ETV Bharat / state

ಕ್ವಾರಿ ಕುಸಿತ: ರಕ್ಷಣಾ ಕಾರ್ಯಕ್ಕಿರುವ ತೊಡಕಿನ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ - ಗುಂಡ್ಲುಪೇಟೆಯಲ್ಲಿ ಬಿಳಿಕಲ್ಲು ಕ್ವಾರಿ ಕುಸಿತ ಬರದಿಂದ ಸಾಗಿದ ರಕ್ಷಣಾ ಕಾರ್ಯ

ಕಲ್ಲನ್ನು ಜೋರಾಗಿ ಜರುಗಿಸಿದರೇ ಕುಸಿಯುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆ ವಿಳಂಬವಾಗುತ್ತಿದೆ. ವೈಬ್ರೇಷನ್ ಉಂಟಾಗದಂತೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ರಕ್ಷಣಾ ಸಿಬ್ಬಂದಿಯ ಜೀವವನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆ ಕೈಗೊಳ್ಳಬೇಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕ್ವಾರಿ ಕುಸಿತ ಕಾರ್ಯಾಚರಣೆ
ಕ್ವಾರಿ ಕುಸಿತ ಕಾರ್ಯಾಚರಣೆ
author img

By

Published : Mar 5, 2022, 3:30 PM IST

Updated : Mar 5, 2022, 3:41 PM IST

ಚಾಮರಾಜನಗರ: ಗುಂಡ್ಲುಪೇಟೆ ಮಡಹಳ್ಳಿ ಕ್ವಾರಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಕ್ಕೆ NDRF, SDRF ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಹಾಸ ಪಡುತ್ತಿದ್ದು, ಕ್ವಾರಿಯ ಗುಡ್ಡ ಮತ್ತೆ ಕುಸಿಯುವ ಭೀತಿಯಲ್ಲಿರುವುದರಿಂದ ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ.

ರಕ್ಷಣಾ ಕಾರ್ಯಕ್ಕಿರುವ ತೊಡಕಿನ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ

ಈ ಕುರಿತು, ಮೈಸೂರು ಅಗ್ನಿಶಾಮಕ ದಳ ಮುಖ್ಯಾಧಿಕಾರಿ ಜಯರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿ, ಶುಕ್ರವಾರ ಎರಡನೇ ಬಾರಿ ಕ್ವಾರಿ ಕುಸಿದಿದ್ದು, ಈಗಲೂ ಕುಸಿಯುವ ಹಂತದಲ್ಲಿದೆ. ಎರಡು ವಿಭಿನ್ನ ಪದರದ ಕಲ್ಲುಗಳಿರುವುದರಿಂದು ಜಾರುತ್ತಿದ್ದು, ಕ್ಷಿಪ್ರ ಕಾರ್ಯಾಚರಣೆಗೆ ತೊಡಕುಂಟಾಗಿದೆ ಎಂದು ತಿಳಿಸಿದರು.

ಈಗಾಗಲೇ ಒಂದು ಶವವನ್ನು ಮೇಲಕ್ಕೆತ್ತಿದ್ದು, ಎರಡು ಹಿಟಾಚಿಗಳಲ್ಲಿ ಇಬ್ಬರು ಆಪರೇಟರ್ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಒಬ್ಬರ ಕೈ ಹಾಗೂ ಇನ್ನೊಬ್ಬರ ಕಾಲು ಕಾಣುತ್ತಿದ್ದು ವಾಸನೆ ಬರುತ್ತಿದೆ. ಅವರು ಮೃತಪಟ್ಟಿರುವ ಸಾಧ್ಯತೆ ದಟ್ಟವಾಗಿದೆ. ಕಲ್ಲನ್ನು ಜೋರಾಗಿ ಜರುಗಿಸಿದರೇ ಕುಸಿಯುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆ ವಿಳಂಬವಾಗುತ್ತಿದೆ. ವೈಬ್ರೇಷನ್ ಉಂಟಾಗದಂತೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ರಕ್ಷಣಾ ಸಿಬ್ಬಂದಿಯ ಜೀವವನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯ ಕೈಗೊಳ್ಳಬೇಕಿದೆ ಎಂದರು.

ಇದನ್ನೂ ಓದಿ : ಚಾಮರಾಜನಗರದಲ್ಲಿ ಒಂದು ತಿಂಗಳು ಎಲ್ಲ ರೀತಿಯ ಗಣಿಗಾರಿಕೆ ಬಂದ್: ಸಚಿವ ವಿ.ಸೋಮಣ್ಣ

25 ಮಂದಿ ಎನ್‌ಡಿಆರ್‌ಎಫ್, 25 ಮಂದಿ ಎಸ್‌ಡಿಆರ್‌ಎಫ್, 50 ಮಂದಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಲ್ಲುಗಳನ್ನು ಸರಿಸಲು ಹರಸಾಹಸವನ್ನೇ ಪಡಬೇಕಿದೆ ಎಂದು ಹೇಳಿದ್ದಾರೆ.

ಸಚಿವ ಸೋಮಣ್ಣ, ಶಾಸಕ ನಿರಂಜನ್ ಭೇಟಿ: ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಶಾಸಕ ನಿರಂಜನಕುಮಾರ್ ಭೇಟಿ ನೀಡಿ ರಕ್ಷಣಾ ಕಾರ್ಯ ಪರಿಶೀಲಿಸಿದರು. ಇದೇ ವೇಳೆ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ, ನಿರ್ಲಕ್ಷ್ಯದಿಂದಲೇ ಈ ಅವಘಡ ಆಗಿದ್ದು, ಕೂಡಲೇ ಕ್ವಾರಿಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿ ಎಂದು ಸೂಚಿಸಿದರು.

ಕೆಲ ಸ್ಥಳೀಯರು ಸಚಿವ ಸೋಮಣ್ಣಗೆ ಘೇರಾವ್ ಹಾಕಿ ಪ್ರಭಾವಿಗಳ ಕೈವಾಡ, ಅಧಿಕಾರಿಗಳ ಶಾಮೀಲಿನಿಂದಾಗಿ ಈ ದುರ್ಘಟನೆ ಸಂಭವಿಸಿದೆ. ಎಷ್ಟೇ ಬಾರಿ ದೂರು ನೀಡಿದರೂ ಯಾವುದೇ ಕ್ರಮ ವಹಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಚಿವರ ಕಾರನ್ನು ಅಡ್ಡಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಚಾಮರಾಜನಗರ: ಗುಂಡ್ಲುಪೇಟೆ ಮಡಹಳ್ಳಿ ಕ್ವಾರಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಕ್ಕೆ NDRF, SDRF ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಹಾಸ ಪಡುತ್ತಿದ್ದು, ಕ್ವಾರಿಯ ಗುಡ್ಡ ಮತ್ತೆ ಕುಸಿಯುವ ಭೀತಿಯಲ್ಲಿರುವುದರಿಂದ ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ.

ರಕ್ಷಣಾ ಕಾರ್ಯಕ್ಕಿರುವ ತೊಡಕಿನ ಬಗ್ಗೆ ಮಾಹಿತಿ ನೀಡಿದ ಅಧಿಕಾರಿ

ಈ ಕುರಿತು, ಮೈಸೂರು ಅಗ್ನಿಶಾಮಕ ದಳ ಮುಖ್ಯಾಧಿಕಾರಿ ಜಯರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿ, ಶುಕ್ರವಾರ ಎರಡನೇ ಬಾರಿ ಕ್ವಾರಿ ಕುಸಿದಿದ್ದು, ಈಗಲೂ ಕುಸಿಯುವ ಹಂತದಲ್ಲಿದೆ. ಎರಡು ವಿಭಿನ್ನ ಪದರದ ಕಲ್ಲುಗಳಿರುವುದರಿಂದು ಜಾರುತ್ತಿದ್ದು, ಕ್ಷಿಪ್ರ ಕಾರ್ಯಾಚರಣೆಗೆ ತೊಡಕುಂಟಾಗಿದೆ ಎಂದು ತಿಳಿಸಿದರು.

ಈಗಾಗಲೇ ಒಂದು ಶವವನ್ನು ಮೇಲಕ್ಕೆತ್ತಿದ್ದು, ಎರಡು ಹಿಟಾಚಿಗಳಲ್ಲಿ ಇಬ್ಬರು ಆಪರೇಟರ್ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಒಬ್ಬರ ಕೈ ಹಾಗೂ ಇನ್ನೊಬ್ಬರ ಕಾಲು ಕಾಣುತ್ತಿದ್ದು ವಾಸನೆ ಬರುತ್ತಿದೆ. ಅವರು ಮೃತಪಟ್ಟಿರುವ ಸಾಧ್ಯತೆ ದಟ್ಟವಾಗಿದೆ. ಕಲ್ಲನ್ನು ಜೋರಾಗಿ ಜರುಗಿಸಿದರೇ ಕುಸಿಯುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆ ವಿಳಂಬವಾಗುತ್ತಿದೆ. ವೈಬ್ರೇಷನ್ ಉಂಟಾಗದಂತೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ರಕ್ಷಣಾ ಸಿಬ್ಬಂದಿಯ ಜೀವವನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯ ಕೈಗೊಳ್ಳಬೇಕಿದೆ ಎಂದರು.

ಇದನ್ನೂ ಓದಿ : ಚಾಮರಾಜನಗರದಲ್ಲಿ ಒಂದು ತಿಂಗಳು ಎಲ್ಲ ರೀತಿಯ ಗಣಿಗಾರಿಕೆ ಬಂದ್: ಸಚಿವ ವಿ.ಸೋಮಣ್ಣ

25 ಮಂದಿ ಎನ್‌ಡಿಆರ್‌ಎಫ್, 25 ಮಂದಿ ಎಸ್‌ಡಿಆರ್‌ಎಫ್, 50 ಮಂದಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಲ್ಲುಗಳನ್ನು ಸರಿಸಲು ಹರಸಾಹಸವನ್ನೇ ಪಡಬೇಕಿದೆ ಎಂದು ಹೇಳಿದ್ದಾರೆ.

ಸಚಿವ ಸೋಮಣ್ಣ, ಶಾಸಕ ನಿರಂಜನ್ ಭೇಟಿ: ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಶಾಸಕ ನಿರಂಜನಕುಮಾರ್ ಭೇಟಿ ನೀಡಿ ರಕ್ಷಣಾ ಕಾರ್ಯ ಪರಿಶೀಲಿಸಿದರು. ಇದೇ ವೇಳೆ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ, ನಿರ್ಲಕ್ಷ್ಯದಿಂದಲೇ ಈ ಅವಘಡ ಆಗಿದ್ದು, ಕೂಡಲೇ ಕ್ವಾರಿಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿ ಎಂದು ಸೂಚಿಸಿದರು.

ಕೆಲ ಸ್ಥಳೀಯರು ಸಚಿವ ಸೋಮಣ್ಣಗೆ ಘೇರಾವ್ ಹಾಕಿ ಪ್ರಭಾವಿಗಳ ಕೈವಾಡ, ಅಧಿಕಾರಿಗಳ ಶಾಮೀಲಿನಿಂದಾಗಿ ಈ ದುರ್ಘಟನೆ ಸಂಭವಿಸಿದೆ. ಎಷ್ಟೇ ಬಾರಿ ದೂರು ನೀಡಿದರೂ ಯಾವುದೇ ಕ್ರಮ ವಹಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಚಿವರ ಕಾರನ್ನು ಅಡ್ಡಹಾಕಿ ಆಕ್ರೋಶ ವ್ಯಕ್ತಪಡಿಸಿದರು.

Last Updated : Mar 5, 2022, 3:41 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.