ETV Bharat / state

ಕರ್ನಾಟಕ ಬಂದ್​ಗೆ ಚಾಮರಾಜನಗರದಲ್ಲಿ ವ್ಯಾಪಕ ಬೆಂಬಲ.. ನಾಳೆ ಗಡಿ ಜಿಲ್ಲೆ ಸ್ತಬ್ಧ? - ರೈತರಿಂದ ಕರ್ನಾಟಕ ಬಂದ್​ಗೆ ಕರೆ

ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ರೈತ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್​ ಕರೆಗೆ ಚಾಮರಾಜನಗರದಲ್ಲಿ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಸೋಮವಾರ ಗಡಿ ಜಿಲ್ಲೆ ಸಂಪೂರ್ಣ ಸ್ತಬ್ಧವಾಗುವ ಸಾಧ್ಯತೆಯಿದೆ..

Support of various organizations for Karnataka Band in Chamarajanaga
ಕರ್ನಾಟಕ ಬಂದ್​ಗೆ ಚಾಮರಾಜನಗರದಲ್ಲಿ ಭಾರೀ ಬೆಂಬಲ
author img

By

Published : Sep 27, 2020, 4:48 PM IST

ಚಾಮರಾಜನಗರ : ಭೂ ಸುಧಾರಣೆ, ಎಪಿಎಂಸಿ‌ ಸೇರಿ 8 ವಿವಿಧ ಕಾಯ್ದೆಗಳ ತಿದ್ದುಪಡಿ ವಾಪಸ್ ಪಡೆಯಲು ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರೈತ ಸಂಘಟನೆಗಳ ಬಂದ್ ಕರೆಗೆ ಆಟೋ, ಟ್ಯಾಕ್ಸಿ, ಲಾರಿ ಚಾಲಕ ಮಾಲೀಕರ ಸಂಘ ಸೇರಿ ಕನ್ನಡ ಪರ ಸಂಘಟನೆಗಳು, ಎಸ್​ಡಿಪಿಐ, ದಲಿತ ಪರ ಸಂಘಟನೆಗಳು, ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ಗಂಟೆವರೆಗೆ ಬಂದ್ ಮಾಡಲು ರೈತ ಸಂಘಟನೆಗಳು ಸಜ್ಜಾಗಿವೆ. ಜಿಲ್ಲಾ ಕೇಂದ್ರ ಸೇರಿ ತಾಲೂಕು ಕೇಂದ್ರಗಳಲ್ಲೂ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನಾ ಮೆರವಣಿಗೆ ನಡೆಸಲು‌ ನಿರ್ಧರಿಸಿವೆ. ಪರಿಸ್ಥಿತಿ ಅವಲೋಕಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಕೆಸ್​ಆರ್​ಟಿಸಿ ನಿರ್ಧರಿಸಿದೆ. ಹಾಲು, ಹಣ್ಣು, ತರಕಾರಿ, ಔಷಧಿ ಅಂಗಡಿಗಳ ವ್ಯಾಪಾರಕ್ಕೆ ಯಾವುದೇ ಅಡ್ಡಿಯಿಲ್ಲ. ವರ್ತಕರ ಸಂಘ, ಹೋಟೆಲ್ ಮಾಲೀಕರು ನಾಳಿನ‌ ಬಂದ್​ಗೆ ಬೆಂಬಲ‌ ನೀಡುವ ಬಗ್ಗೆ ಇನ್ನೂ ಸ್ಪಷ್ಟಪಡಿಸಿಲ್ಲ.

ಬಿಗಿ ಪೊಲೀಸ್ ಬಂದೋಬಸ್ತ್ : ಬಂದ್​ ಹಿನ್ನೆಲೆ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ‌ ಸಿಬ್ಬಂದಿ ನಿಯೋಜಿಸಿದೆ. ಒತ್ತಾಯಪೂರ್ವಕ ಬಂದ್ ಮಾಡಿಸಲು ಅವಕಾಶವಿಲ್ಲವೆಂದು ಸಂಘಟನೆಗಳಿಗೆ ಪೊಲೀಸ್ ಇಲಾಖೆ ನೋಟಿಸ್​ ಜಾರಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಒಂದು ಕೆಎಸ್​ಆರ್​ಪಿ, 11 ಡಿಎಆರ್ ಪ್ಲಟೂನ್, 10 ಇನ್ಸ್​ಪೆಕ್ಟರ್​ಗಳು, 19 ಪಿಎಸ್ಐಗಳು, ಎರಡು ಡಿವೈಎಸ್ಪಿ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ.

ಚಾಮರಾಜನಗರ : ಭೂ ಸುಧಾರಣೆ, ಎಪಿಎಂಸಿ‌ ಸೇರಿ 8 ವಿವಿಧ ಕಾಯ್ದೆಗಳ ತಿದ್ದುಪಡಿ ವಾಪಸ್ ಪಡೆಯಲು ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರೈತ ಸಂಘಟನೆಗಳ ಬಂದ್ ಕರೆಗೆ ಆಟೋ, ಟ್ಯಾಕ್ಸಿ, ಲಾರಿ ಚಾಲಕ ಮಾಲೀಕರ ಸಂಘ ಸೇರಿ ಕನ್ನಡ ಪರ ಸಂಘಟನೆಗಳು, ಎಸ್​ಡಿಪಿಐ, ದಲಿತ ಪರ ಸಂಘಟನೆಗಳು, ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ.

ಸೋಮವಾರ ಬೆಳಗ್ಗೆ 6 ರಿಂದ ಸಂಜೆ 6ಗಂಟೆವರೆಗೆ ಬಂದ್ ಮಾಡಲು ರೈತ ಸಂಘಟನೆಗಳು ಸಜ್ಜಾಗಿವೆ. ಜಿಲ್ಲಾ ಕೇಂದ್ರ ಸೇರಿ ತಾಲೂಕು ಕೇಂದ್ರಗಳಲ್ಲೂ ರೈತ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನಾ ಮೆರವಣಿಗೆ ನಡೆಸಲು‌ ನಿರ್ಧರಿಸಿವೆ. ಪರಿಸ್ಥಿತಿ ಅವಲೋಕಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಕೆಸ್​ಆರ್​ಟಿಸಿ ನಿರ್ಧರಿಸಿದೆ. ಹಾಲು, ಹಣ್ಣು, ತರಕಾರಿ, ಔಷಧಿ ಅಂಗಡಿಗಳ ವ್ಯಾಪಾರಕ್ಕೆ ಯಾವುದೇ ಅಡ್ಡಿಯಿಲ್ಲ. ವರ್ತಕರ ಸಂಘ, ಹೋಟೆಲ್ ಮಾಲೀಕರು ನಾಳಿನ‌ ಬಂದ್​ಗೆ ಬೆಂಬಲ‌ ನೀಡುವ ಬಗ್ಗೆ ಇನ್ನೂ ಸ್ಪಷ್ಟಪಡಿಸಿಲ್ಲ.

ಬಿಗಿ ಪೊಲೀಸ್ ಬಂದೋಬಸ್ತ್ : ಬಂದ್​ ಹಿನ್ನೆಲೆ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ‌ ಸಿಬ್ಬಂದಿ ನಿಯೋಜಿಸಿದೆ. ಒತ್ತಾಯಪೂರ್ವಕ ಬಂದ್ ಮಾಡಿಸಲು ಅವಕಾಶವಿಲ್ಲವೆಂದು ಸಂಘಟನೆಗಳಿಗೆ ಪೊಲೀಸ್ ಇಲಾಖೆ ನೋಟಿಸ್​ ಜಾರಿ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಒಂದು ಕೆಎಸ್​ಆರ್​ಪಿ, 11 ಡಿಎಆರ್ ಪ್ಲಟೂನ್, 10 ಇನ್ಸ್​ಪೆಕ್ಟರ್​ಗಳು, 19 ಪಿಎಸ್ಐಗಳು, ಎರಡು ಡಿವೈಎಸ್ಪಿ ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.