ETV Bharat / state

ಮಾಹಿತಿ ನೀಡದ ತಹಶೀಲ್ದಾರ್​ಗೆ 25 ಸಾವಿರ ದಂಡ: ಚಕ್ಕರ್ ಹೊಡೆದ ಪಿಡಿಒ ಅಮಾನತು

ಸರಿಯಾದ ಸಮಯದೊಳಗೆ ಮಾಹಿತಿ ನೀಡದ ತಹಶೀಲ್ದಾರ್​ಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ದಂಡವನ್ನು ವಿಧಿಸಿದೆ. ಇನ್ನೂ ಇತ್ತಾ ಗುಂಡ್ಲುಪೇಟೆ ತಾಲೂಕಿನಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎನ್ ವಿಶ್ವನಾಥ ಎಂಬುವರನ್ನು ಕರ್ತವ್ಯ ಲೋಪ ಹಿನ್ನೆಲೆ ಅಮಾನತು ಮಾಡಲಾಗಿದೆ.

author img

By

Published : Dec 27, 2022, 12:34 PM IST

ಚಾಮರಾಜನಗರ
ಚಾಮರಾಜನಗರ

ಚಾಮರಾಜನಗರ: ಕಾಲ ಮಿತಿಯೊಳಗೆ ಮಾಹಿತಿ ನೀಡದ ಕೊಳ್ಳೇಗಾಲ ತಹಶೀಲ್ದಾರ್ ಎಂ ಮಂಜುಳಾ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25 ಸಾವಿರ ದಂಡ್ನು ವಿಧಿಸಿ ಆದೇಶಿಸಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಕೆ ಎಲ್ ಲಿಂಗರಾಜು ಅವರ ದೂರಿನ ಮೇರೆಗೆ ರಾಜ್ಯ ಮಾಹಿತಿ ಆಯುಕ್ತ ಎಚ್ ಸಿ ಸತ್ಯನ್ ತೆರೆದ ನ್ಯಾಯಾಲಯದಲ್ಲಿ ದಂಡ ವಿಧಿಸಿದ್ದಾರೆ.

ಏನಿದು ಪ್ರಕರಣ: ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ನಿವಾಸಿ ಕೆ ಎಲ್ ಲಿಂಗರಾಜು ಎಂಬುವರು 2022ರ ಜ.1 ರಂದು ಮಾಹಿತಿ ಹಕ್ಕು ಕಾಯ್ದೆಯಡಿ ತಹಶೀಲ್ದಾರ್​ಗೆ ಅರ್ಜಿ ಸಲ್ಲಿಸಿದ್ದರು. ಕುಣಗಳ್ಳಿ ಗ್ರಾಮದ ಸರ್ವೇ ನಂ.785ರಲ್ಲಿ ವಿಸ್ತೀರ್ಣ 4 ಎಕರೆ 76 ಸೆಂಟು ಇದರ ಖಾತೆ ಆದೇಶ ಸಂಖ್ಯೆ ಕ.ಅ.16/16-17 ಕೋರ್ಟು ಆದೇಶ ದಿ.27.06.2016 ನೇ ಸಾಲು ವಹಿವಾಟು ಸಂಖ್ಯೆ 194ಎಂ.ಆರ್. ನಂಬರ್ ಎಚ್.90 ಇದರ ತಹಶೀಲ್ದಾರ್ ಆದೇಶ ಜೆರಾಕ್ಸ್ ಪ್ರತಿಗಳು ಮತ್ತು ಕಮಲಮ್ಮ, ಚೆನ್ನಶೆಟ್ಟಿ, ಫ್ರಂಕು ಲೂಯಿಸ್, ಇವರುಗಳು ತಹಶೀಲ್ದಾರ್ ಕೋರ್ಟಿಗೆ ಸಲ್ಲಿಸಿದ್ದ ಪ್ರತಿ ಒಂದು ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ದೃಢಿಕರಿಸಿಕೊಡಲು ಕೋರಿದ್ದರು.

ತಹಶೀಲ್ದಾರ್​ಗೆ ದಂಡ ವಿಧಿಸಿದ ಆಯೋಗ: ಆದರೆ, ಇದಕ್ಕೆ ತಹಶೀಲ್ದಾರ್ ಸಕಾಲಕ್ಕೆ ಮಾಹಿತಿ ನೀಡದ ಹಿನ್ನೆಲೆ ಅರ್ಜಿದಾರರು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಪರಿಣಾಮ ರಾಜ್ಯ ಮಾಹಿತಿ ಹಕ್ಕಿನ ಆಯೋಗವು ತಹಶೀಲ್ದಾರ್ ಮಂಜುಳಾ ಅವರಿಗೆ ದಂಡ ವಿಧಿಸಿದೆ. ದಂಡದ ಮೊತ್ತವನ್ನು ಸರ್ಕಾರದ ಲೆಕ್ಕ ಶೀರ್ಷಿಕೆ ಖಾತೆಗೆ ಜಮಾ ಮಾಡಿಸುವಲ್ಲಿ ಸೂಕ್ತ ಕ್ರಮವಹಿಸುವಂತೆ ಉಪವಿಭಾಗಧಿಕಾರಿ ಗೀತಾ ಹುಡೇದ ಅವರಿಗೆ ಸೂಚಿಸಿದೆ.

ಪಿಡಿಒ ಅಮಾನತು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎನ್ ವಿಶ್ವನಾಥ ಎಂಬುವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇ ಸ್ವತ್ತು ಅರ್ಜಿ ವಿಲೇವಾರಿ ಮಾಡದಕ್ಕೆ ದೂರು: ಕಳೆದ 22ರಂದು ಬೆಳಗ್ಗೆ 10.40ಕ್ಕೆ ಗ್ರಾಮ ಪಂಚಾಯಿತಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ವೇಳೆ ವಿಶ್ವನಾಥ ಅವರು ಅನಧಿಕೃತವಾಗಿ ಗೈರು ಹಾಜರಾಗಿದ್ದರು. ಅಲ್ಲದೇ ಇ - ಸ್ವತ್ತು ಅರ್ಜಿ ವಿಲೇವಾರಿ ಮಾಡದಿರುವ ಬಗ್ಗೆ ಸಾರ್ವಜನಿಕರು ದೂರಿದ್ದರು. ದಾಖಲೆ ಕಡತಗಳ ಸಮರ್ಪಕ ನಿರ್ವಹಣೆ ಮಾಡದೇ ಇರುವುದು ಇತರೆ ಕರ್ತವ್ಯ ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ಎನ್. ವಿಶ್ವನಾಥ ಅವರನ್ನು ಅಮಾನತು ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಾಹಿತಿ ನೀಡಲು ವಿಳಂಬ: ಬಿಬಿಎಂಪಿ ಅಧಿಕಾರಿಗೆ 10 ಸಾವಿರ ದಂಡ ವಿಧಿಸಿದ ಮಾಹಿತಿ ಆಯೋಗ

ಇನ್ನೂ ಅಕ್ಟೋಬರ್​ ತಿಂಗಳಿನಲ್ಲಿ ಸಾರ್ವಜನಿಕರೊಬ್ಬರು ಖಾತೆ ಕುರಿತಂತೆ ಕೋರಿದ್ದ ಮಾಹಿತಿಯನ್ನು ನಿಗದಿತ ಸಮಯದಲ್ಲಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ರಾಜ್ಯ ಮಾಹಿತಿ ಆಯೋಗ ದಂಡ ವಿಧಿಸಿತ್ತು. ಹೊರಮಾವಿನ ಬಿಬಿಎಂಪಿ ಕಂದಾಯ ಅಧಿಕಾರಿ ದೊಡ್ಡ ಶಾಮಾಚಾರಿ ಅವರಿಗೆ ಆಯೋಗ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿತ್ತು.

ಚಾಮರಾಜನಗರ: ಕಾಲ ಮಿತಿಯೊಳಗೆ ಮಾಹಿತಿ ನೀಡದ ಕೊಳ್ಳೇಗಾಲ ತಹಶೀಲ್ದಾರ್ ಎಂ ಮಂಜುಳಾ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25 ಸಾವಿರ ದಂಡ್ನು ವಿಧಿಸಿ ಆದೇಶಿಸಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಕೆ ಎಲ್ ಲಿಂಗರಾಜು ಅವರ ದೂರಿನ ಮೇರೆಗೆ ರಾಜ್ಯ ಮಾಹಿತಿ ಆಯುಕ್ತ ಎಚ್ ಸಿ ಸತ್ಯನ್ ತೆರೆದ ನ್ಯಾಯಾಲಯದಲ್ಲಿ ದಂಡ ವಿಧಿಸಿದ್ದಾರೆ.

ಏನಿದು ಪ್ರಕರಣ: ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ನಿವಾಸಿ ಕೆ ಎಲ್ ಲಿಂಗರಾಜು ಎಂಬುವರು 2022ರ ಜ.1 ರಂದು ಮಾಹಿತಿ ಹಕ್ಕು ಕಾಯ್ದೆಯಡಿ ತಹಶೀಲ್ದಾರ್​ಗೆ ಅರ್ಜಿ ಸಲ್ಲಿಸಿದ್ದರು. ಕುಣಗಳ್ಳಿ ಗ್ರಾಮದ ಸರ್ವೇ ನಂ.785ರಲ್ಲಿ ವಿಸ್ತೀರ್ಣ 4 ಎಕರೆ 76 ಸೆಂಟು ಇದರ ಖಾತೆ ಆದೇಶ ಸಂಖ್ಯೆ ಕ.ಅ.16/16-17 ಕೋರ್ಟು ಆದೇಶ ದಿ.27.06.2016 ನೇ ಸಾಲು ವಹಿವಾಟು ಸಂಖ್ಯೆ 194ಎಂ.ಆರ್. ನಂಬರ್ ಎಚ್.90 ಇದರ ತಹಶೀಲ್ದಾರ್ ಆದೇಶ ಜೆರಾಕ್ಸ್ ಪ್ರತಿಗಳು ಮತ್ತು ಕಮಲಮ್ಮ, ಚೆನ್ನಶೆಟ್ಟಿ, ಫ್ರಂಕು ಲೂಯಿಸ್, ಇವರುಗಳು ತಹಶೀಲ್ದಾರ್ ಕೋರ್ಟಿಗೆ ಸಲ್ಲಿಸಿದ್ದ ಪ್ರತಿ ಒಂದು ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ದೃಢಿಕರಿಸಿಕೊಡಲು ಕೋರಿದ್ದರು.

ತಹಶೀಲ್ದಾರ್​ಗೆ ದಂಡ ವಿಧಿಸಿದ ಆಯೋಗ: ಆದರೆ, ಇದಕ್ಕೆ ತಹಶೀಲ್ದಾರ್ ಸಕಾಲಕ್ಕೆ ಮಾಹಿತಿ ನೀಡದ ಹಿನ್ನೆಲೆ ಅರ್ಜಿದಾರರು ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಪರಿಣಾಮ ರಾಜ್ಯ ಮಾಹಿತಿ ಹಕ್ಕಿನ ಆಯೋಗವು ತಹಶೀಲ್ದಾರ್ ಮಂಜುಳಾ ಅವರಿಗೆ ದಂಡ ವಿಧಿಸಿದೆ. ದಂಡದ ಮೊತ್ತವನ್ನು ಸರ್ಕಾರದ ಲೆಕ್ಕ ಶೀರ್ಷಿಕೆ ಖಾತೆಗೆ ಜಮಾ ಮಾಡಿಸುವಲ್ಲಿ ಸೂಕ್ತ ಕ್ರಮವಹಿಸುವಂತೆ ಉಪವಿಭಾಗಧಿಕಾರಿ ಗೀತಾ ಹುಡೇದ ಅವರಿಗೆ ಸೂಚಿಸಿದೆ.

ಪಿಡಿಒ ಅಮಾನತು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎನ್ ವಿಶ್ವನಾಥ ಎಂಬುವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಇ ಸ್ವತ್ತು ಅರ್ಜಿ ವಿಲೇವಾರಿ ಮಾಡದಕ್ಕೆ ದೂರು: ಕಳೆದ 22ರಂದು ಬೆಳಗ್ಗೆ 10.40ಕ್ಕೆ ಗ್ರಾಮ ಪಂಚಾಯಿತಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ವೇಳೆ ವಿಶ್ವನಾಥ ಅವರು ಅನಧಿಕೃತವಾಗಿ ಗೈರು ಹಾಜರಾಗಿದ್ದರು. ಅಲ್ಲದೇ ಇ - ಸ್ವತ್ತು ಅರ್ಜಿ ವಿಲೇವಾರಿ ಮಾಡದಿರುವ ಬಗ್ಗೆ ಸಾರ್ವಜನಿಕರು ದೂರಿದ್ದರು. ದಾಖಲೆ ಕಡತಗಳ ಸಮರ್ಪಕ ನಿರ್ವಹಣೆ ಮಾಡದೇ ಇರುವುದು ಇತರೆ ಕರ್ತವ್ಯ ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ಎನ್. ವಿಶ್ವನಾಥ ಅವರನ್ನು ಅಮಾನತು ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಾಹಿತಿ ನೀಡಲು ವಿಳಂಬ: ಬಿಬಿಎಂಪಿ ಅಧಿಕಾರಿಗೆ 10 ಸಾವಿರ ದಂಡ ವಿಧಿಸಿದ ಮಾಹಿತಿ ಆಯೋಗ

ಇನ್ನೂ ಅಕ್ಟೋಬರ್​ ತಿಂಗಳಿನಲ್ಲಿ ಸಾರ್ವಜನಿಕರೊಬ್ಬರು ಖಾತೆ ಕುರಿತಂತೆ ಕೋರಿದ್ದ ಮಾಹಿತಿಯನ್ನು ನಿಗದಿತ ಸಮಯದಲ್ಲಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ರಾಜ್ಯ ಮಾಹಿತಿ ಆಯೋಗ ದಂಡ ವಿಧಿಸಿತ್ತು. ಹೊರಮಾವಿನ ಬಿಬಿಎಂಪಿ ಕಂದಾಯ ಅಧಿಕಾರಿ ದೊಡ್ಡ ಶಾಮಾಚಾರಿ ಅವರಿಗೆ ಆಯೋಗ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.