ETV Bharat / state

ಸಮಾಜದಲ್ಲಿ ಇಂಥದ್ದೆಲ್ಲ ನಡೆಯುತ್ತೆ... ಉತ್ತರ ಕೊಡುವುದಕ್ಕೆ ಗೃಹ ಸಚಿವರಿದ್ದಾರೆ: ಕತ್ತಿ ವಿವಾದಾತ್ಮಕ ಹೇಳಿಕೆ

author img

By

Published : Aug 27, 2021, 6:02 PM IST

Updated : Aug 27, 2021, 6:30 PM IST

ಒಬ್ಬನಿಗೆ 5 ಕೆಜಿ ಅಕ್ಕಿ ಸಾಕು ಎಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಸಚಿವ ಉಮೇಶ್ ಕತ್ತಿ. ಇದೀಗ ಅತ್ಯಾಚಾರ ಪ್ರಕರಣ ಸಂಬಂಧ ವಿವಾದಾತ್ಮಕ ಹೇಳಿಕ ನೀಡಿ ಮತ್ತೆ ಸುದ್ದಿಯಾಗಿದ್ದಾರೆ.

Umesh katti statement on Mysuru rape case
ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆ

ಚಾಮರಾಜನಗರ: ಸಮಾಜದಲ್ಲಿ ರೇಪ್​​​​ಗಳು ನಡೆಯುತ್ತವೆ, ಏನು ಮಾಡಲಾಗಲ್ಲ ಎಂದು ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ.

ಸಮಾಜದಲ್ಲಿ ಇಂಥದ್ದೆಲ್ಲ ನಡೆಯುತ್ತೆ: ನಾಲಿಗೆ ಹರಿಬಿಟ್ಟ ಉಮೇಶ್​ ಕತ್ತಿ

ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ, ನಡೆಯಬಾರದು ಆದರೂ ನಡೆಯುತ್ತದೆ, ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದು, ಇದರ ಬಗ್ಗೆ ಹೆಚ್ಚು ಮಾತನಾಡಲು ತಾನು ಗೃಹ ಸಚಿವನಲ್ಲ ಎಂದರು‌.

ಉಮೇಶ್ ಕತ್ತಿ ಅವರು ನಿನ್ನೆ ಬಂಡೀಪುರದಲ್ಲಿ ಒಬ್ಬರಿಗೆ 5 ಕೆ.ಜಿ ಅಕ್ಕಿ ಸಾಕು ಎಂದು ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದರು. ಇಂದು ಅತ್ಯಾಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಓದಿ: ಮೈಸೂರಿನಲ್ಲಿ ರೇಪ್ ಆದರೆ ನನ್ನನ್ನು ಯಾಕೆ ಕೇಳ್ತಿರಪ್ಪೋ: ಜಿ.ಎಂ. ಸಿದ್ದೇಶ್ವರ್

ಚಾಮರಾಜನಗರ: ಸಮಾಜದಲ್ಲಿ ರೇಪ್​​​​ಗಳು ನಡೆಯುತ್ತವೆ, ಏನು ಮಾಡಲಾಗಲ್ಲ ಎಂದು ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ.

ಸಮಾಜದಲ್ಲಿ ಇಂಥದ್ದೆಲ್ಲ ನಡೆಯುತ್ತೆ: ನಾಲಿಗೆ ಹರಿಬಿಟ್ಟ ಉಮೇಶ್​ ಕತ್ತಿ

ಇವೆಲ್ಲವೂ ಸಮಾಜದಲ್ಲಿ ನಡೆಯುತ್ತವೆ, ನಡೆಯಬಾರದು ಆದರೂ ನಡೆಯುತ್ತದೆ, ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದು, ಇದರ ಬಗ್ಗೆ ಹೆಚ್ಚು ಮಾತನಾಡಲು ತಾನು ಗೃಹ ಸಚಿವನಲ್ಲ ಎಂದರು‌.

ಉಮೇಶ್ ಕತ್ತಿ ಅವರು ನಿನ್ನೆ ಬಂಡೀಪುರದಲ್ಲಿ ಒಬ್ಬರಿಗೆ 5 ಕೆ.ಜಿ ಅಕ್ಕಿ ಸಾಕು ಎಂದು ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದರು. ಇಂದು ಅತ್ಯಾಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಓದಿ: ಮೈಸೂರಿನಲ್ಲಿ ರೇಪ್ ಆದರೆ ನನ್ನನ್ನು ಯಾಕೆ ಕೇಳ್ತಿರಪ್ಪೋ: ಜಿ.ಎಂ. ಸಿದ್ದೇಶ್ವರ್

Last Updated : Aug 27, 2021, 6:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.