ETV Bharat / state

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 25 ದಿನಗಳಾದ್ರೂ ಸಿಗದ ನ್ಯಾಯ, ಸಂತ್ರಸ್ತೆಯ ತಾಯಿ ಬೇಸರ

author img

By

Published : Jan 1, 2022, 6:21 PM IST

ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಶಾಲಾ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 25 ದಿನಗಳಾದ್ರೂ ನ್ಯಾಯ ದೊರೆಯದ ಹಿನ್ನೆಲೆ ಸಂತ್ರಸ್ತೆ ತಾಯಿ ಅಳಲು ತೋಡಿಕೊಂಡಿದ್ದಾರೆ.

school girl sexual assault case, Chamarajanagar school girl sexual assault case, No progress in sexual assault case, Chamarajanagar crime news, ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಚಾಮರಾಜನಗರ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಚಾಮರಾಜನಗರ ಅಪರಾಧ ಪ್ರಕರಣ,
ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ

ಚಾಮರಾಜನಗರ: ಇಲ್ಲಿನ ಡಿಸಿ, ಎಸ್ಪಿ ಅಷ್ಟೇ ಏಕೆ ಜಿಲ್ಲಾ ಪಂಚಾಯತ್​ ಸಿಇಒ ಕೂಡ ಮಹಿಳೆಯರಾಗಿದ್ದಾರೆ. ಆದ್ರೆ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ಕಾಮುಕರನ್ನು ಈವರೆಗೆ ಬಂಧಿಸಿಲ್ಲವೆಂದು ಸಂತ್ರಸ್ತೆಯ ತಾಯಿ ಆರೋಪಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಬಾಲಕಿಯೊಬ್ಬಳು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಾಲ್ವರು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಕಳೆದ ಡಿಸೆಂಬರ್​ 6 ರಂದು ಬಾಲಕಿ ತಾಯಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆದರೆ, ಘಟನೆ ನಡೆದು 25 ದಿನಗಳಾದರೂ ಆರೋಪಿಗಳಾದ ಅರಣ್ಯ ಇಲಾಖೆಯ ಗಾರ್ಡ್ ಶಿವಣ್ಣನಾಯಕ, ಯಡವನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಾವಲುಗಾರ ಜವರನಾಯಕ, ದೈಹಿಕ ಶಿಕ್ಷಣ ಶಿಕ್ಷಕ ಹರೀಶ್, ಹೊಣಕನಪುರದ ನಾಗರಾಜು ಎಂಬುವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಾಲಕಿಯ ತಾಯಿ ಅಳಲು ತೋಡಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಮಹಿಳೆಯರೇ ಉನ್ನತ ಅಧಿಕಾರಿಗಳಾಗಿದ್ರೂ ನೊಂದ ಬಾಲಕಿಗೆ ಇನ್ನೂ ನ್ಯಾಯ ಸಿಗದೇ ಇರುವುದು ವಿಪರ್ಯಾಸದ ಪರಿಸ್ಥಿತಿ ಉದ್ಭವವಾಯಿತೇ ಎಂಬ ಪ್ರಶ್ನೆ ನಗರದ ಜನರಲ್ಲಿ ಮೂಡಿದೆ.

ಎಎಸ್​ಪಿ ಪ್ರತಿಕ್ರಿಯೆ: ಯಾವ ಕಾರಣಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದಿಲ್ಲ ಎಂದು ಅಧಿಕಾರಿಗಳನ್ನು ವಿಚಾರಿಸುತ್ತೇನೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ಪರ ಕೆಲಸ ಮಾಡುವುದಿಲ್ಲ. ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಎಸ್ಪಿ ಸುಂದರರಾಜ್ ತಿಳಿಸಿದ್ದಾರೆ.

ಚಾಮರಾಜನಗರ: ಇಲ್ಲಿನ ಡಿಸಿ, ಎಸ್ಪಿ ಅಷ್ಟೇ ಏಕೆ ಜಿಲ್ಲಾ ಪಂಚಾಯತ್​ ಸಿಇಒ ಕೂಡ ಮಹಿಳೆಯರಾಗಿದ್ದಾರೆ. ಆದ್ರೆ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ಕಾಮುಕರನ್ನು ಈವರೆಗೆ ಬಂಧಿಸಿಲ್ಲವೆಂದು ಸಂತ್ರಸ್ತೆಯ ತಾಯಿ ಆರೋಪಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಬಾಲಕಿಯೊಬ್ಬಳು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಾಲ್ವರು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಕಳೆದ ಡಿಸೆಂಬರ್​ 6 ರಂದು ಬಾಲಕಿ ತಾಯಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆದರೆ, ಘಟನೆ ನಡೆದು 25 ದಿನಗಳಾದರೂ ಆರೋಪಿಗಳಾದ ಅರಣ್ಯ ಇಲಾಖೆಯ ಗಾರ್ಡ್ ಶಿವಣ್ಣನಾಯಕ, ಯಡವನಹಳ್ಳಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಾವಲುಗಾರ ಜವರನಾಯಕ, ದೈಹಿಕ ಶಿಕ್ಷಣ ಶಿಕ್ಷಕ ಹರೀಶ್, ಹೊಣಕನಪುರದ ನಾಗರಾಜು ಎಂಬುವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಾಲಕಿಯ ತಾಯಿ ಅಳಲು ತೋಡಿಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಮಹಿಳೆಯರೇ ಉನ್ನತ ಅಧಿಕಾರಿಗಳಾಗಿದ್ರೂ ನೊಂದ ಬಾಲಕಿಗೆ ಇನ್ನೂ ನ್ಯಾಯ ಸಿಗದೇ ಇರುವುದು ವಿಪರ್ಯಾಸದ ಪರಿಸ್ಥಿತಿ ಉದ್ಭವವಾಯಿತೇ ಎಂಬ ಪ್ರಶ್ನೆ ನಗರದ ಜನರಲ್ಲಿ ಮೂಡಿದೆ.

ಎಎಸ್​ಪಿ ಪ್ರತಿಕ್ರಿಯೆ: ಯಾವ ಕಾರಣಕ್ಕೆ ಆರೋಪಿಗಳನ್ನು ವಶಕ್ಕೆ ಪಡೆದಿಲ್ಲ ಎಂದು ಅಧಿಕಾರಿಗಳನ್ನು ವಿಚಾರಿಸುತ್ತೇನೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ಪರ ಕೆಲಸ ಮಾಡುವುದಿಲ್ಲ. ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಎಸ್ಪಿ ಸುಂದರರಾಜ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.