ETV Bharat / state

ಬಸನಗೌಡ ಯತ್ನಾಳ್ ಅವರ ಮನಸ್ಥಿತಿ ಸರಿ ಇಲ್ಲ; ಸಚಿವ ಮಂಕಾಳು ವೈದ್ಯ ತಿರುಗೇಟು

author img

By

Published : Aug 15, 2023, 5:18 PM IST

ಏನಾದರು ಹೇಳಲೇಬೇಕೆಂದು ಏನೋ ಹೇಳುತ್ತಾರೆ ಎಂದು ಶಾಸಕ ಬಸವನಗೌಡ ಯತ್ನಾಳ್ ವಿರುದ್ದ ಸಚಿವ ಮಂಕಾಳು ವೈದ್ಯ ಆಕ್ರೋಶ ಹೊರಹಾಕಿದರು.

ಸಚಿವ ಮಂಕಾಳು ವೈದ್ಯ
ಸಚಿವ ಮಂಕಾಳು ವೈದ್ಯ
ಸಚಿವ ಮಂಕಾಳು ವೈದ್ಯ ಹೇಳಿಕೆ

ಕಾರವಾರ (ಉತ್ತರ ಕನ್ನಡ) : 7-8 ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಭವಿಷ್ಯ ಹೇಳಿದ್ದರು. ಅವರು ಏನಾದರೂ ಹೇಳಬೇಕೆಂದು ಹೇಳಿಕೆ ನೀಡುತ್ತಾರೆ. ಅವರ ಮನಸ್ಥಿತಿ ಸರಿ ಇಲ್ಲ ಎಂದು ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿ ಸರ್ಕಾರವೇ ಬೀಳುವುದಾಗಿ 5 ವರ್ಷದ ಹಿಂದೆ ಹೇಳಿದ್ದರು. ಆದರೆ ಸರ್ಕಾರವನ್ನು ಬೀಳಿಸಲು ಸಾಧ್ಯವಾಗಿಲ್ಲ. ಸಿಎಂ ಕುರ್ಚಿಗೆ ಒಂದೂವರೆ ಸಾವಿರ ಕೋಟಿ ನೀಡಬೇಕು ಎಂದಿದ್ದರು. ಅವರು ಏನಾದರು ಹೇಳಲೇಬೇಕೆಂದು ಏನೋ ಹೇಳಿಕೆ ಕೊಟ್ಟಿದ್ದಾರೆ. ಅವರ ಮಾತುಗಳನ್ನು ಕೇಳಬೇಡಿ. ಅವರ ಮನಸ್ಥಿತಿ ಸರಿಯಿಲ್ಲ ಎಂದು ಯತ್ನಾಳ್​ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು 5 ವರ್ಷ ಸೇವೆ ಮಾಡುವುಕ್ಕೆ ನಮ್ಮ ಸರ್ಕಾರವನ್ನು ಜನರು ಆಯ್ಕೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದಲ್ಲಿ ವ್ಯತ್ಯಾಸ ಆಗುವುದಿಲ್ಲ. ಯತ್ನಾಳ್ ಹಿಂದೆ ಏನು ಹೇಳಿದ್ರು, ಈಗ ಏನು ಹೇಳುತ್ತಿದ್ದಾರೆ ಎಂಬುದನ್ನು ಅವರು ಸ್ವಲ್ಪ ಯೋಚನೆ ಮಾಡಬೇಕು. ಅವರು ತಮ್ಮ ಮಾನಸಿಕ ಸ್ಥಿತಿ ಸರಿಮಾಡಿಕೊಳ್ಳುವುದು ಒಳ್ಳೆಯದು ಎಂದು ಸಚಿವ ಮಂಕಾಳು ವೈದ್ಯ ಟಾಂಗ್​ ಕೊಟ್ಟಿದ್ದಾರೆ.

ಉಪೇಂದ್ರ ಅವರು ಮತ್ತೆ ಇಂತಹ ತಪ್ಪಾಗದಂತೆ ಎಚ್ಚರ ವಹಿಸಲಿ : ಕನ್ನಡದ ಸೂಪರ್​ ಸ್ಟಾರ್​ ನಟ ಉಪೇಂದ್ರ ಅವರು ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು ಯಾವುದೇ ಸಂದರ್ಭದಲ್ಲಿ ಯಾವುದೇ ಸಮುದಾಯದವರೊಗೆ ಬೇಜಾರಾಗುವಂತೆ ಮಾತನಾಡಬಾರದು. ಉಪೇಂದ್ರ ಅವರ ಹೇಳಿಕೆಯನ್ನು ನಾನೂ ಕೂಡ ಖಂಡಿಸುತ್ತೇನೆ. ಒಂದು ಸಮುದಾಯ ಬದುಕಲು ಅವಕಾಶ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ. ನಾವೂ ಅವರ ಸಿನಿಮಾಗಳನ್ನು ನೋಡಿ ಬೆಳೆದವರು. ಅವರ ಒಳ್ಳೆಯ ಸಿನೆಮಾಗಳನ್ನು ಎಲ್ಲರೂ ಇಷ್ಟಪಡುತ್ತಾರೆ. ಏನೋ ತಪ್ಪಾಗಿದೆ, ಮುಂದೆ ಅದನ್ನು ಸರಿಪಡಿಸಿಕೊಂಡು ಹೋಗಲಿ ಎಂದರು.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕ್ರಮ : ಉತ್ತರಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಎಲ್ಲಿ ಬೇಗ ಆಗುತ್ತೆ ಅಲ್ಲಿಗೆ ಪ್ರಥಮ ಆದ್ಯತೆ ನೀಡಲು ತೀರ್ಮಾನಿಸಿದ್ದು, ಕಾರವಾರದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿಯೇ ಮೊದಲು ಸೌಲಭ್ಯಗಳನ್ನು ಕಲ್ಪಿಸಿ‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲಾಗುವುದು. ಇನ್ನು ಕುಮಟಾ ಅಥವಾ ಹೊನ್ನಾವರದಲ್ಲೂ ಇನ್ನೊಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ. ಕುಮಟಾದಲ್ಲೇ ಆಗಬೇಕು ಎನ್ನುವ ಬೇಡಿಕೆ ಇದ್ದು, ಆಸ್ಪತ್ರೆ ಇಡೀ ಜಿಲ್ಲೆಗೆ ಬೇಕಾಗಿದೆ. ಸಾರ್ವಜನಿಕರ, ಮಾಧ್ಯಮದವರ ಸಲಹೆ, ಸೂಚನೆ ಅಗತ್ಯವಿದೆ. ಜಿಲ್ಲೆಯ ಹಿತದೃಷ್ಟಿಯಿಂದ ಏನು ಮಾಡಲು ಸಾಧ್ಯವಿದೆಯೋ ಅದನ್ನು ಖಂಡಿತ ಮಾಡುತ್ತೇವೆ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.

ಯತ್ನಾಳ್ ಕನಸು ಕಾಣ್ತಿದ್ದಾರೆ; ಸಚಿವ ವೆಂಕಟೇಶ್ : 6 ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂದು ಬಸನಗೌಡ ಯತ್ನಾಳ್ ಹೇಳಿದ್ದಾರೆ.
ಅವರೆಲ್ಲ ಕನಸು ಕಾಣುತ್ತಿದ್ದಾರೆ. ಅವರ ಕನಸಿಗೆ ಭಗ್ನ ಮಾಡುವುದು ಬೇಡ. ಆ ರೀತಿ ಹೇಳಿಕೊಂಡು ತಿರುಗಾಡುತ್ತಲೇ ಇರಲಿ. ನಾವು ಕನಸು ಕಾಣಬೇಡಿ ಎಂದು ಹೇಳುವುದಕ್ಕೆ ಆಗುತ್ತಾ‌ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್​​ ವ್ಯಂಗ್ಯವಾಡಿದರು.

ಧ್ವಜಾರೋಹಣ ನೆರವೇರಿಸಿದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್

ಇದೇ ವೇಳೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ಮಾತನಾಡಿ, ಆರೋಪ ಮಾಡುವುದರ ಬದಲು ಸಾಬೀತು ಪಡಿಸಲಿ. ವೈಯಕ್ತಿಕ ದ್ವೇಷದಿಂದ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದರು. ಇನ್ನು, ಇದಕ್ಕೂ ಮುನ್ನ ಚಾಮರಾಜನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಕೆ ವೆಂಕಟೇಶ್ ಪೊಲೀಸ್, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್​ಸಿಸಿ ಹಾಗೂ ವಿವಿಧ ಶಾಲಾ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಪಥ ಸಂಚಲನ ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಪಂ ಸಿಇಒ ಪೂವಿತಾ, ಎಸ್ಪಿ ಪದ್ಮಿನಿ ಸಾಹು ಇನ್ನಿತರರು ಭಾಗವಹಿಸಿದ್ದರು. ಸ್ವಾತಂತ್ರ್ಯೋತ್ಸವದ ಸಂದೇಶ ಭಾಷಣದಲ್ಲಿ ವೀರ್ ವಿನಾಯಕ ದಾಮೋದರ ಸಾವರ್ಕರ್ ಹೆಸರು ಸೇರಿದಂತೆ ಮಹಾತ್ಮ ಗಾಂಧೀಜಿ, ನೇತಾಜಿ, ಝಾನ್ಸಿ ರಾಣಿ ಅವರನ್ನು ಸ್ಮರಿಸಿದ ಸಚಿವರು ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸರ್ವ ಜನರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಇದನ್ನೂ ಓದಿ : 77th Independence Day: ಕೋಮು ಶಕ್ತಿಗಳ ವಿರುದ್ಧ ಇಂದಿನ ಸ್ವಾತಂತ್ರ್ಯ ಸಂಗ್ರಾಮ ನಡೆಯಬೇಕು: ಡಿಸಿಎಂ ಡಿಕೆಶಿ

ಸಚಿವ ಮಂಕಾಳು ವೈದ್ಯ ಹೇಳಿಕೆ

ಕಾರವಾರ (ಉತ್ತರ ಕನ್ನಡ) : 7-8 ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಭವಿಷ್ಯ ಹೇಳಿದ್ದರು. ಅವರು ಏನಾದರೂ ಹೇಳಬೇಕೆಂದು ಹೇಳಿಕೆ ನೀಡುತ್ತಾರೆ. ಅವರ ಮನಸ್ಥಿತಿ ಸರಿ ಇಲ್ಲ ಎಂದು ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿ ಸರ್ಕಾರವೇ ಬೀಳುವುದಾಗಿ 5 ವರ್ಷದ ಹಿಂದೆ ಹೇಳಿದ್ದರು. ಆದರೆ ಸರ್ಕಾರವನ್ನು ಬೀಳಿಸಲು ಸಾಧ್ಯವಾಗಿಲ್ಲ. ಸಿಎಂ ಕುರ್ಚಿಗೆ ಒಂದೂವರೆ ಸಾವಿರ ಕೋಟಿ ನೀಡಬೇಕು ಎಂದಿದ್ದರು. ಅವರು ಏನಾದರು ಹೇಳಲೇಬೇಕೆಂದು ಏನೋ ಹೇಳಿಕೆ ಕೊಟ್ಟಿದ್ದಾರೆ. ಅವರ ಮಾತುಗಳನ್ನು ಕೇಳಬೇಡಿ. ಅವರ ಮನಸ್ಥಿತಿ ಸರಿಯಿಲ್ಲ ಎಂದು ಯತ್ನಾಳ್​ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು 5 ವರ್ಷ ಸೇವೆ ಮಾಡುವುಕ್ಕೆ ನಮ್ಮ ಸರ್ಕಾರವನ್ನು ಜನರು ಆಯ್ಕೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದಲ್ಲಿ ವ್ಯತ್ಯಾಸ ಆಗುವುದಿಲ್ಲ. ಯತ್ನಾಳ್ ಹಿಂದೆ ಏನು ಹೇಳಿದ್ರು, ಈಗ ಏನು ಹೇಳುತ್ತಿದ್ದಾರೆ ಎಂಬುದನ್ನು ಅವರು ಸ್ವಲ್ಪ ಯೋಚನೆ ಮಾಡಬೇಕು. ಅವರು ತಮ್ಮ ಮಾನಸಿಕ ಸ್ಥಿತಿ ಸರಿಮಾಡಿಕೊಳ್ಳುವುದು ಒಳ್ಳೆಯದು ಎಂದು ಸಚಿವ ಮಂಕಾಳು ವೈದ್ಯ ಟಾಂಗ್​ ಕೊಟ್ಟಿದ್ದಾರೆ.

ಉಪೇಂದ್ರ ಅವರು ಮತ್ತೆ ಇಂತಹ ತಪ್ಪಾಗದಂತೆ ಎಚ್ಚರ ವಹಿಸಲಿ : ಕನ್ನಡದ ಸೂಪರ್​ ಸ್ಟಾರ್​ ನಟ ಉಪೇಂದ್ರ ಅವರು ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು ಯಾವುದೇ ಸಂದರ್ಭದಲ್ಲಿ ಯಾವುದೇ ಸಮುದಾಯದವರೊಗೆ ಬೇಜಾರಾಗುವಂತೆ ಮಾತನಾಡಬಾರದು. ಉಪೇಂದ್ರ ಅವರ ಹೇಳಿಕೆಯನ್ನು ನಾನೂ ಕೂಡ ಖಂಡಿಸುತ್ತೇನೆ. ಒಂದು ಸಮುದಾಯ ಬದುಕಲು ಅವಕಾಶ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ. ನಾವೂ ಅವರ ಸಿನಿಮಾಗಳನ್ನು ನೋಡಿ ಬೆಳೆದವರು. ಅವರ ಒಳ್ಳೆಯ ಸಿನೆಮಾಗಳನ್ನು ಎಲ್ಲರೂ ಇಷ್ಟಪಡುತ್ತಾರೆ. ಏನೋ ತಪ್ಪಾಗಿದೆ, ಮುಂದೆ ಅದನ್ನು ಸರಿಪಡಿಸಿಕೊಂಡು ಹೋಗಲಿ ಎಂದರು.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕ್ರಮ : ಉತ್ತರಕನ್ನಡದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಎಲ್ಲಿ ಬೇಗ ಆಗುತ್ತೆ ಅಲ್ಲಿಗೆ ಪ್ರಥಮ ಆದ್ಯತೆ ನೀಡಲು ತೀರ್ಮಾನಿಸಿದ್ದು, ಕಾರವಾರದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿಯೇ ಮೊದಲು ಸೌಲಭ್ಯಗಳನ್ನು ಕಲ್ಪಿಸಿ‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲಾಗುವುದು. ಇನ್ನು ಕುಮಟಾ ಅಥವಾ ಹೊನ್ನಾವರದಲ್ಲೂ ಇನ್ನೊಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡುತ್ತೇವೆ. ಕುಮಟಾದಲ್ಲೇ ಆಗಬೇಕು ಎನ್ನುವ ಬೇಡಿಕೆ ಇದ್ದು, ಆಸ್ಪತ್ರೆ ಇಡೀ ಜಿಲ್ಲೆಗೆ ಬೇಕಾಗಿದೆ. ಸಾರ್ವಜನಿಕರ, ಮಾಧ್ಯಮದವರ ಸಲಹೆ, ಸೂಚನೆ ಅಗತ್ಯವಿದೆ. ಜಿಲ್ಲೆಯ ಹಿತದೃಷ್ಟಿಯಿಂದ ಏನು ಮಾಡಲು ಸಾಧ್ಯವಿದೆಯೋ ಅದನ್ನು ಖಂಡಿತ ಮಾಡುತ್ತೇವೆ ಎಂದು ಸಚಿವ ಮಂಕಾಳು ವೈದ್ಯ ತಿಳಿಸಿದರು.

ಯತ್ನಾಳ್ ಕನಸು ಕಾಣ್ತಿದ್ದಾರೆ; ಸಚಿವ ವೆಂಕಟೇಶ್ : 6 ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎಂದು ಬಸನಗೌಡ ಯತ್ನಾಳ್ ಹೇಳಿದ್ದಾರೆ.
ಅವರೆಲ್ಲ ಕನಸು ಕಾಣುತ್ತಿದ್ದಾರೆ. ಅವರ ಕನಸಿಗೆ ಭಗ್ನ ಮಾಡುವುದು ಬೇಡ. ಆ ರೀತಿ ಹೇಳಿಕೊಂಡು ತಿರುಗಾಡುತ್ತಲೇ ಇರಲಿ. ನಾವು ಕನಸು ಕಾಣಬೇಡಿ ಎಂದು ಹೇಳುವುದಕ್ಕೆ ಆಗುತ್ತಾ‌ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್​​ ವ್ಯಂಗ್ಯವಾಡಿದರು.

ಧ್ವಜಾರೋಹಣ ನೆರವೇರಿಸಿದ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್

ಇದೇ ವೇಳೆ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ಮಾತನಾಡಿ, ಆರೋಪ ಮಾಡುವುದರ ಬದಲು ಸಾಬೀತು ಪಡಿಸಲಿ. ವೈಯಕ್ತಿಕ ದ್ವೇಷದಿಂದ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದರು. ಇನ್ನು, ಇದಕ್ಕೂ ಮುನ್ನ ಚಾಮರಾಜನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿದ ಕೆ ವೆಂಕಟೇಶ್ ಪೊಲೀಸ್, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್​ಸಿಸಿ ಹಾಗೂ ವಿವಿಧ ಶಾಲಾ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಪಥ ಸಂಚಲನ ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಪಂ ಸಿಇಒ ಪೂವಿತಾ, ಎಸ್ಪಿ ಪದ್ಮಿನಿ ಸಾಹು ಇನ್ನಿತರರು ಭಾಗವಹಿಸಿದ್ದರು. ಸ್ವಾತಂತ್ರ್ಯೋತ್ಸವದ ಸಂದೇಶ ಭಾಷಣದಲ್ಲಿ ವೀರ್ ವಿನಾಯಕ ದಾಮೋದರ ಸಾವರ್ಕರ್ ಹೆಸರು ಸೇರಿದಂತೆ ಮಹಾತ್ಮ ಗಾಂಧೀಜಿ, ನೇತಾಜಿ, ಝಾನ್ಸಿ ರಾಣಿ ಅವರನ್ನು ಸ್ಮರಿಸಿದ ಸಚಿವರು ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸರ್ವ ಜನರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಇದನ್ನೂ ಓದಿ : 77th Independence Day: ಕೋಮು ಶಕ್ತಿಗಳ ವಿರುದ್ಧ ಇಂದಿನ ಸ್ವಾತಂತ್ರ್ಯ ಸಂಗ್ರಾಮ ನಡೆಯಬೇಕು: ಡಿಸಿಎಂ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.