ETV Bharat / state

ನಾಪತ್ತೆಯಾಗಿದ್ದ ವ್ಯಕ್ತಿ ಗೊಡಂಬಿ ತೋಪಿನಲ್ಲಿ ಶವವಾಗಿ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಹೊರವಲಯದಲ್ಲಿ ನಡೆದಿದೆ.

author img

By

Published : Jan 29, 2020, 11:33 AM IST

A man who was missing found in cashew nut grove
ನಾಪತ್ತೆಯಾಗಿದ್ದ ವ್ಯಕ್ತಿ ಗೊಡಂಬಿ ತೋಪಿನಲ್ಲಿ ಶವವಾಗಿ ಪತ್ತೆ

ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ನಾಪತ್ತೆಯಾಗಿದ್ದ ವ್ಯಕ್ತಿ ಗೊಡಂಬಿ ತೋಪಿನಲ್ಲಿ ಶವವಾಗಿ ಪತ್ತೆ

ಗ್ರಾಮದ ನಿವಾಸಿ ದೇವರಾಜ್ (29) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಮೊನ್ನೆ ಮನೆಯಿಂದ ನಾಪತ್ತೆಯಾಗಿದ್ದ. ನಿನ್ನೆ ಗೋಡಂಬಿ ತೋಪಿನ ಮರದಲ್ಲಿ ನೇಣು ಬಿಗಿದ ರೀತಿಯಲ್ಲಿ ದೇವರಾಜ್​ ಶವ ಪತ್ತೆಯಾಗಿದೆ. ಸದ್ಯ ಮೃತನಿಗೆ ಇಬ್ಬರು ಮಕ್ಕಳಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಯಾರೋ ಈತನನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾದ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ನಾಪತ್ತೆಯಾಗಿದ್ದ ವ್ಯಕ್ತಿ ಗೊಡಂಬಿ ತೋಪಿನಲ್ಲಿ ಶವವಾಗಿ ಪತ್ತೆ

ಗ್ರಾಮದ ನಿವಾಸಿ ದೇವರಾಜ್ (29) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಮೊನ್ನೆ ಮನೆಯಿಂದ ನಾಪತ್ತೆಯಾಗಿದ್ದ. ನಿನ್ನೆ ಗೋಡಂಬಿ ತೋಪಿನ ಮರದಲ್ಲಿ ನೇಣು ಬಿಗಿದ ರೀತಿಯಲ್ಲಿ ದೇವರಾಜ್​ ಶವ ಪತ್ತೆಯಾಗಿದೆ. ಸದ್ಯ ಮೃತನಿಗೆ ಇಬ್ಬರು ಮಕ್ಕಳಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಯಾರೋ ಈತನನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಶ್ವಾನ ದಳದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.