ಚಿಕ್ಕಬಳ್ಳಾಪುರ: ಜೆಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸುಧಾಕರ್, ಸ್ಥಳ ಪರಿಶೀಲನೆಗೆ ಆಗಮಿಸಿದಾಗ ಸ್ಥಳೀಯ ವ್ಯಕ್ತಿಯೊಬ್ಬ ಎಲ್ಲ ನಿಮ್ಮ ಕೈವಾಡದಿಂದಲೇ ನಡೆಯುತ್ತಿದೆ ಎಂದು ಆರೋಪಿಸಿದ್ದು, ಸಚಿವರ ಬೆಂಬಲಿಗರು ವ್ಯಕ್ತಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ.
ಸ್ಫೋಟ ಸ್ಥಳದಲ್ಲಿ ಸಚಿವ ಸುಧಾಕರ್ಗೆ ವ್ಯಕ್ತಿಯೋರ್ವನಿಂದ ಕ್ಲಾಸ್: ಹಲ್ಲೆಗೆ ಮುಂದಾದ ಬೆಂಬಲಿಗರು
ಚಿಕ್ಕಬಳ್ಳಾಪುರ ತಾಲೂಕು ಹೀರೆನಾಗವೇಲಿ ಸಮೀಪದ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟಗೊಂಡಿದ್ದು, ಸ್ಥಳ ಪರಿಶೀಲನೆಗೆಂದು ಸಚಿವ ಸುಧಾಕರ್ ಆಗಮಿಸಿದಾಗ ಸ್ಥಳೀಯ ವ್ಯಕ್ತಿಯೊಬ್ಬ ನಿಮ್ಮ ಕುಮ್ಮಕ್ಕಿನಿಂದಲೇ ಈ ರೀತಿಯಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದಾನೆ.
ಜಿಲೆಟಿನ್ ಸ್ಫೋಟ ನಡೆದ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಸ್ಥಳೀಯ ವ್ಯಕ್ತಿ ರಾಘವೇಂದ್ರ ಎಂಬಾತ ಸಚಿವರಿಗೆ ತರಾಟೆ ತೆಗೆದುಕೊಂಡಿದ್ದು, ನಿಮ್ಮ ಕುಮ್ಮಕ್ಕಿನಿಂದಲೇ ಕ್ವಾರಿಗಳಲ್ಲಿ ಸ್ಫೋಟ ನಡೆಯುತ್ತಿದೆ. ಸ್ಫೋಟದ ಸ್ಥಳದಿಂದ 30 ಎಕರೆ ಪ್ರದೇಶ ಸಚಿವರ ಬೆಂಬಲಿಗನಿಗೆ ಸೇರಿದ್ದು, ಎಲ್ಲ ಗೊತ್ತಿದ್ದರೂ ನೀವು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾನೆ.
ಇದೇ ವೇಳೆ, ಮಧ್ಯ ಪ್ರವೇಶಿಸಿದ ಸಚಿವರ ಬೆಂಬಲಿಗರು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಸ್ಥಳೀಯ ವ್ಯಕ್ಯಿಯನ್ನು ಸ್ಥಳದಿಂದ ಕರೆದುಕೊಂಡು ಹೋಗಿದ್ದಾರೆ.
ಚಿಕ್ಕಬಳ್ಳಾಪುರ: ಜೆಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸುಧಾಕರ್, ಸ್ಥಳ ಪರಿಶೀಲನೆಗೆ ಆಗಮಿಸಿದಾಗ ಸ್ಥಳೀಯ ವ್ಯಕ್ತಿಯೊಬ್ಬ ಎಲ್ಲ ನಿಮ್ಮ ಕೈವಾಡದಿಂದಲೇ ನಡೆಯುತ್ತಿದೆ ಎಂದು ಆರೋಪಿಸಿದ್ದು, ಸಚಿವರ ಬೆಂಬಲಿಗರು ವ್ಯಕ್ತಿಯ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ.
ಜಿಲೆಟಿನ್ ಸ್ಫೋಟ ನಡೆದ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಸ್ಥಳೀಯ ವ್ಯಕ್ತಿ ರಾಘವೇಂದ್ರ ಎಂಬಾತ ಸಚಿವರಿಗೆ ತರಾಟೆ ತೆಗೆದುಕೊಂಡಿದ್ದು, ನಿಮ್ಮ ಕುಮ್ಮಕ್ಕಿನಿಂದಲೇ ಕ್ವಾರಿಗಳಲ್ಲಿ ಸ್ಫೋಟ ನಡೆಯುತ್ತಿದೆ. ಸ್ಫೋಟದ ಸ್ಥಳದಿಂದ 30 ಎಕರೆ ಪ್ರದೇಶ ಸಚಿವರ ಬೆಂಬಲಿಗನಿಗೆ ಸೇರಿದ್ದು, ಎಲ್ಲ ಗೊತ್ತಿದ್ದರೂ ನೀವು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿಕಾರಿದ್ದಾನೆ.
ಇದೇ ವೇಳೆ, ಮಧ್ಯ ಪ್ರವೇಶಿಸಿದ ಸಚಿವರ ಬೆಂಬಲಿಗರು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಸ್ಥಳೀಯ ವ್ಯಕ್ಯಿಯನ್ನು ಸ್ಥಳದಿಂದ ಕರೆದುಕೊಂಡು ಹೋಗಿದ್ದಾರೆ.