ಚಾಮರಾಜನಗರ: ಕಳೆದ ನಾಲ್ಕು ದಿನಗಳ ಹಿಂದೆ ನಿತ್ರಾಣದಿಂದ ಓಡಾಡುತ್ತಿದ್ದ ಗಂಡಾನೆಯೊಂದು ಇಂದು ಮೃತಪಟ್ಟಿರುವ ಘಟನೆ ಕಾವೇರಿ ವನ್ಯಜೀವಿಧಾಮದ ಕೌದಳ್ಳಿ ವಲಯದ ದಂಟಳ್ಳಿ ಶಾಖೆಯ ಕುಲುಮಾವಿನ ಕೆರೆ ಸಮೀಪ ನಡೆದಿದೆ.
ಮೃತ ಆನೆಯೂ 50-60 ವರ್ಷ ಇರಬಹುದೆಂದು ಅಂದಾಜಿಸಲಾಗಿದ್ದು, ಕಳೆದ 5 ದಿನಗಳ ಹಿಂದೆ ನಿತ್ರಾಣದಿಂದ ನಿಧಾನವಾಗಿ ನಡೆಯುತ್ತಿದ್ದನ್ನು ಇಲಾಖೆ ಸಿಬ್ಬಂದಿ ಗಮನಿಸಿದ್ದರು.
ಈಗ ಆನೆಯೂ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವಯೋಸಹಜವಾಗಿ ಆನೆಯೂ ಮೃತಪಟ್ಟಿರುವುದಾಗಿ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ:32,000 ಖಾಸಗಿ ವಾಹನಗಳನ್ನು ರಸ್ತೆಗಿಳಿಸುತ್ತೇವೆ: ಸುರೇಶ್ ನಾಯಕ್