ETV Bharat / state

ಮೇಲ್ಸೇತುವೆಗೆ ಜಲ್ಲಿಕಲ್ಲು ತುಂಬಿದ್ದ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಚಾಮರಾಜನಗರದ ಬೈಪಾಸ್ ರಸ್ತೆಯಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

author img

By

Published : Jul 26, 2021, 11:33 AM IST

chamarajanagar
ಮೇಲ್ಸೇತುವೆಗೆ ಜಲ್ಲಿಕಲ್ಲು ತುಂಬಿದ್ದ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಚಾಮರಾಜನಗರ: ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಗ್ರಾಮದ ಲಾರಿ ಮಾಲೀಕ ಮಹಾದೇವಪ್ಪ ಎಂಬುವವರ ಮಗ‌ ಸುರೇಶ್ (31) ಹಾಗೂ ಚಾಲಕ ಲೋಕೇಶ್ (35) ಮೃತ ದುರ್ದೈವಿಗಳು. ಕೊಳ್ಳೇಗಾಲದತ್ತ ತೆರಳಲು ಬೈಪಾಸ್ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ‌ ಮೇಲ್ಸೇತುವೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಛಿದ್ರಗೊಂಡಿರುವ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾತ್ರಿ ಸುರಿದ ಭಾರಿ ಮಳೆಗೆ ರಾಜಧಾನಿ ಜನರು ತತ್ತರ: ಆಸ್ಪತ್ರೆಗೆ ಹೋಗಲಾಗದೇ ಪರದಾಡಿದ ವೃದ್ಧ!

ಚಾಮರಾಜನಗರ: ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಗ್ರಾಮದ ಲಾರಿ ಮಾಲೀಕ ಮಹಾದೇವಪ್ಪ ಎಂಬುವವರ ಮಗ‌ ಸುರೇಶ್ (31) ಹಾಗೂ ಚಾಲಕ ಲೋಕೇಶ್ (35) ಮೃತ ದುರ್ದೈವಿಗಳು. ಕೊಳ್ಳೇಗಾಲದತ್ತ ತೆರಳಲು ಬೈಪಾಸ್ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ‌ ಮೇಲ್ಸೇತುವೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಛಿದ್ರಗೊಂಡಿರುವ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾತ್ರಿ ಸುರಿದ ಭಾರಿ ಮಳೆಗೆ ರಾಜಧಾನಿ ಜನರು ತತ್ತರ: ಆಸ್ಪತ್ರೆಗೆ ಹೋಗಲಾಗದೇ ಪರದಾಡಿದ ವೃದ್ಧ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.