ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಸಂಯುಕ್ತವಾಗಿ ಬಿಳಿಗಿರಿರಂಗನ ಬೆಟ್ಟದಲ್ಲಿ ಆಯೋಜಿಸಿದ್ದ ಗಿರಿಜನ ಉತ್ಸವದಲ್ಲಿ ಶಾಸಕ ಎನ್ ಮಹೇಶ್ ಅವರು ಕಾಡಿನ ಮಕ್ಕಳೊಂದಿಗೆ ನೃತ್ಯ ಮಾಡಿ ಎಲ್ಲರ ಗಮನ ಸೆಳೆದರು.
ಬೆಟ್ಟದ ಗಂಗಾಧರೇಶ್ವರ ದೇಗುಲ ಮುಂಭಾಗದಲ್ಲಿ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಶಾಸಕರು ಚಾಲನೆ ನೀಡಿ ಗಿರಿಜನರ ಗೊರುಕನ ನೃತ್ಯಕ್ಕೆ ಹೆಜ್ಜೆ ಹಾಕಿದರು. ಈ ಮೂಲಕ ಕಲಾವಿದರ ಉತ್ಸಾಹ ಇಮ್ಮಡಿಗೊಳಿಸಿದರು.
ಗೊರುಕನ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾಗ ಕಂಸಾಳೆ ಕಲಾವಿದರು ಕಂಸಾಳೆ ಹಿಡಿದು ಅವರೊಂದಿಗೂ ಹೆಜ್ಜೆ ಹಾಕಿದರು. ಇಂದು ಸಂಜೆವರೆಗೂ ವಿವಿಧ ಕಲಾತಂಡಗಳು ಗಿರಿಜನರ ಸಾಂಪ್ರದಾಯಿಕ ಹಾಡು - ನೃತ್ಯಗಳನ್ನು ಪ್ರಸ್ತುತಪಡಿಸಲಿದ್ದಾರೆ. ಈ ಬಾರಿ ವಿಜಿಕೆಕೆಯಲ್ಲಿರುವ ವಿದೇಶಿಗರು ಈ ಉತ್ಸವದಲ್ಲಿ ಪಾಲ್ಗೊಂಡಿರುವುದು ವಿಶೇಷ.