ಚಾಮರಾಜನಗರ: ದೇವರ ಪ್ರಸಾದ ತಿಂದು ಕೈ ತೊಳೆಯಲು ತೆರಳಿದಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿವೋರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ನವಿಲೂರು ಗ್ರಾಮದಲ್ಲಿ ನಡೆದಿದೆ. ನವಿಲೂರು ಗ್ರಾಮದ ಪ್ರಕಾಶ್(54) ಮೃತ ದುರ್ದೈವಿ.
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ
ಗ್ರಾಮದ ಮುನೇಶ್ವರ ದೇಗುಲದಲ್ಲಿ ಭಕ್ತಾದಿಯೊಬ್ಬರು ಏರ್ಪಡಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಸಾದ ತಿಂದು ಕೈ ತೊಳೆಯಲು ಹತ್ತಿರದ ಜಮೀನಿನ ಪಂಪ್ ಸೆಟ್ ಹೌಸ್ ಬಳಿ ತೆರಳಿದಾಗ ತುಂಡಾಗಿ ಬಿದ್ದಿದ್ದ ತಂತಿ ತುಳಿದು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುದೇರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.