ETV Bharat / state

ಗ್ರಾಮ ಪಂಚಾಯತಿಯಲ್ಲೇ ನೇಣಿಗೆ ಶರಣಾದ ನೌಕರ

ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ನೌಕರನೊಬ್ಬ ಗ್ರಾಮ ಪಂಚಾಯತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

author img

By

Published : Jun 25, 2019, 7:31 PM IST

ಗ್ರಾಮ ಪಂಚಾಯತಿಯಲ್ಲೇ ನೇಣಿಗೆ ಶರಣಾದ ನೌಕರ

ಚಿಕ್ಕಬಳ್ಳಾಪುರ: ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ನೌಕರನೊಬ್ಬ ಗ್ರಾಮ ಪಂಚಾಯತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೀರೆಕಟ್ಟಿಗೇನಹಳ್ಳಿಯಲ್ಲಿ ನಡೆದಿದೆ. ರಾಮಕೃಷ್ಣಪ್ಪ (52) ನೇಣಿಗೆ ಶರಣಾದ ನೌಕರ ಎನ್ನಲಾಗಿದೆ.

ಕಳೆದ 10 ವರ್ಷದಿಂದ ಗುತ್ತಿಗೆ ಆಧಾರದ ಮೇಲೆ ಪಂಪ್​ಸೆಟ್​ ಆಪರೇಟರ್​ ಆಗಿ ಗ್ರಾಮ ಪಂಚಾಯತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಕುಡಿತದ ಚಟದಿಂದ ಈತ ಕೆಲಸಕ್ಕೆ ಸರಿಯಾಗಿ ಬರದಿದ್ದರಿಂದ ಹಿರಿಯ ಅಧಿಕಾರಿಗಳು ಸಾಕಷ್ಟು ಬಾರಿ ಕೆಲಸದಿಂದ ತೆಗೆದು ಹಾಕುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಆದರೂ ತನ್ನ ಪಾಡಿಗೆ ತಾನು ಸಂಬಳ ತೆಗೆದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದನಂತೆ. ಹೀಗಾಗಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಗ್ರಾಮ ಪಂಚಾಯತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆ ನೌಕರ

ಇದಕ್ಕೂ ಮುನ್ನ ರಾಮಕೃಷ್ಣಪ್ಪ ಆತ್ಮಹತ್ಯೆಗೆ ಪ್ರಯತ್ನಿಸಿದ್ದ. ಆದ್ರೆ ಗ್ರಾಮಸ್ಥರ ನೆರವಿನಿಂದ ಬದುಕಿದ್ದ. ಸದ್ಯ ಇಂದು ಗ್ರಾಮ ಪಂಚಾಯತಿಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಗ್ರಾಮ ಪಂಚಾಯತಿ ವತಿಯಿಂದ ಕುಟುಂಬಸ್ಥರಿಗೆ 10 ಸಾವಿರ ನೆರವು ನೀಡಿದ್ದಾರೆ. ಇನ್ನು ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಸೇರಿದಂತೆ ತಾಹಶೀಲ್ದಾರ್ ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ದೂರು ದಾಖಲಾಗಿದೆ.

ಚಿಕ್ಕಬಳ್ಳಾಪುರ: ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ನೌಕರನೊಬ್ಬ ಗ್ರಾಮ ಪಂಚಾಯತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೀರೆಕಟ್ಟಿಗೇನಹಳ್ಳಿಯಲ್ಲಿ ನಡೆದಿದೆ. ರಾಮಕೃಷ್ಣಪ್ಪ (52) ನೇಣಿಗೆ ಶರಣಾದ ನೌಕರ ಎನ್ನಲಾಗಿದೆ.

ಕಳೆದ 10 ವರ್ಷದಿಂದ ಗುತ್ತಿಗೆ ಆಧಾರದ ಮೇಲೆ ಪಂಪ್​ಸೆಟ್​ ಆಪರೇಟರ್​ ಆಗಿ ಗ್ರಾಮ ಪಂಚಾಯತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಕುಡಿತದ ಚಟದಿಂದ ಈತ ಕೆಲಸಕ್ಕೆ ಸರಿಯಾಗಿ ಬರದಿದ್ದರಿಂದ ಹಿರಿಯ ಅಧಿಕಾರಿಗಳು ಸಾಕಷ್ಟು ಬಾರಿ ಕೆಲಸದಿಂದ ತೆಗೆದು ಹಾಕುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಆದರೂ ತನ್ನ ಪಾಡಿಗೆ ತಾನು ಸಂಬಳ ತೆಗೆದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದನಂತೆ. ಹೀಗಾಗಿ ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಗ್ರಾಮ ಪಂಚಾಯತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆ ನೌಕರ

ಇದಕ್ಕೂ ಮುನ್ನ ರಾಮಕೃಷ್ಣಪ್ಪ ಆತ್ಮಹತ್ಯೆಗೆ ಪ್ರಯತ್ನಿಸಿದ್ದ. ಆದ್ರೆ ಗ್ರಾಮಸ್ಥರ ನೆರವಿನಿಂದ ಬದುಕಿದ್ದ. ಸದ್ಯ ಇಂದು ಗ್ರಾಮ ಪಂಚಾಯತಿಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಗ್ರಾಮ ಪಂಚಾಯತಿ ವತಿಯಿಂದ ಕುಟುಂಬಸ್ಥರಿಗೆ 10 ಸಾವಿರ ನೆರವು ನೀಡಿದ್ದಾರೆ. ಇನ್ನು ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಸೇರಿದಂತೆ ತಾಹಶೀಲ್ದಾರ್ ವಿಶ್ವನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ದೂರು ದಾಖಲಾಗಿದೆ.

Intro:ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ನೌಕರ ಗ್ರಾಮಪಂಚಾಯತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೀರೆಕಟ್ಟಿಗೇನಹಳ್ಳಿಯಲ್ಲಿ ನಡೆದಿದೆ.


Body:ರಾಮಕೃಷ್ಣಪ್ಪ (52) ನೇಣಿಗೆ ಶರಣಾದ ನೌಕರ.10 ವರ್ಷದಿಂದ ಗುತ್ತಿಗೆ ಆಧಾರದಮೇಲೆ ಪಂಪ್ ಆಪರೇಟರ್ ಆಗಿ ಗ್ರಾಮಪಂಚಾಯತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕೆಲಸಕ್ಕೆ ಸರಿಯಾಗಿ ಬರದೇ ಮದ್ಯ ಸೇವನೆ ನಡೆಸುತ್ತಿದ್ದು ಹಿರಿಯ ಅಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷರಾದ ಕೃಷ್ಣೇಗೌಡ ಸಾಕಷ್ಟು ಬಾರೀ ಕೆಲಸದಿಂದ ತಗೆಸುವುದಾಗಿ ಎಚ್ಚರಿಕೆಯನ್ನು ನೀಡಿದ್ದರು.ಇನ್ನೂ ಕುಡಿತ ಚಟದಿಂದ ಇದನ್ನೇಲ್ಲಾ ಲೆಕ್ಕಿಸದೇ ತನ್ನ ಪಾಡಿಗೆ ಸಂಬಳ ತಗೆದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದು ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದು ಬಂದಿದೆ. ಸದ್ಯ ಸ್ಥಳದಲ್ಲಿ ಸಂಬಂದಿಕರ ಆಕ್ರಂಧನ ಮುಗಿಲು ಮುಟ್ಟಿದ್ದು ಸ್ಥಳೀಯರು ಸಮಾಧಾನ ಪಡಿಸಿದ್ದಾರೆ.


ಇನ್ನೂ ರಾಮಕೃಷ್ಣಪ್ಪ ಇದುವರೆಗೂ ಒಂದು ಬಾರೀ ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದು ಗ್ರಾಮಸ್ಥರ ನೆರವಿನಿಂದ ಬದುಕಿ ಉಳಿದಿದ್ದಾನೆ.ಸದ್ಯ ಇಂದು ಗ್ರಾಮಪಂಚಾಯತಿಯಲ್ಲಿ ಯಾರು ಇಲ್ಲದ ಸಮಯವನ್ನು ನೋಡಿಕೊಂಡು ಪ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗ್ರಾಮಪಂಚಾಯತಿ ವತಿಯಿಂದ ಕುಟುಂಬಸ್ಥರಿಗೆ 10 ಸಾವಿರ ನೆರವು ನೀಡಿದ್ದಾರೆ. ಇನ್ನೂ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಸೇರಿದಂತೆ ತಾಹಶೀಲ್ದಾರ್ ವಿಶ್ವನಾಥ್ ಬೇಟಿ ನೀಡಿ ಪರಿಶೀಲನೆ ನಡೆಸಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.




Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.