ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟಕ್ಕೆ ಬಿ.ವೈ.ವಿಜಯೇಂದ್ರ ಹಾಗೂ ಸುತ್ತೂರು ಶ್ರಿಗಳು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಹನೂರಿನಲ್ಲಿ ಗುರುವಾರ ನಡೆಯುವ ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆಯಲ್ಲಿ ಅವರು ಪಾಲ್ಗೊಳ್ಳಲಿದ್ದು ಇಂದು ರಾತ್ರಿ ಮಲೆ ಮಹದೇಶ್ವರ ಬೆಟ್ಟದಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ಸುತ್ತೂರು ಶ್ರೀ ಹಾಗೂ ವಿಜಯೇಂದ್ರ ದೇಗುಲ ಭೇಟಿ ವೇಳೆ ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜಕುಮಾರ್, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಇದ್ದರು.