ETV Bharat / state

ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನ: ಜೀಪಿನಿಂದ ಹಾರಿದ ಯುವಕ ಸಾವು

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕ ಗಂಭೀರವಾಗಿ ಗಾಯಗೊಂಡು, ಮೃತಪಟ್ಟಿರುವ ಘಟನೆ ಚಾಮರಾಜನಗರದ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಸಮೀಪ ನಡೆದಿದೆ.

author img

By

Published : Nov 29, 2022, 6:56 PM IST

Youth died in Chamarajanagar
ಪೊಲೀಸರಿಂದ ಪರಾರಿಯಾಗಲು ಯತ್ನ

ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಯತ್ನಿಸಿ ಯುವಕ, ಪ್ರಾಣವನ್ನೇ ಕಳೆದುಕೊಂಡಿರುವ ದಾರುಣ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಸಮೀಪ ಮಂಗಳವಾರ ನಡೆದಿದೆ.

ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ಲಿಂಗರಾಜು ಎಂಬಾತ ಮೃತ ದುರ್ದೈವಿ. ಅಪ್ರಾಪ್ತೆಗೆ ತಲೆಕೆಡಿಸಿ, ಆಕೆಯನ್ನು ಕರೆದೊಯ್ದ ಬಗ್ಗೆ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದ 23 ರಂದು ಪ್ರಕರಣ ದಾಖಲಾಗಿತ್ತು.

ಮಂಗಳವಾರ ಆತನನ್ನು ಪೊಲೀಸರು ಠಾಣೆಗೆ ಕರೆದೊಯ್ಯುವಾಗ ಪರಾರಿಯಾಗಲು ಯತ್ನಿಸಿ ಜೀಪಿನಿಂದ ಲಿಂಗರಾಜು ಹಾರಿ ತೀವ್ರವಾಗಿ ಗಾಯಗೊಂಡಿದ್ದಾನೆ‌. ಬಳಿಕ, ಆಸ್ಪತ್ರೆಗೆ ರವಾನಿಸಲಾಯಿತರಾದರೂ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಯುವಕನ ಸಾವು ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ: ಪ್ರಿಯತಮೆಯೊಂದಿಗೆ ತನಗೂ ಬೆಂಕಿ ಹಂಚಿಕೊಂಡಿದ್ದ ಯುವಕ ಸಾವು

ಚಾಮರಾಜನಗರ: ಪೊಲೀಸರಿಂದ ಪರಾರಿಯಾಗಲು ಯತ್ನಿಸಿ ಯುವಕ, ಪ್ರಾಣವನ್ನೇ ಕಳೆದುಕೊಂಡಿರುವ ದಾರುಣ ಘಟನೆ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ಸಮೀಪ ಮಂಗಳವಾರ ನಡೆದಿದೆ.

ಯಳಂದೂರು ತಾಲೂಕಿನ ಕುಂತೂರುಮೋಳೆ ಗ್ರಾಮದ ಲಿಂಗರಾಜು ಎಂಬಾತ ಮೃತ ದುರ್ದೈವಿ. ಅಪ್ರಾಪ್ತೆಗೆ ತಲೆಕೆಡಿಸಿ, ಆಕೆಯನ್ನು ಕರೆದೊಯ್ದ ಬಗ್ಗೆ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದ 23 ರಂದು ಪ್ರಕರಣ ದಾಖಲಾಗಿತ್ತು.

ಮಂಗಳವಾರ ಆತನನ್ನು ಪೊಲೀಸರು ಠಾಣೆಗೆ ಕರೆದೊಯ್ಯುವಾಗ ಪರಾರಿಯಾಗಲು ಯತ್ನಿಸಿ ಜೀಪಿನಿಂದ ಲಿಂಗರಾಜು ಹಾರಿ ತೀವ್ರವಾಗಿ ಗಾಯಗೊಂಡಿದ್ದಾನೆ‌. ಬಳಿಕ, ಆಸ್ಪತ್ರೆಗೆ ರವಾನಿಸಲಾಯಿತರಾದರೂ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಯುವಕನ ಸಾವು ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇದನ್ನೂ ಓದಿ: ಪ್ರಿಯತಮೆಯೊಂದಿಗೆ ತನಗೂ ಬೆಂಕಿ ಹಂಚಿಕೊಂಡಿದ್ದ ಯುವಕ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.