ETV Bharat / state

ವಿದ್ಯುತ್​​ ತಂತಿ ಸ್ಪರ್ಶಿಸಿ ಕಟ್ಟಡ ಕಾರ್ಮಿಕ ಸ್ಥಳದಲ್ಲೇ ಸಾವು - ಗಾರೆ ಕಾರ್ಮಿಕ ಸ್ಥಳದಲ್ಲೇ ಮೃತಿ

ಚಿಕ್ಕಬಳ್ಳಾಪುರದಲ್ಲಿ ಮನೆಯೊಂದರ ಗಾರೆ ಕೆಲಸಕ್ಕೆ ಬಂದಿದ್ದ ಕಾರ್ಮಿಕನೋರ್ವ ವಿದ್ಯುತ್​​ ತಂತಿಗೆ ಸಿಲುಕಿ ಮೃತಪಟ್ಟಿದ್ದಾನೆ.

ಕಾರ್ಮಿಕ  ಸಾವು
ಕಾರ್ಮಿಕ ಸಾವು
author img

By

Published : Mar 10, 2020, 7:04 PM IST

ಚಿಕ್ಕಬಳ್ಳಾಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಗಾರೆ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ಮಹಮ್ಮದ್ (35) ಮೃತ ಕಾರ್ಮಿಕ ಎಂದು ತಿಳಿದು ಬಂದಿದೆ. ಈತ ನಗರದ ಎನ್​​ಪಿಒ ರಸ್ತೆಯ ರೆಹಮಾನ್ ಎಂಬುವರ ಮನೆಗೆ ಗಾರೆ ಕೆಲಸಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿದ್ಯುತ್ ತಂತಿಗೆ ಸಿಲುಕಿ ಕಂಬದ ಮೇಲೆಯೇ ಮಹಮ್ಮದ್​ ಸುಟ್ಟು ಕರಕಲಾಗಿದ್ದಾನೆ. ತಂತಿಯ ಮೇಲೆಯೇ ಶವ ನೇತಾಡುತ್ತಿದ್ದುದರಿಂದ ಕೆಲಸಮಯ ಭಯದ ವಾತಾವರಣ ನಿರ್ಮಾಣವಾಗಿತ್ತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ವಿದ್ಯುತ್ ತಂತಿ ಸ್ಪರ್ಶಿಸಿ ಗಾರೆ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ಮಹಮ್ಮದ್ (35) ಮೃತ ಕಾರ್ಮಿಕ ಎಂದು ತಿಳಿದು ಬಂದಿದೆ. ಈತ ನಗರದ ಎನ್​​ಪಿಒ ರಸ್ತೆಯ ರೆಹಮಾನ್ ಎಂಬುವರ ಮನೆಗೆ ಗಾರೆ ಕೆಲಸಕ್ಕೆ ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿದ್ಯುತ್ ತಂತಿಗೆ ಸಿಲುಕಿ ಕಂಬದ ಮೇಲೆಯೇ ಮಹಮ್ಮದ್​ ಸುಟ್ಟು ಕರಕಲಾಗಿದ್ದಾನೆ. ತಂತಿಯ ಮೇಲೆಯೇ ಶವ ನೇತಾಡುತ್ತಿದ್ದುದರಿಂದ ಕೆಲಸಮಯ ಭಯದ ವಾತಾವರಣ ನಿರ್ಮಾಣವಾಗಿತ್ತು. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.