ETV Bharat / state

ಚಿಕ್ಕಬಳ್ಳಾಪುರ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ, ಬಾಲಕ ಸಾವು

author img

By

Published : Dec 19, 2021, 2:24 PM IST

ಚಿಂತಾಮಣಿ ತಾಲೂಕಿನ‌ ಅಂಬಾಜಿ ದುರ್ಗ ಹೋಬಳಿಯ ನಾರಾಯಣಹಳ್ಳಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ಬಾಲಕ ಮೃತಪಟ್ಟಿದ್ದಾನೆ.

family-attempt-to-suicide-case
ಚಿಂತಾಮಣಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಂತಾಮಣಿ ತಾಲೂಕಿನ‌ ಅಂಬಾಜಿ ದುರ್ಗ ಹೋಬಳಿಯ ನಾರಾಯಣಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಇವರಲ್ಲಿ ಬಾಲಕ ಮೃತಪಟ್ಟಿದ್ದು, ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ.

ನಾರಾಯಣಹಳ್ಳಿ ಗ್ರಾಮದ ಮಂಜುನಾಥ್ (45) ಹಾಗೂ ಹನುಮಕ್ಕ (35) ದಂಪತಿಯು ತಮ್ಮ ಮಕ್ಕಳಾದ ಮನಿರಾಜು (20) ಮತ್ತು 14 ವರ್ಷದ ಮಗ ವಿಷ ಸೇವಿಸಿದ್ದಾರೆ. ಘಟನೆ ತಿಳಿದ ಅಕ್ಕಪಕ್ಕದ ಮನೆಯವರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಹೊಸಕೋಟೆಯ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ.

ಗಂಭೀರ ಸ್ಥಿತಿಯಲ್ಲಿರುವ ಉಳಿದ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್​ಎನ್​ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬದ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಹರಿದ ನೆತ್ತರು.. ತಡರಾತ್ರಿ ಯುವಕನ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಂತಾಮಣಿ ತಾಲೂಕಿನ‌ ಅಂಬಾಜಿ ದುರ್ಗ ಹೋಬಳಿಯ ನಾರಾಯಣಹಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಇವರಲ್ಲಿ ಬಾಲಕ ಮೃತಪಟ್ಟಿದ್ದು, ಉಳಿದ ಮೂವರ ಸ್ಥಿತಿ ಗಂಭೀರವಾಗಿದೆ.

ನಾರಾಯಣಹಳ್ಳಿ ಗ್ರಾಮದ ಮಂಜುನಾಥ್ (45) ಹಾಗೂ ಹನುಮಕ್ಕ (35) ದಂಪತಿಯು ತಮ್ಮ ಮಕ್ಕಳಾದ ಮನಿರಾಜು (20) ಮತ್ತು 14 ವರ್ಷದ ಮಗ ವಿಷ ಸೇವಿಸಿದ್ದಾರೆ. ಘಟನೆ ತಿಳಿದ ಅಕ್ಕಪಕ್ಕದ ಮನೆಯವರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಹೊಸಕೋಟೆಯ ಎಂವಿಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿದ್ದಾನೆ.

ಗಂಭೀರ ಸ್ಥಿತಿಯಲ್ಲಿರುವ ಉಳಿದ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್​ಎನ್​ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬದ ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಹರಿದ ನೆತ್ತರು.. ತಡರಾತ್ರಿ ಯುವಕನ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.