ಚಾಮರಾಜನಗರ: ತಂದೆ-ತಾಯಿ ಎಂಬ ಪದಕ್ಕೆ ಅಪಮಾನ ಎಂಬಂತೆ ಖಾಲಿ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ.
ಅಂದಾಜು 6 ದಿನದ ಗಂಡು ಶಿಶು ಇದಾಗಿದ್ದು ಕರುಳಬಳ್ಳಿ ಕತ್ತರಿಸದೇ ಹಾಗೆ ಬಿಟ್ಟಿದ್ದು ಅಂಗವೈಕಲ್ಯ ಹೊತ್ತು ಜನಿಸಿರುವ ಕಾರಣ ಹೆತ್ತವರು ಪ್ಲಾಸ್ಟಿಕ್ ಕವರ್ನಲ್ಲಿ ಮಗುವನ್ನು ಹಾಕಿ ಬಿಸಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
![new-born-baby-found-dead-in-hospital-water-tank](https://etvbharatimages.akamaized.net/etvbharat/prod-images/12102860_thum.jpg)
ಆಸ್ಪತ್ರೆ ಸಿಬ್ಬಂದಿ ಶವಾಗಾರದ ಬಳಿ ಹೋದಾಗ ದುರ್ನಾತ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರಿನಲ್ಲಿ ಶಿಶು ಶವ ಪತ್ತೆಯಾಗಿದೆ. ಆಸ್ಪತ್ರೆಯಲ್ಲೇ ಹೆರಿಗೆಯಾಗಿದ್ದರೆ ಕರುಳ ಬಳ್ಳಿಯನ್ನು ಕತ್ತರಿಸುತ್ತಿದ್ದರಿಂದ ಆಸ್ಪತ್ರೆಯಲ್ಲಿ ಈ ಮಗು ಹುಟ್ಟಿಲ್ಲ. ಸಿಸಿಟಿವಿ ಪರಿಶೀಲಿಸಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪಿಐ ಸಂತೋಷ್ ಕಶ್ಯಪ್ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.