ಚಾಮರಾಜನಗರ: ಮಗಳ ಆರೋಗ್ಯ ವಿಚಾರಿಸಿ ಹಿಂತಿರುಗುವಾಗ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಚಂಗವಾಡಿ- ಮಣಗಳ್ಳಿ ರಸ್ತೆಯಲ್ಲಿ ನಡೆದಿದೆ.
ಮಗಳ ಆರೋಗ್ಯ ವಿಚಾರಿಸಿ ಹಿಂತಿರುಗುವಾಗ ಅಪಘಾತ: ಸ್ಥಳದಲ್ಲೇ ತಂದೆ ಸಾವು
ಬೈಕ್ನಿಂದ ಆಯತಪ್ಪಿ ಬಿದ್ದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಂಗವಾಡಿ- ಮಣಗಳ್ಳಿ ರಸ್ತೆಯಲ್ಲಿ ನಡೆದಿದೆ.
![ಮಗಳ ಆರೋಗ್ಯ ವಿಚಾರಿಸಿ ಹಿಂತಿರುಗುವಾಗ ಅಪಘಾತ: ಸ್ಥಳದಲ್ಲೇ ತಂದೆ ಸಾವು Person killed in accident](https://etvbharatimages.akamaized.net/etvbharat/prod-images/768-512-11020375-thumbnail-3x2-vish.jpg?imwidth=3840)
ಹನೂರು ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಹಿರಿಯಂಬಲ ಗ್ರಾಮದ ಜಡೇಸ್ವಾಮಿ (36) ಮೃತ ದುರ್ದೈವಿ. ಜಡೇಸ್ವಾಮಿಯು ಹನೂರಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ನ ಪುತ್ರಿಯನ್ನು ನೋಡಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ.
ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ಮಗಳ ಆರೋಗ್ಯ ವಿಚಾರಿಸಿ ಹಿಂತಿರುಗುವಾಗ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಚಂಗವಾಡಿ- ಮಣಗಳ್ಳಿ ರಸ್ತೆಯಲ್ಲಿ ನಡೆದಿದೆ.
ಹನೂರು ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಹಿರಿಯಂಬಲ ಗ್ರಾಮದ ಜಡೇಸ್ವಾಮಿ (36) ಮೃತ ದುರ್ದೈವಿ. ಜಡೇಸ್ವಾಮಿಯು ಹನೂರಿನ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ನ ಪುತ್ರಿಯನ್ನು ನೋಡಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ.
ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.