ETV Bharat / state

ಚಾಮರಾಜನಗರದಲ್ಲಿ ಕಾಣಿಸಿದ ತೋಳ; ಮೊದಲ ಬಾರಿ ಕ್ಯಾಮರಾದಲ್ಲಿ ಸೆರೆ - ಚಾಮರಾಜನಗರದಲ್ಲಿ ತೋಳ

ಕಾವೇರಿ ವನ್ಯಜೀವಿ ಧಾಮದ ಕೊತ್ತನೂರು ವಲಯದಲ್ಲಿ ಏ. 7ರ ಮುಂಜಾನೆ ಗಂಡು ತೋಳವೊಂದು ನಡೆದುಕೊಂಡು ಹೋಗುತ್ತಿರುವ ಅಪರೂಪದ ಸಂಗತಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Wolf
ಚಾಮರಾಜನಗರಕ್ಕೆ ತೋಳ ಬಂತು ತೋಳ
author img

By

Published : May 9, 2020, 4:40 PM IST

ಚಾಮರಾಜನಗರ: ಇದೇ ಮೊದಲ ಬಾರಿಗೆ ತೋಳ ಕಾಣಿಸಿಕೊಳ್ಳುವ ಮೂಲಕ ಪರಿಸರ ಪ್ರೇಮಿಗಳ ಮೊಗದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ. ಕಾವೇರಿ ವನ್ಯಜೀವಿಧಾಮದ ಕೊತ್ತನೂರು ವಲಯದಲ್ಲಿ ಏ. 7 ರ ಮುಂಜಾನೆ ಗಂಡು ತೋಳ ನಡೆದುಕೊಂಡು ಹೋಗುತ್ತಿರುವ ಅಪರೂಪದ ಚಿತ್ರ ದಾಖಲಾಗಿದೆ.

ಚಿರತೆಗಳ ಕುರಿತು ಅಧ್ಯಯನಕ್ಕಾಗಿ ನೇಚರ್ ಕನ್ಸರ್ವೇಷನ್ ಫೌಂಡೇಶನ್‌ನ ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಮತ್ತು ಅವರ ತಂಡದವರು ಕ್ಯಾಮರಾ ಟ್ರ್ಯಾಪ್‌ನಲ್ಲಿ ಚಿತ್ರ ಸೆರೆಯಾಗಿದೆ.
ಒಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುವ ತೋಳಗಳು ರಾಜ್ಯದ ಹಾವೇರಿ, ಕೊಪ್ಪಳ, ತುಮಕೂರು, ರಾಯಚೂರು, ಬಳ್ಳಾರಿ ಮತ್ತಿತರ ಜಿಲ್ಲೆಗಳಲ್ಲಿ ಕಂಡು ಬರುತ್ತವೆ. ಇವು ಹೆಚ್ಚಾಗಿ ಒಣ ಹುಲ್ಲುಗಾವಲು, ಕುರುಚಲು ಕಾಡುಗಳು ಮತ್ತು ಬಹಳ ಅಪರೂಪವಾಗಿ ಎಲೆ ಉದುರುವ ಕಾಡುಗಳಲ್ಲಿ ಕಾಣಸಿಗುತ್ತವೆ. ಇವುಗಳ ವ್ಯಾಪ್ತಿ ಹಲವಾರು ರಾಜ್ಯಗಳಲ್ಲಿದ್ದರೂ ಆವಾಸ ಸ್ಥಾನದ ನಾಶ ಮತ್ತು ಪ್ರತೀಕಾರದ ವಧೆಗೆ ಬಲಿಯಾಗುತ್ತಿವೆ. ಭಾರತದಲ್ಲಿ ಇವುಗಳ ಸಂಖ್ಯೆ ಹುಲಿಗಳಿಗಿಂತಲೂ ಕಡಿಮೆಯಿರಬಹುದು ಎಂದು ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಕಾವೇರಿ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮಗಳು, ಬಿಳಿಗಿರಿ ರಂಗನಬೆಟ್ಟ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹಿಂದೆ ಕೈಗೊಂಡ ಯಾವುದೇ ಅಧ್ಯಯನಗಳಲ್ಲೂ ತೋಳಗಳು ಕಂಡುಬಂದಿರಲಿಲ್ಲ. ಈ ದಾಖಲೆಯೊಡನೆ, ದಕ್ಷಿಣ ಭಾರತದಲ್ಲಿ ನಾಯಿ ಜಾತಿಗೆ ಸೇರಿರುವ ಎಲ್ಲಾ ನಾಲ್ಕು ಪ್ರಭೇದಗಳ (ಸೀಳು ನಾಯಿ, ತೋಳ, ಗುಳ್ಳೆ ನರಿ, ಮತ್ತು ಕಪ್ಪಲು ನರಿ) ವನ್ಯಜೀವಿಗಳು ಈಗ ಚಾಮರಾಜನಗರ ಜಿಲ್ಲೆಯಲ್ಲಿ ದಾಖಲಾದಂತಾಗಿದೆ. ಇದರೊಟ್ಟಿಗೆ, ತೋಳ, ಸೀಳುನಾಯಿ ಹಾಗೂ ಹುಲಿಗಳು ಒಂದೇ ಪ್ರದೇಶದಲ್ಲಿ ಕಂಡುಬಂದಿರುವುದು ಚಾಮರಾಜನಗರ ಜಿಲ್ಲೆಯಲ್ಲೇ ಎಂದು ಅವರು ಸಂತಸ ಹಂಚಿಕೊಂಡರು.

ಇನ್ನು, ಸಂಜಯ್ ಗುಬ್ಬಿ ಚಿರತೆಗಳ ಕುರಿತು ನಡೆಸುತ್ತಿರುವ ಅಧ್ಯಯನದಿಂದ ಇನ್ನಿತರ ಹಲವಾರು ವನ್ಯಜೀವಿಗಳ ಬಗ್ಗೆ ಮಹತ್ವವಾದ ಮಾಹಿತಿಗಳು ದೊರಕುತ್ತಿವೆ. ಈ ಹಿಂದೆ, 2014ರಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಕರಡಿಯನ್ನು ಕಾವೇರಿ ವನ್ಯಜೀವಿಧಾಮದಲ್ಲಿ ದಾಖಲಿಸಿದ್ದಾರೆ. 2015ರಲ್ಲಿ ಹುಲ್ಲೆಕರಗಳ ಇರುವಿಕೆಯನ್ನು ತುಮಕೂರು ಜಿಲ್ಲೆಯಲ್ಲಿ ದಾಖಲಿಸಿದ್ದರಿಂದ ಆ ಪ್ರದೇಶವನ್ನು ಸರ್ಕಾರವು ಬುಕ್ಕಾಪಟ್ಟಣ ಚಿಂಕಾರಾ ವನ್ಯ ಜೀವಿಧಾಮವೆಂದು ಘೋಷಿಸಿತು. ಈ ದಾಖಲೆ, ದಕ್ಷಿಣ ಭಾರತದಲ್ಲಿ ಹುಲ್ಲೆಕರಗಳು ಸಿಗುವ ಮಿತಿಯನ್ನು ವಿಸ್ತರಿಸಿತು. ಕರ್ನಾಟಕದಲ್ಲಿ ವಿರಾಜಪೇಟೆ ತಾಲ್ಲೂಕಿನಲ್ಲಿ ಬಿಟ್ಟರೆ ಇನ್ನೆಲ್ಲೂ ದಾಖಲಾಗದಿದ್ದ ಕಂದು ಮುಂಗಸಿಯನ್ನು 2018ರಲ್ಲಿ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದಾಖಲಿಸಿ, ಇದರ ಈಶಾನ್ಯ ಮಿತಿ ವಿಸ್ತರಿಸಲಾಗಿದೆ.

ಚಾಮರಾಜನಗರ: ಇದೇ ಮೊದಲ ಬಾರಿಗೆ ತೋಳ ಕಾಣಿಸಿಕೊಳ್ಳುವ ಮೂಲಕ ಪರಿಸರ ಪ್ರೇಮಿಗಳ ಮೊಗದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ. ಕಾವೇರಿ ವನ್ಯಜೀವಿಧಾಮದ ಕೊತ್ತನೂರು ವಲಯದಲ್ಲಿ ಏ. 7 ರ ಮುಂಜಾನೆ ಗಂಡು ತೋಳ ನಡೆದುಕೊಂಡು ಹೋಗುತ್ತಿರುವ ಅಪರೂಪದ ಚಿತ್ರ ದಾಖಲಾಗಿದೆ.

ಚಿರತೆಗಳ ಕುರಿತು ಅಧ್ಯಯನಕ್ಕಾಗಿ ನೇಚರ್ ಕನ್ಸರ್ವೇಷನ್ ಫೌಂಡೇಶನ್‌ನ ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಮತ್ತು ಅವರ ತಂಡದವರು ಕ್ಯಾಮರಾ ಟ್ರ್ಯಾಪ್‌ನಲ್ಲಿ ಚಿತ್ರ ಸೆರೆಯಾಗಿದೆ.
ಒಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುವ ತೋಳಗಳು ರಾಜ್ಯದ ಹಾವೇರಿ, ಕೊಪ್ಪಳ, ತುಮಕೂರು, ರಾಯಚೂರು, ಬಳ್ಳಾರಿ ಮತ್ತಿತರ ಜಿಲ್ಲೆಗಳಲ್ಲಿ ಕಂಡು ಬರುತ್ತವೆ. ಇವು ಹೆಚ್ಚಾಗಿ ಒಣ ಹುಲ್ಲುಗಾವಲು, ಕುರುಚಲು ಕಾಡುಗಳು ಮತ್ತು ಬಹಳ ಅಪರೂಪವಾಗಿ ಎಲೆ ಉದುರುವ ಕಾಡುಗಳಲ್ಲಿ ಕಾಣಸಿಗುತ್ತವೆ. ಇವುಗಳ ವ್ಯಾಪ್ತಿ ಹಲವಾರು ರಾಜ್ಯಗಳಲ್ಲಿದ್ದರೂ ಆವಾಸ ಸ್ಥಾನದ ನಾಶ ಮತ್ತು ಪ್ರತೀಕಾರದ ವಧೆಗೆ ಬಲಿಯಾಗುತ್ತಿವೆ. ಭಾರತದಲ್ಲಿ ಇವುಗಳ ಸಂಖ್ಯೆ ಹುಲಿಗಳಿಗಿಂತಲೂ ಕಡಿಮೆಯಿರಬಹುದು ಎಂದು ವನ್ಯಜೀವಿ ವಿಜ್ಞಾನಿ ಸಂಜಯ್ ಗುಬ್ಬಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆ ವ್ಯಾಪ್ತಿಯ ಕಾವೇರಿ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮಗಳು, ಬಿಳಿಗಿರಿ ರಂಗನಬೆಟ್ಟ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹಿಂದೆ ಕೈಗೊಂಡ ಯಾವುದೇ ಅಧ್ಯಯನಗಳಲ್ಲೂ ತೋಳಗಳು ಕಂಡುಬಂದಿರಲಿಲ್ಲ. ಈ ದಾಖಲೆಯೊಡನೆ, ದಕ್ಷಿಣ ಭಾರತದಲ್ಲಿ ನಾಯಿ ಜಾತಿಗೆ ಸೇರಿರುವ ಎಲ್ಲಾ ನಾಲ್ಕು ಪ್ರಭೇದಗಳ (ಸೀಳು ನಾಯಿ, ತೋಳ, ಗುಳ್ಳೆ ನರಿ, ಮತ್ತು ಕಪ್ಪಲು ನರಿ) ವನ್ಯಜೀವಿಗಳು ಈಗ ಚಾಮರಾಜನಗರ ಜಿಲ್ಲೆಯಲ್ಲಿ ದಾಖಲಾದಂತಾಗಿದೆ. ಇದರೊಟ್ಟಿಗೆ, ತೋಳ, ಸೀಳುನಾಯಿ ಹಾಗೂ ಹುಲಿಗಳು ಒಂದೇ ಪ್ರದೇಶದಲ್ಲಿ ಕಂಡುಬಂದಿರುವುದು ಚಾಮರಾಜನಗರ ಜಿಲ್ಲೆಯಲ್ಲೇ ಎಂದು ಅವರು ಸಂತಸ ಹಂಚಿಕೊಂಡರು.

ಇನ್ನು, ಸಂಜಯ್ ಗುಬ್ಬಿ ಚಿರತೆಗಳ ಕುರಿತು ನಡೆಸುತ್ತಿರುವ ಅಧ್ಯಯನದಿಂದ ಇನ್ನಿತರ ಹಲವಾರು ವನ್ಯಜೀವಿಗಳ ಬಗ್ಗೆ ಮಹತ್ವವಾದ ಮಾಹಿತಿಗಳು ದೊರಕುತ್ತಿವೆ. ಈ ಹಿಂದೆ, 2014ರಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಕರಡಿಯನ್ನು ಕಾವೇರಿ ವನ್ಯಜೀವಿಧಾಮದಲ್ಲಿ ದಾಖಲಿಸಿದ್ದಾರೆ. 2015ರಲ್ಲಿ ಹುಲ್ಲೆಕರಗಳ ಇರುವಿಕೆಯನ್ನು ತುಮಕೂರು ಜಿಲ್ಲೆಯಲ್ಲಿ ದಾಖಲಿಸಿದ್ದರಿಂದ ಆ ಪ್ರದೇಶವನ್ನು ಸರ್ಕಾರವು ಬುಕ್ಕಾಪಟ್ಟಣ ಚಿಂಕಾರಾ ವನ್ಯ ಜೀವಿಧಾಮವೆಂದು ಘೋಷಿಸಿತು. ಈ ದಾಖಲೆ, ದಕ್ಷಿಣ ಭಾರತದಲ್ಲಿ ಹುಲ್ಲೆಕರಗಳು ಸಿಗುವ ಮಿತಿಯನ್ನು ವಿಸ್ತರಿಸಿತು. ಕರ್ನಾಟಕದಲ್ಲಿ ವಿರಾಜಪೇಟೆ ತಾಲ್ಲೂಕಿನಲ್ಲಿ ಬಿಟ್ಟರೆ ಇನ್ನೆಲ್ಲೂ ದಾಖಲಾಗದಿದ್ದ ಕಂದು ಮುಂಗಸಿಯನ್ನು 2018ರಲ್ಲಿ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದಾಖಲಿಸಿ, ಇದರ ಈಶಾನ್ಯ ಮಿತಿ ವಿಸ್ತರಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.