ETV Bharat / state

ಅಹಂಕಾರ, ದರ್ಪ ವರ್ಕೌಟ್ ಆಗಲ್ಲ: ಪ್ರೀತಂ ಗೌಡರಿಗೆ ನಿಖಿಲ್ ಟಾಂಗ್

author img

By

Published : Feb 16, 2023, 10:50 PM IST

ರಾಜಕಾರಣದಲ್ಲಿ ನಾವು ಎಷ್ಟು ತಲೆ ಬಾಗಿಸಿಸುತ್ತೇವೋ ಅಷ್ಟು ಜನ ನಮ್ಮನ್ನು ಬೆಳೆಸುತ್ತಾರೆ ಎಂದು ನಿಖಿಲ್​ ಕುಮಾರಸ್ವಾಮಿ ಹೇಳಿದರು.

nikhil-kumaraswamy-give-reply-on-mla-pritam-gowda-statement
ಸಮಯ ಹತ್ತಿರ ಬಂದಿದೆ, ಅಹಂಕಾರ, ದರ್ಪ ವರ್ಕೌಟ್ ಆಗಲ್ಲ: ಪ್ರೀತಂಗೆ ನಿಖಿಲ್ ಟಾಂಗ್
ಅಹಂಕಾರ, ದರ್ಪ ವರ್ಕೌಟ್ ಆಗಲ್ಲ: ಪ್ರೀತಂಗೆ ನಿಖಿಲ್ ಟಾಂಗ್

ಚಾಮರಾಜನಗರ: ರಾಜಕಾರಣದಲ್ಲಿ ಅಹಂಕಾರ, ದರ್ಪ ವರ್ಕೌಟ್ ಆಗಲ್ಲ ಎಂದು ಜೆಡಿಎಸ್ ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಸನ ಶಾಸಕ ಪ್ರೀತಂ ಗೌಡರಿಗೆ ಟಾಂಗ್ ಕೊಟ್ಟರು. ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 50 ಸಾವಿರಕ್ಕಿಂತ ಒಂದು ವೋಟ್ ಕಡಿಮೆ ಬಿದ್ದರೂ ಮರು ಚುನಾವಣೆಗೆ ಹೋಗುತ್ತೇನೆ ಎಂಬ ಪ್ರೀತಂ ಗೌಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ನಾವು ಎಷ್ಟು ತಲೆ ಬಗ್ಗಿಸುತ್ತೇವೆ, ಅಷ್ಟು ಜನ ನಮ್ಮನ್ನು ರಾಜಕೀಯವಾಗಿ ಬೆಳೆಸುತ್ತಾರೆ ಎಂದು ತಿರುಗೇಟು ನೀಡಿದರು.

ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಉತ್ತರಿಸಿ, ಸಹಜವಾಗಿ ಎಲ್ಲಿ ಪಕ್ಷ ಬಲಿಷ್ಠವಾಗಿ ಇರುತ್ತದೆಯೋ‌ ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಈ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಶೀಘ್ರದಲ್ಲೇ ಅಂತಿಮ ಮಾಡುತ್ತಾರೆ. ಎಲ್ಲಾ ಗೊಂದಲಗಳಿಗೂ ತೆರೆ ಬೀಳಲಿದೆ ಎಂದರು. ರಾಜಕೀಯವಾಗಿ ಅಪ್ರಬುದ್ಧ ಎಂಬ ಸುಮಲತಾ ಟೀಕೆಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ನಾನು ಚುನಾವಣೆ ಸಂದರ್ಭದಲ್ಲೂ ಕೂಡ ಸುಮಲತಾರನ್ನು ತಾಯಿಯೆಂದು ಕರೆದಿದ್ದೇನೆ. ಲೋಕಸಭೆ ಚುನಾವಣೆಗೆ ತಾಯಿ ವಿರುದ್ಧ ನಿಂತಾಗ ನಂಗೆ ಅನುಭವವಿರಲಿಲ್ಲ. ಅವತ್ತು ತಾಯಿ ಅಂತಾ ಮಾತನಾಡಿಸಿದ್ದೇನೆ, ಇವತ್ತು ಆ ಪದವನ್ನೇ ಬಳಸುತ್ತೇನೆ ಎಂದು ಉತ್ತರಿಸಿದರು.

ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ: ಕೊಳ್ಳೇಗಾಲದ ಕಾರ್ಯಕ್ರಮದ ಬಳಿಕ ಹನೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಪರ ರೋಡ್ ಶೋ ನಡೆಸಿದ ನಿಖಿಲ್ ಕುಮಾರಸ್ವಾಮಿ, ರಾಜ್ಯದ ಅಭಿವೃದ್ಧಿಗಾಗಿ ಜೆಡಿಎಸ್ ಬೆಂಬಲಿಸಿ. ಹನೂರು ಕ್ಷೇತ್ರದಲ್ಲಿ ಈ ಬಾರಿ ಮಂಜುನಾಥ್ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕುಮಾರಣ್ಣ ಸರ್ಕಾರ ರಚನೆಗೆ ಹನೂರು ಕ್ಷೇತ್ರದ ಜನತೆ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಹನೂರು ಕ್ಷೇತ್ರಕ್ಕೆ ವಿಶೇಷ ಅನುದಾನಗಳನ್ನು ತರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು. ಈ ಭಾಗದಲ್ಲಿ ಕಾರ್ಖಾನೆಗಳನ್ನು ತೆರೆದು ನಿರುದ್ಯೋಗದ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಯುವಕ, ಯುವತಿಯರು ಸ್ವಾಭಿಮಾನದಿಂದ ದುಡಿದು ಬದುಕುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡುತ್ತದೆ. ನನಗೆ ರಾಮನಗರ ಹಾಗೂ ಹನೂರು ಕ್ಷೇತ್ರ ಎರಡೂ ಒಂದೇ, ಎರಡು ಕ್ಷೇತ್ರಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ನನ್ನ ಮೂಲ ಗುರಿ ಎಂದು ಹೇಳಿದರು.

ಇದನ್ನೂ ಓದಿ: ಅಶ್ವತ್ಥ ನಾರಾಯಣ್‌ಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ಅಹಂಕಾರ, ದರ್ಪ ವರ್ಕೌಟ್ ಆಗಲ್ಲ: ಪ್ರೀತಂಗೆ ನಿಖಿಲ್ ಟಾಂಗ್

ಚಾಮರಾಜನಗರ: ರಾಜಕಾರಣದಲ್ಲಿ ಅಹಂಕಾರ, ದರ್ಪ ವರ್ಕೌಟ್ ಆಗಲ್ಲ ಎಂದು ಜೆಡಿಎಸ್ ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಸನ ಶಾಸಕ ಪ್ರೀತಂ ಗೌಡರಿಗೆ ಟಾಂಗ್ ಕೊಟ್ಟರು. ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 50 ಸಾವಿರಕ್ಕಿಂತ ಒಂದು ವೋಟ್ ಕಡಿಮೆ ಬಿದ್ದರೂ ಮರು ಚುನಾವಣೆಗೆ ಹೋಗುತ್ತೇನೆ ಎಂಬ ಪ್ರೀತಂ ಗೌಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ನಾವು ಎಷ್ಟು ತಲೆ ಬಗ್ಗಿಸುತ್ತೇವೆ, ಅಷ್ಟು ಜನ ನಮ್ಮನ್ನು ರಾಜಕೀಯವಾಗಿ ಬೆಳೆಸುತ್ತಾರೆ ಎಂದು ತಿರುಗೇಟು ನೀಡಿದರು.

ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಉತ್ತರಿಸಿ, ಸಹಜವಾಗಿ ಎಲ್ಲಿ ಪಕ್ಷ ಬಲಿಷ್ಠವಾಗಿ ಇರುತ್ತದೆಯೋ‌ ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಈ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷರು, ರಾಜ್ಯಾಧ್ಯಕ್ಷರು ಶೀಘ್ರದಲ್ಲೇ ಅಂತಿಮ ಮಾಡುತ್ತಾರೆ. ಎಲ್ಲಾ ಗೊಂದಲಗಳಿಗೂ ತೆರೆ ಬೀಳಲಿದೆ ಎಂದರು. ರಾಜಕೀಯವಾಗಿ ಅಪ್ರಬುದ್ಧ ಎಂಬ ಸುಮಲತಾ ಟೀಕೆಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ನಾನು ಚುನಾವಣೆ ಸಂದರ್ಭದಲ್ಲೂ ಕೂಡ ಸುಮಲತಾರನ್ನು ತಾಯಿಯೆಂದು ಕರೆದಿದ್ದೇನೆ. ಲೋಕಸಭೆ ಚುನಾವಣೆಗೆ ತಾಯಿ ವಿರುದ್ಧ ನಿಂತಾಗ ನಂಗೆ ಅನುಭವವಿರಲಿಲ್ಲ. ಅವತ್ತು ತಾಯಿ ಅಂತಾ ಮಾತನಾಡಿಸಿದ್ದೇನೆ, ಇವತ್ತು ಆ ಪದವನ್ನೇ ಬಳಸುತ್ತೇನೆ ಎಂದು ಉತ್ತರಿಸಿದರು.

ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ: ಕೊಳ್ಳೇಗಾಲದ ಕಾರ್ಯಕ್ರಮದ ಬಳಿಕ ಹನೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಪರ ರೋಡ್ ಶೋ ನಡೆಸಿದ ನಿಖಿಲ್ ಕುಮಾರಸ್ವಾಮಿ, ರಾಜ್ಯದ ಅಭಿವೃದ್ಧಿಗಾಗಿ ಜೆಡಿಎಸ್ ಬೆಂಬಲಿಸಿ. ಹನೂರು ಕ್ಷೇತ್ರದಲ್ಲಿ ಈ ಬಾರಿ ಮಂಜುನಾಥ್ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕುಮಾರಣ್ಣ ಸರ್ಕಾರ ರಚನೆಗೆ ಹನೂರು ಕ್ಷೇತ್ರದ ಜನತೆ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಹನೂರು ಕ್ಷೇತ್ರಕ್ಕೆ ವಿಶೇಷ ಅನುದಾನಗಳನ್ನು ತರುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು. ಈ ಭಾಗದಲ್ಲಿ ಕಾರ್ಖಾನೆಗಳನ್ನು ತೆರೆದು ನಿರುದ್ಯೋಗದ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಯುವಕ, ಯುವತಿಯರು ಸ್ವಾಭಿಮಾನದಿಂದ ದುಡಿದು ಬದುಕುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡುತ್ತದೆ. ನನಗೆ ರಾಮನಗರ ಹಾಗೂ ಹನೂರು ಕ್ಷೇತ್ರ ಎರಡೂ ಒಂದೇ, ಎರಡು ಕ್ಷೇತ್ರಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ನನ್ನ ಮೂಲ ಗುರಿ ಎಂದು ಹೇಳಿದರು.

ಇದನ್ನೂ ಓದಿ: ಅಶ್ವತ್ಥ ನಾರಾಯಣ್‌ಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.