ಚಿಕ್ಕಬಳ್ಳಾಪುರ : ಗೊಬ್ಬರ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ಗೆ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಗುಡಿಬಂಡೆ ತಾಲೂಕಿನ ಜಯಂತಿ ಗ್ರಾಮದ ಹತ್ತಿರದ ರಾಷ್ಟೀಯ ಹೆದ್ದಾರಿ 7 ರ ಬಳಿ ಈ ಘಟನೆ ಸಂಭವಿಸಿದೆ. ಗೊಬ್ಬರ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ಗೆ ಆಂದ್ರ ಕಡೆಯಿಂದ ಬಂದ ಕಾರೋಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಸದ್ಯ ಇಬ್ಬರು ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.