ETV Bharat / state

ಧ್ರುವನಾರಾಯಣ್​ಗೆ ನಮ್ಮ ಬೆಂಬಲ...... ಯಾವುದೇ ಕಾರಣಕ್ಕೂ ಅನುಮಾನ ಬೇಡ.. ಜೆಡಿಎಸ್​ ಅಭಯ

ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಚಾಮರಾಜನಗರ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಮರಾಜು ಹೇಳಿಕೆ ನೀಡಿದ್ದಾರೆ. ಸಿಎಂ ಬಂದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿ ಸಮಾವೇಶ ನಡೆಸುತ್ತೇವೆಂದು ಭರವಸೆ ನೀಡಿದ್ದಾರೆ.

author img

By

Published : Apr 4, 2019, 6:03 PM IST

ಜೆಡಿಎಸ್ ಸುದ್ದಿಗೋಷ್ಠಿ

ಚಾಮರಾಜನಗರ: ಕಾರ್ಯಕರ್ತರಿಗೆ ಯಾವುದೇ ಗೊಂದಲ ಬೇಡ, ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್​ ಅವರಿಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಚಾಮರಾಜನಗರ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಮರಾಜು ಹೇಳಿದರು.

ನಗರದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಮನೆ - ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕು, ಶೀಘ್ರವೇ ಪ್ರಚಾರದ ರೂಪುರೇಷೆ ಕುರಿತು ಮುಖಂಡರ ಸಭೆ ಕರೆಯಲಾಗುವುದು ಎಂದರು.

ಜೆಡಿಎಸ್ ಸುದ್ದಿಗೋಷ್ಠಿ

ಲೋಕಸಭೆಗೆ ಒಳಪಡುವ 8 ಕ್ಷೇತ್ರಗಳಲ್ಲಿ ಟಿ.ನರಸೀಪುರದಲ್ಲಿ ಜೆಡಿಎಸ್ ಶಾಸಕರಿದ್ದು, ಹನೂರಿನಲ್ಲೂ ಜೆಡಿಎಸ್ ಉತ್ತಮ ಮತಬ್ಯಾಂಕ್ ಒಳಗೊಂಡಿದೆ. ಇನ್ನು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಬರಬೇಕೆಂದು ಧ್ರುವನಾರಾಯಣ ಮನವಿ ಮಾಡಿಕೊಂಡಿದ್ದು, ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ. ಸಿಎಂ ಬಂದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿ ಸಮಾವೇಶ ನಡೆಸುತ್ತೇವೆ ಎಂದೂ ಅವರು ಇದೇ ವೇಳೆ ಮಾಹಿತಿ ನೀಡಿದರು.

ಚಾಮರಾಜನಗರ: ಕಾರ್ಯಕರ್ತರಿಗೆ ಯಾವುದೇ ಗೊಂದಲ ಬೇಡ, ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣ್​ ಅವರಿಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಚಾಮರಾಜನಗರ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಮರಾಜು ಹೇಳಿದರು.

ನಗರದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರು ಮನೆ - ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕು, ಶೀಘ್ರವೇ ಪ್ರಚಾರದ ರೂಪುರೇಷೆ ಕುರಿತು ಮುಖಂಡರ ಸಭೆ ಕರೆಯಲಾಗುವುದು ಎಂದರು.

ಜೆಡಿಎಸ್ ಸುದ್ದಿಗೋಷ್ಠಿ

ಲೋಕಸಭೆಗೆ ಒಳಪಡುವ 8 ಕ್ಷೇತ್ರಗಳಲ್ಲಿ ಟಿ.ನರಸೀಪುರದಲ್ಲಿ ಜೆಡಿಎಸ್ ಶಾಸಕರಿದ್ದು, ಹನೂರಿನಲ್ಲೂ ಜೆಡಿಎಸ್ ಉತ್ತಮ ಮತಬ್ಯಾಂಕ್ ಒಳಗೊಂಡಿದೆ. ಇನ್ನು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಬರಬೇಕೆಂದು ಧ್ರುವನಾರಾಯಣ ಮನವಿ ಮಾಡಿಕೊಂಡಿದ್ದು, ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ. ಸಿಎಂ ಬಂದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿ ಸಮಾವೇಶ ನಡೆಸುತ್ತೇವೆ ಎಂದೂ ಅವರು ಇದೇ ವೇಳೆ ಮಾಹಿತಿ ನೀಡಿದರು.

Intro:ಗೊಂದಲ ಬೇಡ ಸಂಸದ ಧ್ರುವಗೆ  ಜೆಡಿಎಸ್ ಬೆಂಬಲ: ಚಾ.ನಗರ ಜೆಡಿಎಸ್



ಚಾಮರಾಜನಗರ: ಕಾರ್ಯಕರ್ತರಿಗೆ ಯಾವುದೇ ಗೊಂದಲ ಬೇಡ, ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಆರ್.ಧ್ರುವನಾರಾಯಣಗೆ ಪಕ್ಷ ಸಂಪೂರ್ಣ ಬೆಂವಲ ನೀಡಲಿದೆ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಮರಾಜು ಹೇಳಿದರು.





Body:ನಗರದಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ನಮ್ಮ ಪಕ್ಷದ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಮೈತ್ರಿ ಅಭ್ಯರ್ಥಿಪರ ಪ್ರಚಾರ ನಡೆಸಬೇಕು, ಶೀಘ್ರವೇ ಪ್ರಚಾರದ ರೂಪು-ರೇಷೆ ಕುರಿತು ಮುಖಂಡರ ಸಭೆ ಕರೆಯಲಾಗುವುದು ಎಂದರು.


ಇನ್ನು, ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಚಾರಕ್ಕೆ ಬರಬೇಕೆಂದು ಧ್ರುವ ಕೇಳಿಕೊಂಡಿದ್ದು ಮುಖ್ಯಮಂತ್ರಿ ಬರುವ ಸಾಧ್ಯತೆ ಇದ್ದು ಸಿಎಂ ಬಂದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿ ಸಮಾವೇಶ ನಡೆಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.






Conclusion:ಲೋಕಸಭೆಗೆ ಒಳಪಡುವ ೮ ಕ್ಷೇತ್ರಗಳಲ್ಲಿ ಟಿ.ನರಸೀಪುರದಲ್ಲಿ ಜೆಡಿಎಸ್ ಶಾಸಕರಿದ್ದು, ಹನೂರಿನಲ್ಲೂ ಜೆಡಿಎಸ್ ಉತ್ತಮ ಮತಬ್ಯಾಂಕ್ ಒಳಗೊಂಡಿದೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.