ETV Bharat / state

ಸಿದ್ದಯ್ಯನಪುರ ಶಾಲೆಯ ನಾರಾಯಣರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ.. - ವಸಂತನಗರದಲ್ಲಿ ಪ್ರಶಸ್ತಿ ಪ್ರದಾನ

ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆಯಲಿದ್ದು, ನಾಳೆ ಬೆಂಗಳೂರಿನ ವಸಂತನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ನಾರಾಯಣರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
author img

By

Published : Sep 4, 2019, 9:23 PM IST

ಚಾಮರಾಜನಗರ: ತಾಲೂಕಿನ ಸಿದ್ದಯ್ಯನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆಯಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಪ್ರಶಸ್ತಿಯನ್ನು ಕೊಡಲಿದ್ದು, ಸೆ.5 ರಂದು ಬೆಂಗಳೂರಿನ ವಸಂತನಗರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆಯೆಂದು ಶಿಕ್ಷಣ ಇಲಾಖೆ ತಿಳಿಸಿದೆ.

ನಾರಾಯಣ ಅವರು 2 ದಶಕಗಳಿಂದ ಶಿಕ್ಷಕ ವೃತ್ತಿಯಲ್ಲಿ ತೊಡಗಿದ್ದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಮೂಲಕ ದಾನಿಗಳನ್ನು ಹುಡುಕಿ ಕಾನ್ವೆಂಟ್​ಗೆ ಸರಿಸಾಟಿಯಾಗಿ ಶಾಲೆಯನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ಕುರಿತು ಮೊದಲ ಬಾರಿಗೆ ಈಟಿವಿ ಭಾರತ ವಿಶೇಷ ಸುದ್ದಿ ಪ್ರಕಟಿಸಿ ಎಲ್ಲರ ಗಮನ ಸೆಳೆದಿತ್ತು. ಇನ್ನು, ನಾರಾಯಣ ಅವರು ಸೆಪ್ಟೆಂಬರ್‌ ತಿಂಗಳಿನಲ್ಲಿ ತನ್ನೆಲ್ಲಾ ಗುರುಗಳ ಮನೆಗೆ ಭೇಟಿ ಮಾಡಿ ಆಶೀರ್ವಾದ ಪಡೆಯುವ ವಿಶಿಷ್ಟ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದ್ದು, ಈ ಕುರಿತು ಈಟಿವಿ ಭಾರತ ಬೆಳಕು ಚೆಲ್ಲಿತ್ತು.

ಚಾಮರಾಜನಗರ: ತಾಲೂಕಿನ ಸಿದ್ದಯ್ಯನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆಯಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಪ್ರಶಸ್ತಿಯನ್ನು ಕೊಡಲಿದ್ದು, ಸೆ.5 ರಂದು ಬೆಂಗಳೂರಿನ ವಸಂತನಗರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆಯೆಂದು ಶಿಕ್ಷಣ ಇಲಾಖೆ ತಿಳಿಸಿದೆ.

ನಾರಾಯಣ ಅವರು 2 ದಶಕಗಳಿಂದ ಶಿಕ್ಷಕ ವೃತ್ತಿಯಲ್ಲಿ ತೊಡಗಿದ್ದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಮೂಲಕ ದಾನಿಗಳನ್ನು ಹುಡುಕಿ ಕಾನ್ವೆಂಟ್​ಗೆ ಸರಿಸಾಟಿಯಾಗಿ ಶಾಲೆಯನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ಕುರಿತು ಮೊದಲ ಬಾರಿಗೆ ಈಟಿವಿ ಭಾರತ ವಿಶೇಷ ಸುದ್ದಿ ಪ್ರಕಟಿಸಿ ಎಲ್ಲರ ಗಮನ ಸೆಳೆದಿತ್ತು. ಇನ್ನು, ನಾರಾಯಣ ಅವರು ಸೆಪ್ಟೆಂಬರ್‌ ತಿಂಗಳಿನಲ್ಲಿ ತನ್ನೆಲ್ಲಾ ಗುರುಗಳ ಮನೆಗೆ ಭೇಟಿ ಮಾಡಿ ಆಶೀರ್ವಾದ ಪಡೆಯುವ ವಿಶಿಷ್ಟ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದ್ದು, ಈ ಕುರಿತು ಈಟಿವಿ ಭಾರತ ಬೆಳಕು ಚೆಲ್ಲಿತ್ತು.

Intro:ನಾಳೆ ಶಿಕ್ಷಕರ ದಿನಾಚರಣೆ: ಸಿದ್ದಯ್ಯನಪುರ ಶಾಲೆಯ ನಾರಾಯಣ ರಾಜ್ಯ ಮಟ್ಟದ ಉತ್ತಮ ಶಿಕ್ಷಕ


ಚಾಮರಾಜನಗರ: ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದೆ.


Body:ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಪ್ರಶಸ್ತಿಯನ್ನು ಕೊಡಮಾಡಲಿದ್ದು ಸೆ.೫ ರಂದು ಬೆಂಗಳೂರಿನ ವಸಂತನಗರದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Conclusion:ನಾರಾಯಣ ಅವರು ೨ ದಶಕಗಳಿಂದ ಶಿಕ್ಷಕ ವೃತ್ತಿಯಲ್ಲಿ ತೊಡಗಿದ್ದು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಮೂಲಕ ದಾನಿಗಳನ್ನು ಹುಡುಕಿ ಕಾನ್ವೆಂಟ್ ಗೆ ಸಡ್ಡು ಹೊಡೆಯುವಂತೆ ಶಾಲೆಯನ್ನು ಅಭಿವೃದ್ಧಿ ಪಡಿಸಿದ್ದಾರೆ. ಈ ಕುರಿತು ಮೊದಲ ಬಾರಿಗೆ ಈಟಿವಿ ಭಾರತ ವಿಶೇಷ ಸುದ್ದಿ ಪ್ರಕಟಿಸಿ ಎಲ್ಲರ ಗಮನಸೆಳೆದಿತ್ತು. ಇನ್ನು, ನಾರಾಯಣ ಅವರು ಸೆ.ತಿಂಗಳಿನಲ್ಲಿ ತನ್ನೆಲ್ಲಾ ಗುರುಗಳ ಮನೆಗೆ ಭೇಟಿ ಮಾಡಿ ಆಶೀರ್ವಾದ ಪಡೆಯುವ ವಿಶಿಷ್ಟ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿರುವುದನ್ನು ಕುರಿತು ಈಟಿವಿ ಭಾರತ ಬೆಳಕು ಚೆಲ್ಲಿತ್ತು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.