ETV Bharat / state

ದೀಪಾವಳಿ ನಿಮಿತ್ತ ಸಾಲುಸಾಲು ರಜೆ : ಬಂಡೀಪುರಕ್ಕೆ ಪ್ರವಾಸಿಗರ ದಂಡು - tourist in Bandipura

ದೀಪಾವಳಿ ಹಬ್ಬದ ನಿಮಿತ್ತ ಸಾಲುಸಾಲು ರಜೆ ಹಿನ್ನೆಲೆ ಬಂಡೀಪುರ ಸಫಾರಿ ಕೇಂದ್ರಕ್ಕೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಬಂಡೀಪುರಕ್ಕೆ ಪ್ರವಾಸಿಗರ ದಂಡು
author img

By

Published : Oct 29, 2019, 2:26 AM IST

ಚಾಮರಾಜನಗರ: ದೀಪಾವಳಿ ಹಬ್ಬದ ನಿಮಿತ್ತ ಸಾಲುಸಾಲು ರಜೆ ಹಿನ್ನೆಲೆ ಬಂಡೀಪುರ ಸಫಾರಿ ಕೇಂದ್ರಕ್ಕೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಬಂಡೀಪುರ ಸಫಾರಿ ಕೌಂಟರ್, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಸುತ್ತಮುತ್ತಲಿನ ರೆಸಾರ್ಟ್‌ಗಳು ಪ್ರವಾಸಿಗರಿಂದ ಗಿಜಿಗುಡುತ್ತಿತ್ತು. ಕಳೆದ ಎರಡು ದಿನಗಳಿಂದ ಚಿರತೆ, ಆನೆ ಹಿಂಡು, ಸೀಳುನಾಯಿಗಳು ಸಹ ಕಾಣಸಿಕ್ಕಿವೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಿಮಚ್ಛಾದಿತವಾಗಿ ಕಣ್ಮನಗಳಿಗೆ ಹಬ್ಬ ಉಂಟುಮಾಡುತ್ತಿದೆ. ಈ ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಪ್ರವಾಸಿಗರು‌ ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಮಿಸಿದ್ದರು.

ಆನ್​ಲೈನ್ ನಲ್ಲಿ ಸಫಾರಿಗಾಗಿ ಜಿಪ್ಸಿಯನ್ನು ಬುಕ್ ಮಾಡುವ ಅವಕಾಶ ಕಲ್ಪಿಸಬೇಕು. ಜೊತೆಗೆ ಜಿಪ್ಸಿಗಳ ಸಂಖ್ಯೆಯನ್ನು ಹೆಚ್ಚು ಮಾಡಬೇಕು. ವಾತಾವರಣ ಮತ್ತು ಸಫಾರಿಯೂ ಚೆನ್ನಾಗಿದ್ದು, ಮೂಲಸೌಕರ್ಯವೂ ಇರುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ‌ ಉತ್ತೇಜನ‌ ನೀಡಬೇಕು ಎಂದು‌ ಚಿಂತಾಮಣಿಯಿಂದ ಬಂದಿದ್ದ ಪ್ರವಾಸಿಗ ಡಾ.ಶ್ರೀನಿವಾಸ್ ತಿಳಿಸಿದರು.

ಬಂಡೀಪುರಕ್ಕೆ ಪ್ರವಾಸಿಗರ ದಂಡು

ಸತತ ಮಳೆಯಾಗಿ ಬಂಡೀಪುರದಲ್ಲಿ ಕೆರೆ, ಕಟ್ಟೆ ತುಂಬಿರುವುದರಿಂದ ಪ್ರಾಣಿಗಳ ಹೆಚ್ಚಿನ ದರ್ಶನವಾಗದೇ ಕೆಲವರು ಬೇಸರಿಸಿದ್ದು ಕಂಡುಬಂದಿತು. ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದರಿಂದ ವ್ಯಾನ್ ಗಳು ಹೆಚ್ಚುವರಿ ಟ್ರಿಪ್ ಗಳನ್ನು ಮಾಡಿದವು.

ಚಾಮರಾಜನಗರ: ದೀಪಾವಳಿ ಹಬ್ಬದ ನಿಮಿತ್ತ ಸಾಲುಸಾಲು ರಜೆ ಹಿನ್ನೆಲೆ ಬಂಡೀಪುರ ಸಫಾರಿ ಕೇಂದ್ರಕ್ಕೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಬಂಡೀಪುರ ಸಫಾರಿ ಕೌಂಟರ್, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಸುತ್ತಮುತ್ತಲಿನ ರೆಸಾರ್ಟ್‌ಗಳು ಪ್ರವಾಸಿಗರಿಂದ ಗಿಜಿಗುಡುತ್ತಿತ್ತು. ಕಳೆದ ಎರಡು ದಿನಗಳಿಂದ ಚಿರತೆ, ಆನೆ ಹಿಂಡು, ಸೀಳುನಾಯಿಗಳು ಸಹ ಕಾಣಸಿಕ್ಕಿವೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಿಮಚ್ಛಾದಿತವಾಗಿ ಕಣ್ಮನಗಳಿಗೆ ಹಬ್ಬ ಉಂಟುಮಾಡುತ್ತಿದೆ. ಈ ಪ್ರಕೃತಿ ಸೌಂದರ್ಯ ಸವಿಯಲು ಸಾವಿರಾರು ಪ್ರವಾಸಿಗರು‌ ಗೋಪಾಲಸ್ವಾಮಿ ಬೆಟ್ಟಕ್ಕೆ ಆಗಮಿಸಿದ್ದರು.

ಆನ್​ಲೈನ್ ನಲ್ಲಿ ಸಫಾರಿಗಾಗಿ ಜಿಪ್ಸಿಯನ್ನು ಬುಕ್ ಮಾಡುವ ಅವಕಾಶ ಕಲ್ಪಿಸಬೇಕು. ಜೊತೆಗೆ ಜಿಪ್ಸಿಗಳ ಸಂಖ್ಯೆಯನ್ನು ಹೆಚ್ಚು ಮಾಡಬೇಕು. ವಾತಾವರಣ ಮತ್ತು ಸಫಾರಿಯೂ ಚೆನ್ನಾಗಿದ್ದು, ಮೂಲಸೌಕರ್ಯವೂ ಇರುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ‌ ಉತ್ತೇಜನ‌ ನೀಡಬೇಕು ಎಂದು‌ ಚಿಂತಾಮಣಿಯಿಂದ ಬಂದಿದ್ದ ಪ್ರವಾಸಿಗ ಡಾ.ಶ್ರೀನಿವಾಸ್ ತಿಳಿಸಿದರು.

ಬಂಡೀಪುರಕ್ಕೆ ಪ್ರವಾಸಿಗರ ದಂಡು

ಸತತ ಮಳೆಯಾಗಿ ಬಂಡೀಪುರದಲ್ಲಿ ಕೆರೆ, ಕಟ್ಟೆ ತುಂಬಿರುವುದರಿಂದ ಪ್ರಾಣಿಗಳ ಹೆಚ್ಚಿನ ದರ್ಶನವಾಗದೇ ಕೆಲವರು ಬೇಸರಿಸಿದ್ದು ಕಂಡುಬಂದಿತು. ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದರಿಂದ ವ್ಯಾನ್ ಗಳು ಹೆಚ್ಚುವರಿ ಟ್ರಿಪ್ ಗಳನ್ನು ಮಾಡಿದವು.

Intro:ದೀಪಾವಳಿ ರಜೆ: ಕಾಡು ಸುತ್ತಲು ಹರಿದುಬಂದ ಪ್ರವಾಸಿಗರು!


ಚಾಮರಾಜನಗರ: ದೀಪಾವಳಿ ಹಬ್ಬದ ಸಡಗರದೊಂದಿಗೆ ಶನಿವಾರ, ಭಾನುವಾರ, ಸೋಮವಾರ ಸಾಲು ಸಾಲು ರಜೆ ಹಿನ್ನೆಲೆ ಕಾಡು ಸುತ್ತಲೂ, ಪ್ರಾಣಿಗಳನ್ನು ಕಾಣಲು ಬಂಡೀಪುರ ಸಫಾರಿ ಕೇಂದ್ರಕ್ಕೆ ಪ್ರವಾಸಿಗರು ಲಗ್ಗೆ ಹಾಕಿದ್ದಾರೆ.

Body:ಬಂಡೀಪುರ ಸಫಾರಿ ಕೌಂಟರ್, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಸುತ್ತಮುತ್ತಲಿನ ರೆಸಾರ್ಟ್‌ಗಳು ಪ್ರವಾಸಿಗರಿಂದ ಗಿಜಿಗುಡುತ್ತಿತ್ತು. ಕಳೆದ ಎರಡು ದಿನಗಳಿಂದ , ಚಿರತೆ, ಆನೆಹಿಂಡು, ಸೀಳುನಾಯಿಗಳು ಸಹ ಕಾಣಸಿಕ್ಕಿದ್ದು ಹಿಮವದ್ ಗೋಪಾಲಸ್ವಾಮಿ ಬೆಟ್ಟ ಹಿಮಚ್ಛಾದಿತವಾಗಿ ಕಣ್ಮನಗಳಿಗೆ ಹಬ್ಬ ಉಂಟುಮಾಡುವುದರಿಂದ ಸಾವಿರಾರು ಮಂದಿ ಪ್ರವಾಸಿಗರು‌ ಗೋಪಾಲಸ್ವಾಮಿ ಬೆಟ್ಟದ ಅಂದವನ್ನು ಸವಿದರು.

ಆನ್ ಲೈನ್ ನಲ್ಲಿ ಸಫಾರಿಗಾಗಿ ಜಿಪ್ಸಿಯನ್ನು ಬುಕ್ ಮಾಡುವ ಅವಕಾಶ ಕಲ್ಪಿಸಬೇಕು, ಜೊತೆಗೆ ಜಿಪ್ಸಿಗಳನ್ನು ಹೆಚ್ಚು ಮಾಡಬೇಕು, ವಾತಾವರಣ ಮತ್ತು ಸಫಾರಿಯೂ ಚೆನ್ನಾಗಿದ್ದು ಮೂಲಸೌಕರ್ಯವೂ ಇರುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ‌ ಉತ್ತೇಜನ‌ ನೀಡಬೇಕು ಎಂದು‌ ಚಿಂತಾಮಣಿಯಿಂದ ಬಂದಿದ್ದ ಡಾ.ಶ್ರೀನಿವಾಸ್ ತಿಳಿಸಿದರು.

Conclusion:ಸತತ ಮಳೆಯಾಗಿ ಬಂಡೀಪುರ ಕೆರೆ ಕಟ್ಟೆ ತುಂಬಿರುವುದರಿಂದ ಪ್ರಾಣಿಗಳ ಹೆಚ್ಚಿನ ದರ್ಶನವಾಗದೇ ಕೆಲವರು ಬೇಸರಿಸಿದ್ದು ಕಂಡುಬಂದಿತು. ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದರಿಂದ ವ್ಯಾನ್ ಗಳು ಹೆಚ್ಚುವರಿ ಟ್ರಿಪ್ ಗಳನ್ನು ಇಂದು ಮಾಡಿದೆ ಎಂದು ತಿಳಿದುಬಂದಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.