ETV Bharat / state

ಮಳೆಗಾಗಿ ಚಿಕ್ಕಬಳ್ಳಾಪುರ ಶಾಸಕ ಸುಬ್ಬಾರೆಡ್ಡಿ ದಂಪತಿಯಿಂದ ಪೂಜೆ

ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಮಳೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಶಾಸಕ ಸುಬ್ಬಾರೆಡ್ಡಿ ಮಳೆಗಾಗಿ ದೇವರ ಪೂಜೆಯ ಮೊರೆ ಹೋಗಿದ್ದಾರೆ.

author img

By

Published : Jul 5, 2019, 11:54 PM IST

ಮಳೆಗಾಗಿ ಚಿಕ್ಕಬಳ್ಳಾಪುರ ಶಾಸಕ ಸುಬ್ಬಾರೆಡ್ಡಿ ಪೂಜೆ

ಚಿಕ್ಕಬಳ್ಳಾಪುರ: ಈ ಬಾರಿ ರಾಜ್ಯದೆಲ್ಲೆಡೆ ಬರ ಆವರಿಸಿದೆ. ಕೇಂದ್ರ ಸರ್ಕಾರ ಸೂಚಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಕೂಡ ಘೋಷಿಸಲಾಗಿದೆ. ಹೀಗಾಗಿ ಜಿಲ್ಲೆಯ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ .

ಮಳೆಗಾಗಿ ಚಿಕ್ಕಬಳ್ಳಾಪುರ ಶಾಸಕ ಸುಬ್ಬಾರೆಡ್ಡಿ ಪೂಜೆ

ತಾಲೂಕಿನ ಗಡಿದಂ ವೆಂಕಟರಮಣ ದೇವಸ್ಥಾನದಲ್ಲಿ ಶಾಸಕ ಸುಬ್ಬಾರೆಡ್ಡಿ ದಂಪತಿ ಮಳೆಗಾಗಿ ಹೋಮ ಏರ್ಪಡಿಸಿ ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಸದ್ಯ ಬಾಗೇಪಲ್ಲಿ ಕ್ಷೇತ್ರ ಬರಪೀಡಿತ ಕ್ಷೇತ್ರವಾಗಿರುವುದರಿಂದ ಈ ಕ್ಷೇತ್ರದ ಜನತೆಯೂ ಹೆಚ್ಚಾಗಿ ನೀರಾವರಿ ಯೋಜನೆಗಳನ್ನು ನಂಬಿಕೊಂಡಿದ್ದಾರೆ. ಆದರೆ ನೀರಾವರಿ ಯೋಜನೆಗಳು ಯಾವಾಗ ಅನುಷ್ಠಾನಕ್ಕೆ ಬರುತ್ತವೆ ಎಂಬುದು ಮಾತ್ರ ಇನ್ನೂ ಅರಿಯದ ಪ್ರಶ್ನೆಯಾಗಿಯೇ ಉಳಿದುಕೊಂಡಿದೆ.

ಅದಾಗಲೇ ಜೂನ್​ ಕಳೆದರೂ ರಾಜ್ಯದಲ್ಲಿ ಉತ್ತಮ ಮಳೆಯಾಗದೇ ರೈತರು ಕಂಗಾಲಾಗಿದ್ದಾರೆ. ಬಹುತೇಕರು ಹೋಮ-ಹವನಗಳ ಮೊರೆ ಹೋಗಿದ್ದಾರೆ. ಜನರ ಪೂಜೆಗೆ ಒಲಿದು ವರುಣದೇವ ಮಳೆ ಸುರಿಸುತ್ತಾನಾ ಕಾದು ನೋಡಬೇಕಿದೆ.

ಚಿಕ್ಕಬಳ್ಳಾಪುರ: ಈ ಬಾರಿ ರಾಜ್ಯದೆಲ್ಲೆಡೆ ಬರ ಆವರಿಸಿದೆ. ಕೇಂದ್ರ ಸರ್ಕಾರ ಸೂಚಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಕೂಡ ಘೋಷಿಸಲಾಗಿದೆ. ಹೀಗಾಗಿ ಜಿಲ್ಲೆಯ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ .

ಮಳೆಗಾಗಿ ಚಿಕ್ಕಬಳ್ಳಾಪುರ ಶಾಸಕ ಸುಬ್ಬಾರೆಡ್ಡಿ ಪೂಜೆ

ತಾಲೂಕಿನ ಗಡಿದಂ ವೆಂಕಟರಮಣ ದೇವಸ್ಥಾನದಲ್ಲಿ ಶಾಸಕ ಸುಬ್ಬಾರೆಡ್ಡಿ ದಂಪತಿ ಮಳೆಗಾಗಿ ಹೋಮ ಏರ್ಪಡಿಸಿ ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಸದ್ಯ ಬಾಗೇಪಲ್ಲಿ ಕ್ಷೇತ್ರ ಬರಪೀಡಿತ ಕ್ಷೇತ್ರವಾಗಿರುವುದರಿಂದ ಈ ಕ್ಷೇತ್ರದ ಜನತೆಯೂ ಹೆಚ್ಚಾಗಿ ನೀರಾವರಿ ಯೋಜನೆಗಳನ್ನು ನಂಬಿಕೊಂಡಿದ್ದಾರೆ. ಆದರೆ ನೀರಾವರಿ ಯೋಜನೆಗಳು ಯಾವಾಗ ಅನುಷ್ಠಾನಕ್ಕೆ ಬರುತ್ತವೆ ಎಂಬುದು ಮಾತ್ರ ಇನ್ನೂ ಅರಿಯದ ಪ್ರಶ್ನೆಯಾಗಿಯೇ ಉಳಿದುಕೊಂಡಿದೆ.

ಅದಾಗಲೇ ಜೂನ್​ ಕಳೆದರೂ ರಾಜ್ಯದಲ್ಲಿ ಉತ್ತಮ ಮಳೆಯಾಗದೇ ರೈತರು ಕಂಗಾಲಾಗಿದ್ದಾರೆ. ಬಹುತೇಕರು ಹೋಮ-ಹವನಗಳ ಮೊರೆ ಹೋಗಿದ್ದಾರೆ. ಜನರ ಪೂಜೆಗೆ ಒಲಿದು ವರುಣದೇವ ಮಳೆ ಸುರಿಸುತ್ತಾನಾ ಕಾದು ನೋಡಬೇಕಿದೆ.

Intro:ಕೇಂದ್ರ ಸರ್ಕಾರವೇ ಸೂಚಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯಾನ್ನಾಗಿ ಘೋಷಣೆ ಮಾಡಿದೆ.ಸದ್ಯ ಇದರ ಸಲುವಾಗಿಯೇ ಜಿಲ್ಲೆಯ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಜಿಲ್ಲೆಯಲ್ಲಿ ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ.Body:ತಾಲೂಕಿನ ಗಡಿದಂ ವೆಂಕಟರಮಣ ದೇವಸ್ಥಾನದಲ್ಲಿ ಸತಿ ಪತಿ ಇಬ್ಬರು ಮಳೆಗಾಗಿ ಹೋಮವನ್ನು ಏರ್ಪಡಿಸಿ ಜಿಲ್ಲೆಯಲ್ಲಿ ಹಾಗೂ ಕ್ಷೇತ್ರದಲ್ಲಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಸದ್ಯ ಬಾಗೇಪಲ್ಲಿ ಕ್ಷೇತ್ರ ಬರಪೀಡಿತ ಕ್ಷೇತ್ರವಾಗಿರುವುದರಿಂದ ಈ ಕ್ಷೇತ್ರದ ಜನತೆಯೂ ಹೆಚ್ಚಾಗಿ ನೀರಾವರಿ ಯೋಜನೆಗಳನ್ನು ನಂಬಿಕೊಂಡಿದ್ದಾರೆ.ಆದರೆ ನೀರಾವರಿ ಯೋಜನೆಗಳು ಯಾವಾಗ ಅನುಷ್ಠಾನಕ್ಕೆ ಬರುತ್ತವೆ ಎಂಬುದು ಮಾತ್ರ ಇನ್ನೂ ಅರಿಯದ ಪ್ರಶ್ನೆಯಾಗಿಯೇ ಉಳಿದುಕೊಂಡಿದೆ.ಸದ್ಯ ಮಳೆಗಾಲವೂ ಆರಂಭವಾದರಿಂದ ಉತ್ತಮ ಮಳೆಯೂ ಆಗದೇ ರೈತರು ಕಂಗಾಲಾಗಿದ್ದಾರೆ.ಸದ್ಯ ಇದರ ಸಲುವಾಗಿಯೇ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ದೇವಸ್ಥಾನಗಳ ಮೊರೆ ಹೋಗಿದ್ದಾರೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.