ಚಾಮರಾಜನಗರ: ಬೀದಿನಾಯಿಗಳ ದಾಳಿಗೆ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರಸಭೆಯ 12ನೇ ವಾರ್ಡ್ನ ಕೆಪಿ ಮೊಹಲ್ಲಾದಲ್ಲಿ ನಡೆದಿದೆ.
ಅರ್ಸಲನ್ (6) ಹಾಗೂ ಯಾಸೀನ್ (3) ನಾಯಿಗಳ ದಾಳಿಯಿಂದ ಗಾಯಗೊಂಡ ಮಕ್ಕಳು. ನಾಯಿಗಳ ದಾಳಿಯಿಂದಾಗಿ ಬಾಲಕ ಅರ್ಸಲನ್ ಮುಖದ ಮೇಲೆ ಆಳವಾದ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಓದಿ: ಮುಷ್ಕರ ನಿರತ ನೌಕರರ ಮೇಲೆ ಸರ್ಕಾರ ಸಮರ: ಮತ್ತೆ 118 ಬಿಎಂಟಿಸಿ ನೌಕರರು ವಜಾ
ಘಟನೆ ಸಂಬಂಧ ಪೌರಾಯುಕ್ತರು ಹಾಗೂ ನಗರಸಭೆ ಗಮನಕ್ಕೆ ತಂದಿದ್ದೇನೆ. ಜಾನುವಾರು ಹಾಗೂ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಗರಸಭಾ ಸದಸ್ಯ ಅಬ್ರಾರ್ ಅಹಮದ್ ಒತ್ತಾಯಿಸಿದ್ದಾರೆ.