ETV Bharat / state

ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

author img

By

Published : Sep 26, 2019, 5:41 AM IST

ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆರಾಯನ ಆರ್ಭಟದಿಂದ ನೆರೆ ಪೀಡಿತ ಪ್ರದೇಶದ ಜನರಿಗೆ ಮತ್ತೆ ಅತಂಕ ಶುರುವಾಗಿದೆ.

ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ

ಚಿಕ್ಕಮಗಳೂರು/ಹಾಸನ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆರಾಯನ ಆರ್ಭಟದಿಂದ ನೆರೆ ಪೀಡಿತ ಪ್ರದೇಶದ ಜನರಿಗೆ ಮತ್ತೆ ಅತಂಕ ಶುರುವಾಗಿದೆ.

ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಹಾಗೂ ನಗರ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯನ್ನು ನೋಡಿ ಮತ್ತೆ ಮಲೆನಾಡಿನ ಜನರು ಬೆಚ್ಚಿಬೀಳುತ್ತಿದ್ದಾರೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಣಕಲ್, ಬಾಳೂರು, ಜಾವಳಿ, ಕಳಸ, ಶೃಂಗೇರಿ, ಕೊಪ್ಪ ಭಾಗದಲ್ಲಿಯೂ ಮಳೆಯಾಗುತ್ತಿದೆ. ನಿರಂತರ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತವಾಗಿದ್ದು, ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಯಿತು.

ಹಾಸನ ಜಿಲ್ಲೆಯಲ್ಲೂ ಸಹ ವರುಣ ತಂಪೆರೆದಿದ್ದಾನೆ. ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಅರಸೀಕೆರೆ ತಾಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗುಡುಗು ಸಹಿತ ಮಳೆಯಾಗುತ್ತಿರುವ ಕಾರಣ ನಗರದ ಪ್ರಮುಖ ಬಿಎಂ ರಸ್ತೆ, ಸಾಲಗಾಮೆ ರಸ್ತೆ, ಆರ್.ಸಿ ರಸ್ತೆ ಹಾಗೂ ಬಸೆಟ್ಟಿ ಕೊಪ್ಪಲು ರಸ್ತೆಗಳು ನೀರಿನಿಂದ ಜಲಾವೃತಗೊಂಡಿವೆ.

ಚಿಕ್ಕಮಗಳೂರು/ಹಾಸನ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆರಾಯನ ಆರ್ಭಟದಿಂದ ನೆರೆ ಪೀಡಿತ ಪ್ರದೇಶದ ಜನರಿಗೆ ಮತ್ತೆ ಅತಂಕ ಶುರುವಾಗಿದೆ.

ಹಾಸನ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಹಾಗೂ ನಗರ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆಯನ್ನು ನೋಡಿ ಮತ್ತೆ ಮಲೆನಾಡಿನ ಜನರು ಬೆಚ್ಚಿಬೀಳುತ್ತಿದ್ದಾರೆ. ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಬಣಕಲ್, ಬಾಳೂರು, ಜಾವಳಿ, ಕಳಸ, ಶೃಂಗೇರಿ, ಕೊಪ್ಪ ಭಾಗದಲ್ಲಿಯೂ ಮಳೆಯಾಗುತ್ತಿದೆ. ನಿರಂತರ ಮಳೆಯ ಕಾರಣ ಜನಜೀವನ ಅಸ್ತವ್ಯಸ್ತವಾಗಿದ್ದು, ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಯಿತು.

ಹಾಸನ ಜಿಲ್ಲೆಯಲ್ಲೂ ಸಹ ವರುಣ ತಂಪೆರೆದಿದ್ದಾನೆ. ಹಾಸನ, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಅರಸೀಕೆರೆ ತಾಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗುಡುಗು ಸಹಿತ ಮಳೆಯಾಗುತ್ತಿರುವ ಕಾರಣ ನಗರದ ಪ್ರಮುಖ ಬಿಎಂ ರಸ್ತೆ, ಸಾಲಗಾಮೆ ರಸ್ತೆ, ಆರ್.ಸಿ ರಸ್ತೆ ಹಾಗೂ ಬಸೆಟ್ಟಿ ಕೊಪ್ಪಲು ರಸ್ತೆಗಳು ನೀರಿನಿಂದ ಜಲಾವೃತಗೊಂಡಿವೆ.

Intro:Kn_Ckm_03_Rain_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಇಂದೂ ಮತ್ತೆ ಪ್ರಾರಂಭವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಹಾಗೂ ಚಿಕ್ಕಮಗಳೂರು ನಗರ ಪ್ರದೇಶದಲ್ಲಿ ಕಳೆದ ಒಂದು ಗಂಟೆಯಿಂದ ಧಾರಕಾರ ಮಳೆ ಸುರಿಯುತ್ತಿದ್ದು ಈ ಮಳೆಯನ್ನು ನೋಡಿ ಮತ್ತೆ ಮಲೆನಾಡಿನ ಜನರು ಬೆಚ್ಚು ಬೀಳುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೇ ಸತತ ಒಂದು ವಾರಗಳ ಕಾಲ ಸುರಿದ ಮಹಾ ಮಳೆ ಜನರ ಬದುಕನ್ನೇ ಸರ್ವ ನಾಶ ಮಾಡಿ ಹೋಗಿದ್ದು ಮಳೆ ಎಂದರೇ ಸಾಕು ಮಲೆನಾಡಿನ ಜನರು ಭಯ ಪಡುವಂತಾಗಿದೆ. ಚಿಕ್ಕಮಗಳೂರು ನಗರ,ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಢಿ ಘಾಟಿ,ಬಣಕಲ್, ಬಾಳೂರು,ಜಾವಳಿ, ಕಳಸ, ಶೃಂಗೇರಿ, ಕೊಪ್ಪ ಭಾಗದಲ್ಲಿಯೂ ಮಳೆಯಾಗುತ್ತಿದ್ದು ಎಡೆ ಬಿಡದೇ ಕಳೆದ ಒಂದು ಗಂಟೆಯಿಂದ ಈ ಮಳೆ ಸುರಿಯುತ್ತಿದೆ. ನಿರಂತರ ಮಳೆಯ ಕಾರಣ ಜನ ಜೀವನ ಅಸ್ತವ್ಯಸ್ಥವಾಗಿದ್ದು ಚಾರ್ಮಾಡಿ ಘಾಟಿ ರಸ್ತೆಯಲ್ಲಿಯೂ ವಾಹನ ಸಂಚಾರದಲ್ಲಿಯೂ ಅಸ್ತವ್ಯಸ್ಥವಾಗಿದೆ. ಕೇವಲ ಒಂದು ಗಂಟೆಯಿಂದಾ ಸುರಿಯುತ್ತಿರುವ ಮಳೆಯಿಂದಾ ಮಲೆನಾಡಿನ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಆಗಿದೆ...

Conclusion:ರಾಜಕುಮಾರ್....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.