ETV Bharat / state

ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ

author img

By

Published : May 13, 2021, 1:28 PM IST

Updated : May 13, 2021, 3:19 PM IST

ಸಂದರ್ಭಕ್ಕೆ ತಕ್ಕಂತೆ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ವಿಫಲರಾಗಿದ್ದಾರೆ ಎಂದು ಹೈಕೊರ್ಟ್ ನ್ಯಾಯಮೂರ್ತಿಗಳ ತನಿಖಾ ತಂಡ ವರದಿಯಲ್ಲಿ ತಿಳಿಸಿದೆ.

ಚಾಮರಾಜನಗರ
ಚಾಮರಾಜನಗರ

ಚಾಮರಾಜನಗರ: ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣವಾಗಿದ್ದು, ದುರ್ಘಟನೆಗೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ ಎಂದು ಹೈಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿಗಳ‌ ಸಮಿತಿ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ.

ಸೋಂಕಿತರ ಸಾವಿಗೆ ಆಕ್ಸಿಜನ್ ಕೊರತೆ ಕಾರಣವಾಗಿದೆ. ಇಂಥ ಸಂದಿಗ್ಧ ಸಂದರ್ಭದಲ್ಲಿ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಜಿಲ್ಲಾಧಿಕಾರಿ ನಾಯಕತ್ವ ಹಾಗೂ ಕ್ರಿಯಾಶೀಲತೆ ತೋರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಸಮಿತಿ ಉಲ್ಲೇಖಿಸಿದೆ.

ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ
ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ

ಜೀವನ್ಮರದ ಮಧ್ಯೆ ಹೋರಾಡುತ್ತಿದ್ದ ಸಮಯದಲ್ಲಿ ರೋಗಿಗಳಿಗೆ ಆಮ್ಲಜನಕದ ಅಗತ್ಯವಿತ್ತು. ಆದರೆ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯೇ ಇರಲಿಲ್ಲ. ಮೃತಪಟ್ಟವರ ಕೇಸ್ ಶೀಟ್​​ಗಳು ಈ ವಿಚಾರವನ್ನು ಸೂಚಿಸುತ್ತವೆ. ಆಮ್ಲಜನಕ ಕೊರತೆಯ ಕಾರಣಕ್ಕೆ ರೋಗಿಗಳ ಮಿದುಳಿನ ಕೋಶಗಳಿಗೆ ಹಾನಿಯಾಗಿತ್ತು ಎಂದು ಸಮಿತಿ ವಿವರಿಸಿದೆ.

ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ
ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ

ಇದನ್ನೂ ಓದಿ: ಚಾಮರಾಜನಗರ ದುರಂತ.. ಹೈಕೋರ್ಟ್​ಗೆ ಸತ್ಯಶೋಧನಾ ವರದಿ ಸಲ್ಲಿಸಿದ ಕಾನೂನು ಸೇವಾ ಪ್ರಾಧಿಕಾರ

ಮೈಸೂರಿನಲ್ಲಿನ ಆಮ್ಲಜನಕ ಸಿಲಿಂಡರ್ ಮರುಪೂರಣ ಘಟಕದಿಂದ ಆಸ್ಪತ್ರೆಗೆ ಆಮ್ಲಜನಕ ಸರಬರಾಜು ಮಾಡಿಕೊಳ್ಳುವುದು ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿ. ಅದನ್ನು ಸರಿಯಾಗಿ ಮಾಡದೆ ಇರುವುದು ಅಮೂಲ್ಯ ಜೀವಗಳ ಹಾನಿಗೆ ಕಾರಣ. ಇದೇ ವೇಳೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಕ್ಸಿಜನ್ ಪೂರೈಕೆಗೆ ತಡೆ ಒಡ್ಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸಮಿತಿ ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: ಆಕ್ಸಿಜನ್‌ ಕೊರತೆ ಚಾಮರಾಜನಗರ ದುರಂತಕ್ಕೆ ಕಾರಣ; ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್​ಚಿಟ್​

ಚಾಮರಾಜನಗರ: ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣವಾಗಿದ್ದು, ದುರ್ಘಟನೆಗೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ ಎಂದು ಹೈಕೋರ್ಟ್ ನೇಮಿಸಿದ್ದ ನ್ಯಾಯಮೂರ್ತಿಗಳ‌ ಸಮಿತಿ ತನ್ನ ತನಿಖಾ ವರದಿಯಲ್ಲಿ ತಿಳಿಸಿದೆ.

ಸೋಂಕಿತರ ಸಾವಿಗೆ ಆಕ್ಸಿಜನ್ ಕೊರತೆ ಕಾರಣವಾಗಿದೆ. ಇಂಥ ಸಂದಿಗ್ಧ ಸಂದರ್ಭದಲ್ಲಿ ನಾಯಕತ್ವ ಮತ್ತು ಕ್ರಿಯಾಶೀಲತೆ ತೋರಿಸುವಲ್ಲಿ ಜಿಲ್ಲಾಧಿಕಾರಿ ನಾಯಕತ್ವ ಹಾಗೂ ಕ್ರಿಯಾಶೀಲತೆ ತೋರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಸಮಿತಿ ಉಲ್ಲೇಖಿಸಿದೆ.

ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ
ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ

ಜೀವನ್ಮರದ ಮಧ್ಯೆ ಹೋರಾಡುತ್ತಿದ್ದ ಸಮಯದಲ್ಲಿ ರೋಗಿಗಳಿಗೆ ಆಮ್ಲಜನಕದ ಅಗತ್ಯವಿತ್ತು. ಆದರೆ, ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆಯೇ ಇರಲಿಲ್ಲ. ಮೃತಪಟ್ಟವರ ಕೇಸ್ ಶೀಟ್​​ಗಳು ಈ ವಿಚಾರವನ್ನು ಸೂಚಿಸುತ್ತವೆ. ಆಮ್ಲಜನಕ ಕೊರತೆಯ ಕಾರಣಕ್ಕೆ ರೋಗಿಗಳ ಮಿದುಳಿನ ಕೋಶಗಳಿಗೆ ಹಾನಿಯಾಗಿತ್ತು ಎಂದು ಸಮಿತಿ ವಿವರಿಸಿದೆ.

ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ
ಆಕ್ಸಿಜನ್‌ ದುರಂತಕ್ಕೆ ಚಾಮರಾಜನಗರ ಜಿಲ್ಲಾಡಳಿತವೇ ಹೊಣೆ: ಹೈಕೋರ್ಟ್‌ ಸಮಿತಿ ವರದಿ

ಇದನ್ನೂ ಓದಿ: ಚಾಮರಾಜನಗರ ದುರಂತ.. ಹೈಕೋರ್ಟ್​ಗೆ ಸತ್ಯಶೋಧನಾ ವರದಿ ಸಲ್ಲಿಸಿದ ಕಾನೂನು ಸೇವಾ ಪ್ರಾಧಿಕಾರ

ಮೈಸೂರಿನಲ್ಲಿನ ಆಮ್ಲಜನಕ ಸಿಲಿಂಡರ್ ಮರುಪೂರಣ ಘಟಕದಿಂದ ಆಸ್ಪತ್ರೆಗೆ ಆಮ್ಲಜನಕ ಸರಬರಾಜು ಮಾಡಿಕೊಳ್ಳುವುದು ಜಿಲ್ಲಾಡಳಿತ ಮತ್ತು ಆಸ್ಪತ್ರೆ ಅಧಿಕಾರಿಗಳ ಜವಾಬ್ದಾರಿ. ಅದನ್ನು ಸರಿಯಾಗಿ ಮಾಡದೆ ಇರುವುದು ಅಮೂಲ್ಯ ಜೀವಗಳ ಹಾನಿಗೆ ಕಾರಣ. ಇದೇ ವೇಳೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಕ್ಸಿಜನ್ ಪೂರೈಕೆಗೆ ತಡೆ ಒಡ್ಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಸಮಿತಿ ಸ್ಪಷ್ಟವಾಗಿ ಹೇಳಿದೆ.

ಇದನ್ನೂ ಓದಿ: ಆಕ್ಸಿಜನ್‌ ಕೊರತೆ ಚಾಮರಾಜನಗರ ದುರಂತಕ್ಕೆ ಕಾರಣ; ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್​ಚಿಟ್​

Last Updated : May 13, 2021, 3:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.