ಇದೆಯಾ ಎಂದು ಕೇಳುತ್ತಾರೆ. ಮದುವೆಯಾದ ಮೇಲೆ ಹೆಂಡತಿಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿಯಾ ಅಂತಾ ಪ್ರಶ್ನಿಸುತ್ತಾರೆ ಎಂದು ಅಳಲು ತೋಡಿಕೊಂಡರು. ಪರಿಹಾರ ನೀಡಲಾಗದಿದ್ದರೇ‌ ದಯಾ ಮರಣ ಕೊಡಿ ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಶಾಸಕ ಸಿ ಪುಟ್ಟರಂಗಶೆಟ್ಟಿ ಮಾತನಾಡಿ ಪ್ರಕರಣ ಕೋರ್ಟ್​ನಲ್ಲಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.

janata-darshana programme in-chamarajanagar
ಜನತಾ ದರ್ಶನದಲ್ಲಿ 280ಕ್ಕೂ ಹೆಚ್ಚು ಜನರು ಭಾಗಿ

ತಿಂಗಳಿಗೆ 2 ರೂ. ಸಂಬಳ: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ರಾಮಸಮುದ್ರದದ ಹರಳುಕೋಟೆ ಜನಾರ್ದನ ದೇಗುಲದ ಅರ್ಚಕ ಅನಂತ ಪ್ರಸಾದ್ ಮನವಿ ಸಲ್ಲಿಸಿ, ತನಗೆ ಈಗಲೂ ತಿಂಗಳಿಗೆ ಅತಿ ಕಡಿಮೆ ವೇತನ ಕೊಡಲಾಗುತ್ತಿದೆ. ಸರ್ಕಾರ ಕೊಡುವ ಹಣ ಅಗರಬತ್ತಿಗೂ ಸಾಲುತ್ತಿಲ್ಲ ಎಂದರು.‌ ಇದಕ್ಕೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ರೈತ ಸಂಘಟನೆಯ ಸದಸ್ಯರು ಮನವಿ ಸಲ್ಲಿಸಿ ನಿತ್ಯ 7 ಗಂಟೆ ಸಮರ್ಪಕ ವಿದ್ಯುತ್ ನೀಡಬೇಕು, ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಣೆ ಮಾಡಬೇಕು. ರೈತರ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು. ಸಚಿವ ಕೆ ವೆಂಕಟೇಶ್ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಅಧಿಕಾರಿಗಳು ಕೇವಲ ಬಾಯಿ ಮಾತಿನಲ್ಲಿ ಕ್ರಮ ವಹಿಸುತ್ತೇನೆ, ಪರಿಶೀಲಿಸುತ್ತೇನೆ ಎನ್ನುವುದನ್ನು ಬಿಟ್ಟು ಮುಂದಿನ ತಿಂಗಳೊಳಗೆ ಎಲ್ಲವಕ್ಕೂ ಪರಿಹಾರ ಸಿಗಬೇಕೆಂದು ಸಚಿವರು ಸೂಚಿಸಿದರು.

ಜನತಾ ದರ್ಶನದಿಂದ ಆಡಳಿತದಲ್ಲಿ ಹಿಡಿತ: ಜನತಾ ದರ್ಶನ ಕಾರ್ಯಕ್ರಮವು ಜನ ಸಾಮಾನ್ಯರ ಸಮಸ್ಯೆ ಅರಿತು ಆಡಳಿತದಲ್ಲಿ ಹಿಡಿತ ಹೊಂದಲು ಸಹಕಾರಿ ಆಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನನಗೆ ಹೊಸದಲ್ಲ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, "ಅಧಿಕಾರಿಗಳೇ ನಿಮ್ಮಲ್ಲಿಗೆ" ಎಂಬ ಒಂದು ಕಾರ್ಯಕ್ರಮ ಮಾಡಿದ್ದರು. ನಾನು ಇದನ್ನು ಸೊರಬದಲ್ಲಿ ನಡೆಸಿದ್ದೆ. ಅಧಿಕಾರಿಗಳು ತಾಲೂಕು ಮಟ್ಟಕ್ಕೆ ಹೋಗಬೇಕೆಂದು ಈ ಕಾರ್ಯಕ್ರಮ ನಡೆಸಿದ್ದರು. ಇಂದಿನ ಜನತಾ ದರ್ಶನ ಅದರ ಮುಂದುವರೆದ ಭಾಗ ಎಂದು ಹೇಳಿದರು.

ಇದನ್ನೂ ಓದಿ: ಇದು ಸಾರಾಯಿ ಗ್ಯಾರೆಂಟಿ ಸರ್ಕಾರ: ಬಸವರಾಜ ಬೊಮ್ಮಾಯಿ

ಚಾಮರಾಜನಗರದ ಜನತಾ ದರ್ಶನದಲ್ಲಿ ವ್ಯಕ್ತಿ ಅಳಲು

ಚಾಮರಾಜನಗರ: ಜಿಲ್ಲೆಯ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿಂದು ಜನತಾ ದರ್ಶನ ಕಾರ್ಯಕ್ರಮ ನಡೆಯಿತು. 280ಕ್ಕಿಂತಲೂ ಹೆಚ್ಚು ಜನರು ಸಚಿವರಿಗೆ ಅಹವಾಲು ಸಲ್ಲಿಸಿ ಅಧಿಕಾರಿಗಳ ವಿರುದ್ಧ ದೂರುಗಳ ಸುರಿಮಳೆಗೈದರು. ಈ ವೇಳೆ, ರಸ್ತೆ ಅಗಲೀಕರಣಕ್ಕಾಗಿ ಸ್ಥಳ ಕೊಟ್ಟು 6 ವರ್ಷಗಳಾದರೂ ಪರಿಹಾರ ಸಿಗದಿದ್ದಕ್ಕೆ ನಾಸಿರ್ ಎಂಬವರು ತೀವ್ರ ಅಸಮಾಧಾನ ಹೊರಹಾಕಿದರು.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಮನೆ ಒಡೆದು ಹಾಕಿದ್ದೀರಿ, ಆದರೆ 6 ವರ್ಷಗಳಾದರೂ ಪರಿಹಾರ ಸಿಕ್ಕಿಲ್ಲ. ಹಣ ಇಲ್ಲದೇ ಮನೆ ಕಟ್ಟಿಕೊಳ್ಳಲಾಗುತ್ತಿಲ್ಲ. ನನಗೆ 40 ವರ್ಷ ಆಗಿದೆ, ಯಾರು ನನಗೆ ಹೆಣ್ಣು ಕೊಡುತ್ತಿಲ್ಲ. ಎಲ್ಲಿ ಹೋದರೂ ಮನೆ ಇದೆಯಾ ಎಂದು ಕೇಳುತ್ತಾರೆ. ಮದುವೆಯಾದ ಮೇಲೆ ಹೆಂಡತಿಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿಯಾ ಅಂತಾ ಪ್ರಶ್ನಿಸುತ್ತಾರೆ ಎಂದು ಅಳಲು ತೋಡಿಕೊಂಡರು. ಪರಿಹಾರ ನೀಡಲಾಗದಿದ್ದರೇ‌ ದಯಾ ಮರಣ ಕೊಡಿ ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಶಾಸಕ ಸಿ ಪುಟ್ಟರಂಗಶೆಟ್ಟಿ ಮಾತನಾಡಿ ಪ್ರಕರಣ ಕೋರ್ಟ್​ನಲ್ಲಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.

janata-darshana programme in-chamarajanagar
ಜನತಾ ದರ್ಶನದಲ್ಲಿ 280ಕ್ಕೂ ಹೆಚ್ಚು ಜನರು ಭಾಗಿ

ತಿಂಗಳಿಗೆ 2 ರೂ. ಸಂಬಳ: ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟ ರಾಮಸಮುದ್ರದದ ಹರಳುಕೋಟೆ ಜನಾರ್ದನ ದೇಗುಲದ ಅರ್ಚಕ ಅನಂತ ಪ್ರಸಾದ್ ಮನವಿ ಸಲ್ಲಿಸಿ, ತನಗೆ ಈಗಲೂ ತಿಂಗಳಿಗೆ ಅತಿ ಕಡಿಮೆ ವೇತನ ಕೊಡಲಾಗುತ್ತಿದೆ. ಸರ್ಕಾರ ಕೊಡುವ ಹಣ ಅಗರಬತ್ತಿಗೂ ಸಾಲುತ್ತಿಲ್ಲ ಎಂದರು.‌ ಇದಕ್ಕೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ರೈತ ಸಂಘಟನೆಯ ಸದಸ್ಯರು ಮನವಿ ಸಲ್ಲಿಸಿ ನಿತ್ಯ 7 ಗಂಟೆ ಸಮರ್ಪಕ ವಿದ್ಯುತ್ ನೀಡಬೇಕು, ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಣೆ ಮಾಡಬೇಕು. ರೈತರ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು. ಸಚಿವ ಕೆ ವೆಂಕಟೇಶ್ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಅಧಿಕಾರಿಗಳು ಕೇವಲ ಬಾಯಿ ಮಾತಿನಲ್ಲಿ ಕ್ರಮ ವಹಿಸುತ್ತೇನೆ, ಪರಿಶೀಲಿಸುತ್ತೇನೆ ಎನ್ನುವುದನ್ನು ಬಿಟ್ಟು ಮುಂದಿನ ತಿಂಗಳೊಳಗೆ ಎಲ್ಲವಕ್ಕೂ ಪರಿಹಾರ ಸಿಗಬೇಕೆಂದು ಸಚಿವರು ಸೂಚಿಸಿದರು.

ಜನತಾ ದರ್ಶನದಿಂದ ಆಡಳಿತದಲ್ಲಿ ಹಿಡಿತ: ಜನತಾ ದರ್ಶನ ಕಾರ್ಯಕ್ರಮವು ಜನ ಸಾಮಾನ್ಯರ ಸಮಸ್ಯೆ ಅರಿತು ಆಡಳಿತದಲ್ಲಿ ಹಿಡಿತ ಹೊಂದಲು ಸಹಕಾರಿ ಆಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ನನಗೆ ಹೊಸದಲ್ಲ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, "ಅಧಿಕಾರಿಗಳೇ ನಿಮ್ಮಲ್ಲಿಗೆ" ಎಂಬ ಒಂದು ಕಾರ್ಯಕ್ರಮ ಮಾಡಿದ್ದರು. ನಾನು ಇದನ್ನು ಸೊರಬದಲ್ಲಿ ನಡೆಸಿದ್ದೆ. ಅಧಿಕಾರಿಗಳು ತಾಲೂಕು ಮಟ್ಟಕ್ಕೆ ಹೋಗಬೇಕೆಂದು ಈ ಕಾರ್ಯಕ್ರಮ ನಡೆಸಿದ್ದರು. ಇಂದಿನ ಜನತಾ ದರ್ಶನ ಅದರ ಮುಂದುವರೆದ ಭಾಗ ಎಂದು ಹೇಳಿದರು.

ಇದನ್ನೂ ಓದಿ: ಇದು ಸಾರಾಯಿ ಗ್ಯಾರೆಂಟಿ ಸರ್ಕಾರ: ಬಸವರಾಜ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.