ಚಾಮರಾಜನಗರ : ಲಂಚಕ್ಕೆ ಬೇಡಿಕೆಯಿಟ್ಟು ಹಣ ಪಡೆಯುವಾಗ ಶಿರಸ್ತೇದಾರನೋರ್ವ ಎಸಿಬಿ ಬಲೆಗೆ ಬಿದ್ದಿದ್ದಾನೆ. ತಾಲೂಕು ಕಚೇರಿಯ ಆರ್ಆರ್ಟಿ ಶಾಖೆಯ ಶಿರಸ್ತೇದಾರ ಮಂಜುನಾಥ್ ಲಂಚ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾನೆ.
ಬದನಗುಪ್ಪೆಯ ನಾಗನಾಯಕ ಎಂಬುವರು ತಮ್ಮ ಜಮೀನಿನ ಆರ್ಟಿಸಿ ತಿದ್ದುಪಡಿ ಮಾಡಲು ಅರ್ಜಿ ಸಲ್ಲಿಸಿದ ವೇಳೆ 30 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟು, ಮೊದಲ ಕಂತಿನಲ್ಲಿ 10 ಸಾವಿರ ರೂ. ಕೊಡಲು ಒತ್ತಾಯಿಸಿದ್ದರು ಎನ್ನಲಾಗಿದೆ.
10 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.