ETV Bharat / state

ಬೈಕ್​ ಸವಾರನಿಗೆ ಒದೆಯಲು​​ ಮುಂದಾದ ಎಎಸ್​ಐ​​​: ಪೊಲೀಸರ ನಡೆಗೆ ನೆಟ್ಟಿಗರಿಂದ ಆಕ್ರೋಶ

author img

By

Published : May 23, 2021, 4:42 PM IST

Updated : May 23, 2021, 5:20 PM IST

ಔಷಧಿ ಚೀಟಿ ಹಿಡಿದು ಬಂದ ಯುವಕನನ್ನು ಎಳೆದಾಡಿದ ಪೊಲೀಸರು ಅವಾಚ್ಯ ಪದಗಳಿಂದ ನಿಂದಿಸಿ, ಒದೆಯಲು ಮುಂದಾಗಿ ಬೈಕ್ ಕಸಿದುಕೊಂಡಿರುವ ದೃಶ್ಯವೊಂದು ವೈರಲ್​ ಆಗಿದೆ. ವಿಡಿಯೋವನ್ನು ಕೊಳ್ಳೇಗಾಲ ಸಮೀಪದ ಹಂಪಾಪುರ ಗ್ರಾಮದ ಅಭಿಷೇಕ್ ಎಂಬಾತ ತನ್ನ ಪೇಸ್​ಬುಕ್​​ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ನೆಟ್ಟಿಗರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

police-scold-a-bike-rider-and-beaten-in-kollegala-video-viral
ಪೊಲೀಸರ ದರ್ಪ

ಚಾಮರಾಜನಗರ: ಬೈಕ್ ಸವಾರನಿಗೆ ಅವಾಚ್ಯ ಪದಗಳಿಂದ ನಿಂದಿಸಿ ನಡುರಸ್ತೆಯಲ್ಲಿಯೇ ಎಎಸ್ಐ​ ಒದೆಯಲು ಮುಂದಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಪೊಲೀಸರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಇಂದು ಬೆಳಗ್ಗೆ ಕೊಳ್ಳೇಗಾಲದಲ್ಲಿ ನಡೆದಿದೆ ಎನ್ನಲಾಗ್ತಿದೆ. ಔಷಧಿ ಚೀಟಿ ಹಿಡಿದು ಬಂದ ಯುವಕನನ್ನು ಎಳೆದಾಡಿದ ಪೊಲೀಸರು ಅವಾಚ್ಯ ಪದಗಳಿಂದ ಬೈದು, ಒದೆಯಲು ಮುಂದಾಗಿ ಬೈಕ್ ಕಸಿದುಕೊಂಡಿರುವ ದೃಶ್ಯ ಎಲ್ಲೆಡೆ ಹರಿದಾಡುತ್ತಿದೆ. ವಿಡಿಯೋವನ್ನು ಕೊಳ್ಳೇಗಾಲ ಸಮೀಪದ ಹಂಪಾಪುರ ಗ್ರಾಮದ ಅಭಿಷೇಕ್ ಎಂಬಾತ ತನ್ನ ಫೇಸ್​ಬುಕ್​​ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ನೆಟ್ಟಿಗರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಪೊಲೀಸರ ನಡೆಗೆ ನೆಟ್ಟಿಗರಿಂದ ಆಕ್ರೋಶ..!

ಪೊಲೀಸರು ಮಾಡುತ್ತಿರುವುದು ನಮ್ಮ ಒಳ್ಳೆಯದಕ್ಕೆ. ಆದರೆ, ಇತ್ತೀಚೆಗೆ ಕೆಲ ಪೊಲೀಸರು ದರ್ಪದಿಂದ ವರ್ತಿಸುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಇಂತಹವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಜನರು ಒತ್ತಾಯಿಸಿದ್ದಾರೆ.

ಘಟನೆ ಸಂಬಂಧ ಮಾಹಿತಿಗಾಗಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೊಳ್ಳೇಗಾಲ ಪಿಎಸ್ಐಗೆ ಕರೆ ಮಾಡಿದರೂ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ.

ಚಾಮರಾಜನಗರ: ಬೈಕ್ ಸವಾರನಿಗೆ ಅವಾಚ್ಯ ಪದಗಳಿಂದ ನಿಂದಿಸಿ ನಡುರಸ್ತೆಯಲ್ಲಿಯೇ ಎಎಸ್ಐ​ ಒದೆಯಲು ಮುಂದಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಪೊಲೀಸರ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಇಂದು ಬೆಳಗ್ಗೆ ಕೊಳ್ಳೇಗಾಲದಲ್ಲಿ ನಡೆದಿದೆ ಎನ್ನಲಾಗ್ತಿದೆ. ಔಷಧಿ ಚೀಟಿ ಹಿಡಿದು ಬಂದ ಯುವಕನನ್ನು ಎಳೆದಾಡಿದ ಪೊಲೀಸರು ಅವಾಚ್ಯ ಪದಗಳಿಂದ ಬೈದು, ಒದೆಯಲು ಮುಂದಾಗಿ ಬೈಕ್ ಕಸಿದುಕೊಂಡಿರುವ ದೃಶ್ಯ ಎಲ್ಲೆಡೆ ಹರಿದಾಡುತ್ತಿದೆ. ವಿಡಿಯೋವನ್ನು ಕೊಳ್ಳೇಗಾಲ ಸಮೀಪದ ಹಂಪಾಪುರ ಗ್ರಾಮದ ಅಭಿಷೇಕ್ ಎಂಬಾತ ತನ್ನ ಫೇಸ್​ಬುಕ್​​ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ನೆಟ್ಟಿಗರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಪೊಲೀಸರ ನಡೆಗೆ ನೆಟ್ಟಿಗರಿಂದ ಆಕ್ರೋಶ..!

ಪೊಲೀಸರು ಮಾಡುತ್ತಿರುವುದು ನಮ್ಮ ಒಳ್ಳೆಯದಕ್ಕೆ. ಆದರೆ, ಇತ್ತೀಚೆಗೆ ಕೆಲ ಪೊಲೀಸರು ದರ್ಪದಿಂದ ವರ್ತಿಸುತ್ತಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಇವರಿಗೆ ಅಧಿಕಾರ ಕೊಟ್ಟವರು ಯಾರು? ಇಂತಹವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಜನರು ಒತ್ತಾಯಿಸಿದ್ದಾರೆ.

ಘಟನೆ ಸಂಬಂಧ ಮಾಹಿತಿಗಾಗಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಕೊಳ್ಳೇಗಾಲ ಪಿಎಸ್ಐಗೆ ಕರೆ ಮಾಡಿದರೂ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ.

Last Updated : May 23, 2021, 5:20 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.