ETV Bharat / state

ಕುರಿ ಮೇಯಿಸಲು ಕಾಡೊಳಗೆ ಹೋದ ಕುರಿಗಾಹಿ ಕಾಡಾನೆ ದಾಳಿಗೆ ಬಲಿ

author img

By

Published : Aug 16, 2020, 7:05 PM IST

ಕುರಿ ಮೇಯಿಸಲು ಕಾಡಿಗೆ ಹೋಗಿದ್ದ ಕುರಿಗಾಹಿ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಯರಂಬಾಡಿ ಗ್ರಾಮದಲ್ಲಿ ಜರುಗಿದೆ.

shepherd-died-from-wild-elephant-attack-at-chamarajangar
ಕುರಿಗಾಹಿ ಕಾಡನೆಗೆ ಬಲಿ

ಚಾಮರಾಜನಗರ: ಕಾಡೊಳಗೆ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಕಾಡಾನೆಗೆ ಬಲಿಯಾಗಿರುವ ಘಟನೆ ಹನೂರು ತಾಲೂಕಿನ ಹೂಗ್ಯಂ ಸಮೀಪದ ಯರಂಬಾಡಿ ಗ್ರಾಮದಲ್ಲಿ ನಡೆದಿದೆ.

ಯರಂಬಾಡಿ ಗ್ರಾಮದ ಬಸವೇಗೌಡ ಎಂಬವರ ಮಗ ಚನ್ನೇಗೌಡ ಗೌಡ (48) ಮೃತ ದುರ್ದೈವಿ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿ ಅರಣ್ಯವಾಪ್ತಿಯಲ್ಲಿ ಘಟನೆ ಜರುಗಿರುವುದಾಗಿ ಮಾಹಿತಿ ನೀಡಿದ್ದಾರೆ.

ಈ ಘಟನೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಜರುಗಿದ ಪರಿಣಾಮ ಪರಿಹಾರ ನೀಡಲಾಗುವುದಿಲ್ಲ. ಈ ಕುರಿತು ಮತ್ತೊಮ್ಮೆ ಪರಿಶೀಲಿಸುವುದಾಗಿ ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಎಫ್ಒ ಏಡುಕುಂಡಲು ತಿಳಿಸಿದ್ದಾರೆ.

ಚಾಮರಾಜನಗರ: ಕಾಡೊಳಗೆ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಕಾಡಾನೆಗೆ ಬಲಿಯಾಗಿರುವ ಘಟನೆ ಹನೂರು ತಾಲೂಕಿನ ಹೂಗ್ಯಂ ಸಮೀಪದ ಯರಂಬಾಡಿ ಗ್ರಾಮದಲ್ಲಿ ನಡೆದಿದೆ.

ಯರಂಬಾಡಿ ಗ್ರಾಮದ ಬಸವೇಗೌಡ ಎಂಬವರ ಮಗ ಚನ್ನೇಗೌಡ ಗೌಡ (48) ಮೃತ ದುರ್ದೈವಿ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿ ಅರಣ್ಯವಾಪ್ತಿಯಲ್ಲಿ ಘಟನೆ ಜರುಗಿರುವುದಾಗಿ ಮಾಹಿತಿ ನೀಡಿದ್ದಾರೆ.

ಈ ಘಟನೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಜರುಗಿದ ಪರಿಣಾಮ ಪರಿಹಾರ ನೀಡಲಾಗುವುದಿಲ್ಲ. ಈ ಕುರಿತು ಮತ್ತೊಮ್ಮೆ ಪರಿಶೀಲಿಸುವುದಾಗಿ ಮಲೆಮಹದೇಶ್ವರ ವನ್ಯಜೀವಿ ಧಾಮದ ಡಿಎಫ್ಒ ಏಡುಕುಂಡಲು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.