ETV Bharat / state

ಶಸ್ತ್ರಚಿಕಿತ್ಸೆಗೊಳಗಾಗಿದ್ರೂ ಪರೀಕ್ಷೆ ಬರೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ.. ಶಿಕ್ಷಣ ಸಚಿವರಿಂದ ಮೆಚ್ಚುಗೆ - SSLC student wrote exam even she has undergone surgery

ಆರೋಗ್ಯ ಸಂಪೂರ್ಣ ಸ್ಥಿರವಾಗುವಷ್ಟರಲ್ಲಿಯೇ ಪರೀಕ್ಷೆ ನಿಗದಿಯಾಗಿತ್ತು. ಪೋಷಕರು ಪರೀಕ್ಷೆ ಬರೆಸುವ ವಿಚಾರದಲ್ಲಿ ಗೊಂದಲಕ್ಕೀಡಾಗಿದ್ದರು. ಆದರೆ, ಛಲಬಿಡದ ಶ್ವೇತಾ ಪರೀಕ್ಷೆ ಬರೆದಿದ್ದಾಳೆ..

SSLC student wrote exam even she has undergone surgery
ಶಸ್ತ್ರಚಿಕಿತ್ಸೆಗೆ ಒಳಗಾಗಿದ್ರೂ ಪರೀಕ್ಷೆ ಬರೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ
author img

By

Published : Jul 23, 2021, 3:08 PM IST

ಕೊಳ್ಳೇಗಾಲ : ಬೆನ್ನು ನೋವಿನಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿಯೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಸೈ ಎನಿಸಿಕೊಂಡ ವಿದ್ಯಾರ್ಥಿನಿಯೋರ್ವಳನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಶಂಸಿದ್ದಾರೆ.

ತಾಲೂಕಿನ ಹೊಸಮಾಲಂಗಿ ಗ್ರಾಮದ ಶ್ವೇತ ಎಂಬ ವಿದ್ಯಾರ್ಥಿನಿ ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾಳೆ. ಶ್ವೇತ ಚೆನ್ನಾಗಿ ಓದುವ ವಿದ್ಯಾರ್ಥಿನಿಯಾಗಿದ್ದಳು. ಈಕೆ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ಹಠತೊಟ್ಟಿದ್ದು, ಅದರಂತೆ ಅನಾರೋಗ್ಯದ ಸ್ಥಿತಿಯಲ್ಲೂ ಪರೀಕ್ಷೆ ಬರೆದಿದ್ದಾಳೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ರೂ ಪರೀಕ್ಷೆ ಬರೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ

ಕೆಲವು ತಿಂಗಳಿನಿಂದ ಬೆನ್ನುನೋವಿನಿಂದ ಬಳಲುತ್ತಿದ್ದ ಈ ಬಾಲಕಿ ಕೇವಲ ಒಂದು ತಿಂಗಳ ಹಿಂದೆ ನಿಮ್ಹಾನ್ಸ್​ನಲ್ಲಿ ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಆರೋಗ್ಯ ಸಂಪೂರ್ಣ ಸ್ಥಿರವಾಗುವಷ್ಟರಲ್ಲಿಯೇ ಪರೀಕ್ಷೆ ನಿಗದಿಯಾಗಿತ್ತು. ಪೋಷಕರು ಪರೀಕ್ಷೆ ಬರೆಸುವ ವಿಚಾರದಲ್ಲಿ ಗೊಂದಲಕ್ಕೀಡಾಗಿದ್ದರು. ಆದರೆ, ಛಲಬಿಡದ ಶ್ವೇತಾ ಪರೀಕ್ಷೆ ಬರೆದಿದ್ದಾಳೆ.

ಈ ಹಿನ್ನೆಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಶಾಸಕ ಎನ್.ಮಹೇಶ್ ಖುದ್ದು ವಿದ್ಯಾರ್ಥಿನಿ ಮನೆಗೆ ತೆರಳಿ ಬಾಲಕಿಯ ಯೋಗ ಕ್ಷೇಮ ವಿಚಾರಿಸಿದ್ದರು. ಅನಾರೊಗ್ಯದಿಂದ ಬಳಲುತ್ತಿದ್ದರೂ ದಿಟ್ಟತನದಿಂದ ಪರೀಕ್ಷೆ ಎದುರಿಸಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊಳ್ಳೇಗಾಲ : ಬೆನ್ನು ನೋವಿನಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿಯೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಸೈ ಎನಿಸಿಕೊಂಡ ವಿದ್ಯಾರ್ಥಿನಿಯೋರ್ವಳನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಶಂಸಿದ್ದಾರೆ.

ತಾಲೂಕಿನ ಹೊಸಮಾಲಂಗಿ ಗ್ರಾಮದ ಶ್ವೇತ ಎಂಬ ವಿದ್ಯಾರ್ಥಿನಿ ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾಳೆ. ಶ್ವೇತ ಚೆನ್ನಾಗಿ ಓದುವ ವಿದ್ಯಾರ್ಥಿನಿಯಾಗಿದ್ದಳು. ಈಕೆ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೂ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ಹಠತೊಟ್ಟಿದ್ದು, ಅದರಂತೆ ಅನಾರೋಗ್ಯದ ಸ್ಥಿತಿಯಲ್ಲೂ ಪರೀಕ್ಷೆ ಬರೆದಿದ್ದಾಳೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿದ್ರೂ ಪರೀಕ್ಷೆ ಬರೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ

ಕೆಲವು ತಿಂಗಳಿನಿಂದ ಬೆನ್ನುನೋವಿನಿಂದ ಬಳಲುತ್ತಿದ್ದ ಈ ಬಾಲಕಿ ಕೇವಲ ಒಂದು ತಿಂಗಳ ಹಿಂದೆ ನಿಮ್ಹಾನ್ಸ್​ನಲ್ಲಿ ಬೆನ್ನು ಮೂಳೆಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಆರೋಗ್ಯ ಸಂಪೂರ್ಣ ಸ್ಥಿರವಾಗುವಷ್ಟರಲ್ಲಿಯೇ ಪರೀಕ್ಷೆ ನಿಗದಿಯಾಗಿತ್ತು. ಪೋಷಕರು ಪರೀಕ್ಷೆ ಬರೆಸುವ ವಿಚಾರದಲ್ಲಿ ಗೊಂದಲಕ್ಕೀಡಾಗಿದ್ದರು. ಆದರೆ, ಛಲಬಿಡದ ಶ್ವೇತಾ ಪರೀಕ್ಷೆ ಬರೆದಿದ್ದಾಳೆ.

ಈ ಹಿನ್ನೆಲೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಶಾಸಕ ಎನ್.ಮಹೇಶ್ ಖುದ್ದು ವಿದ್ಯಾರ್ಥಿನಿ ಮನೆಗೆ ತೆರಳಿ ಬಾಲಕಿಯ ಯೋಗ ಕ್ಷೇಮ ವಿಚಾರಿಸಿದ್ದರು. ಅನಾರೊಗ್ಯದಿಂದ ಬಳಲುತ್ತಿದ್ದರೂ ದಿಟ್ಟತನದಿಂದ ಪರೀಕ್ಷೆ ಎದುರಿಸಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.