ಕೊಳ್ಳೇಗಾಲ: ತಾಲೂಕಿನ ಸಿದ್ದಯ್ಯನಪುರ ಗ್ರಾಮದ 1ನೇ ವಾರ್ಡ್ನಲ್ಲಿ ನಾಲ್ಕು ಸ್ಥಾನಕ್ಕೆ ಎರಡು ಮತ ಹಾಕುವಂತೆ ಸೂಚಿಸಿದ ಹಿನ್ನೆಲೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದರು. ಆದ್ರೆ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ತಹಶೀಲ್ದಾರ್ ಅವರ ಮನವೊಲಿಸಿದ್ದರಿಂದ ಗ್ರಾಮಸ್ಥರು ಮತ ಚಲಾವಣೆಗೆ ಮುಂದಾಗಿದ್ದಾರೆ.
ಓದಿ: ಮತದಾನ ಬಹಿಷ್ಕರಿಸಿದ ಸಿದ್ದಯ್ಯನಪುರ ಗ್ರಾಮಕ್ಕೆ ಡಿಸಿ, ಎಸ್ಪಿ ಭೇಟಿ
ಅಧಿಕಾರಿಗಳ ಸತತ ಪ್ರಯತ್ನ ಹಾಗೂ ಜಿಲ್ಲಾಧಿಕಾರಿಗಳ ಮಾತಿಗೆ ಮಣಿದು ಮತ ಚಲಾಯಿಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಗ್ರಾಮಸ್ಥರ ಈ ಬದಲಾವಣೆಗೆ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. 12.30 ರಿಂದ ಮತದಾನ ಪ್ರಾರಂಭವಾಗಿದ್ದು ಸಂಜೆ 5 ಗಂಟೆಯವರೆಗೂ ಕಾಲಾವಕಾಶವಿದೆ. ಮತದಾನಕ್ಕೆ ಸಮಯದ ತೊಂದರೆಯಾದರೆ ಟೋಕನ್ ನೀಡಿ ಮತದಾನಕ್ಕೆ ಅವಕಾಶ ನೀಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.