ಚಾಮರಾಜನಗರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಹೋಟೆಲ್ ಮೇಲೆ ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಪಟ್ಟಣದ ಸುರಭಿ ಹೋಟೆಲ್ ಮೇಲೆ ಗುಂಡ್ಲುಪೇಟೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮೂವರು ಮಹಿಳೆಯರನ್ನು ರಕ್ಷಿಸಿ ಕೇರಳ ಮೂಲದ ಅಬ್ದುಲ್ ರಶೀದ್ ಹಾಗೂ ಕುಮಾರ್ ಎಂಬುವರನ್ನು ಬಂಧಿಸಲಾಗಿದೆ.
ಲಾಟರಿ ಹಾಗೂ ವೇಶ್ಯಾವಾಟಿಕೆ ಅಡ್ಡೆಗಳು ಪಟ್ಟಣದಲ್ಲಿ ಹೆಚ್ಚಾಗಿರುವ ಕುರಿತು ಆರೋಪ ಕೇಳಿ ಬರುತ್ತಿರುವ ನಡುವೆಯೇ ಪಟ್ಟಣದ ಮುಖ್ಯಭಾಗದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಬೆಳಕಿಗೆ ಬಂದಿರುವುದು ಕಳವಳಕಾರಿ. ಈ ಕುರಿತು ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.