ಚಾಮರಾಜನಗರ : ಕಾರ್ತಿಕ ಮಾಸದ ಕೊನೆಯ ಸೋಮವಾರದ ಪ್ರಯುಕ್ತ ಹನೂರು ತಾಲೂಕಿನ ಲೊಕ್ಕನಹಳ್ಳಿ ಸಮೀಪದ ಸಿದ್ದಪ್ಪಾಜಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿದೆ. ಈ ವೇಳೆ ಕುದಿಯುವ ಎಣ್ಣೆಯಲ್ಲಿ ಅರ್ಚಕರು ಕೈ ಅದ್ದಿ ಅಚ್ಚರಿ ಮೂಡಿಸಿದ್ದಾರೆ.
ಒಲೆಯ ಮೇಲೆ ಕುದಿಯುತ್ತಿರುವ ಎಣ್ಣೆಗೆ ಕೈ ಹಾಕುವ ಮೂಲಕ ನೆರೆದಿದ್ದವರು ಹುಬ್ಬೇರಿಸುವಂತೆ ಮಾಡಿದ್ದಾರೆ. ದೇವಾಲಯದಲ್ಲಿ ವಾದ್ಯ ಮೇಳದೊಂದಿಗೆ ಕಂಡಾಯ ಹೊತ್ತ ಅರ್ಚಕ ಸಿದ್ದರಾಜು ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕುಣಿಯುತ್ತಾ ಬಂದು ಕುದಿಯುತ್ತಿದ್ದ ಎಣ್ಣೆಗೆ ಕೈ ಹಾಕಿ 3 ಬಾರಿ ಕಜ್ಜಾಯವನ್ನು ಎತ್ತಿದರು.
ಜೊತೆಗೆ ನೆರೆದಿದ್ದ ಭಕ್ತರ ಮೇಲೂ ಕುದಿಯುವ ಎಣ್ಣೆ ಎರಚಿರುವುದು ಕಂಡು ಬಂದಿದೆ. ಕುದಿಯುವ ಎಣ್ಣೆಯಲ್ಲಿ ಕೈ ಹಾಕಿದರೂ ಸುಡದೇ ಇರುವುದು ಅಚ್ಚರಿ ಹುಟ್ಟಿಸಿದೆ.
ಇದನ್ನೂ ಓದಿ: ಹುಟ್ಟಿನಿಂದಲೇ 9 ವರ್ಷದ ಬಾಲಕಿ ಹೊಟ್ಟೆಯಲ್ಲಿ ಮಗು.. ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು..