ETV Bharat / state

ವಾಲ್ಮೀಕಿ ಜಾತ್ರೆಗೆ ಭಾರೀ ಸಿದ್ಧತೆ:  ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ಪೂರ್ವಭಾವಿ ಸಭೆ

author img

By

Published : Jan 20, 2020, 8:14 PM IST

ಮುಂಬರುವ ಫೆ. 8 ಮತ್ತು 9 ರಂದು ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆ ನಿಮಿತ್ತ ಇಂದು ಪ್ರವಾಸಿ ಮಂದಿರದಲ್ಲಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಪ್ರಸನ್ನಾನಂದ ಸ್ವಾಮೀಜಿ
Prasannananda swamiji

ಚಿಕ್ಕಬಳ್ಳಾಪುರ: ಮುಂಬರುವ ಫೆ. 8 ಮತ್ತು 9 ರಂದು ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆ ಪ್ರಯುಕ್ತ ಇಂದು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ನಮ್ಮ ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಂಡ ಸಮುದಾಯವಿದೆ. ಆದರೆ, ಸಮುದಾಯದ ಅನೇಕರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈಗಾಗಲೇ ಯಡಿಯೂರಪ್ಪ ಸರ್ಕಾರ ವಾಲ್ಮೀಕಿ ಸಮಾಜದ ಮೀಸಲಿಗೆ ಸಂಬಂಧಿಸಿದಂತೆ ನಾಗಮೋಹನ್ ದಾಸ್ ಸಮಿತಿ ರಚಿಸಿದ್ದಾರೆ. ಮುಖ್ಯಮಂತ್ರಿಗಳು ಸಮಿತಿಯಿಂದ ವರದಿ ತರಿಸಿಕೊಂಡು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆಯಂದೇ ಮೀಸಲು ಘೋಷಣೆ ಮಾಡಬೇಕು. ವಿಳಂಬ ಮಾಡಿದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದರು.

ಕಳೆದ ವರ್ಷ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಸಮುದಾಯದಿಂದ ಸುಮಾರು 3 ಕೋಟಿಯಷ್ಟು ದೇಣಿಗೆ ಬಂದಿದ್ದು, ಜಾತ್ರೆಗೆ ಒಂದೂವರೆ ಕೋಟಿಯಷ್ಟು ಖರ್ಚಾಗಿತ್ತು. ಉಳಿದ ಹಣವನ್ನು ಯಾದಗಿರಿ ಜಿಲ್ಲೆಯಲ್ಲಿ ಸುಮಾರು 17 ಎಕರೆ ಪ್ರದೇಶವನ್ನು ವಾಲ್ಮೀಕಿ ಪೀಠದ ಹೆಸರಿನಲ್ಲಿ ಖರೀದಿ ಮಾಡಲಾಗಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಭಾಗಗಳ ಜಿಲ್ಲೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾಲ್ಮೀಕಿ ಗುರಪೀಠದ ಶಾಖಾ ಮಠ ತೆರೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು.

ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆ ಆಗಲಿ: ರಾಜ್ಯದಲ್ಲಿ ಅನೇಕರು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಉನ್ನತ ಹುದ್ದೆಗಳನ್ನು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಹಣಕ್ಕೆ ಆಸೆ ಬಿದ್ದು ಅಧಿಕಾರಿಗಳು ಪ್ರಮಾಣ ಪತ್ರಗಳನ್ನು ನೀಡುತ್ತಿದ್ದಾರೆ. ಹೀಗಾಗಿ ವಾಲ್ಮೀಕಿ ಸಮುದಾಯದ ಅರ್ಹರಿಗೆ ಅನ್ಯಾಯವಾಗುತ್ತಿದ್ದು, ಸರ್ಕಾರ ನಕಲಿ ಪ್ರಮಾಣ ಪತ್ರಗಳನ್ನು ಪಡೆದಿರುವ ಹಾಗೂ ವಿತರಣೆ ಮಾಡಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಚಿಕ್ಕಬಳ್ಳಾಪುರ: ಮುಂಬರುವ ಫೆ. 8 ಮತ್ತು 9 ರಂದು ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆ ಪ್ರಯುಕ್ತ ಇಂದು ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಪ್ರಸನ್ನಾನಂದ ಸ್ವಾಮೀಜಿ, ನಮ್ಮ ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಂಡ ಸಮುದಾಯವಿದೆ. ಆದರೆ, ಸಮುದಾಯದ ಅನೇಕರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈಗಾಗಲೇ ಯಡಿಯೂರಪ್ಪ ಸರ್ಕಾರ ವಾಲ್ಮೀಕಿ ಸಮಾಜದ ಮೀಸಲಿಗೆ ಸಂಬಂಧಿಸಿದಂತೆ ನಾಗಮೋಹನ್ ದಾಸ್ ಸಮಿತಿ ರಚಿಸಿದ್ದಾರೆ. ಮುಖ್ಯಮಂತ್ರಿಗಳು ಸಮಿತಿಯಿಂದ ವರದಿ ತರಿಸಿಕೊಂಡು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆಯಂದೇ ಮೀಸಲು ಘೋಷಣೆ ಮಾಡಬೇಕು. ವಿಳಂಬ ಮಾಡಿದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದರು.

ಕಳೆದ ವರ್ಷ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಸಮುದಾಯದಿಂದ ಸುಮಾರು 3 ಕೋಟಿಯಷ್ಟು ದೇಣಿಗೆ ಬಂದಿದ್ದು, ಜಾತ್ರೆಗೆ ಒಂದೂವರೆ ಕೋಟಿಯಷ್ಟು ಖರ್ಚಾಗಿತ್ತು. ಉಳಿದ ಹಣವನ್ನು ಯಾದಗಿರಿ ಜಿಲ್ಲೆಯಲ್ಲಿ ಸುಮಾರು 17 ಎಕರೆ ಪ್ರದೇಶವನ್ನು ವಾಲ್ಮೀಕಿ ಪೀಠದ ಹೆಸರಿನಲ್ಲಿ ಖರೀದಿ ಮಾಡಲಾಗಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಭಾಗಗಳ ಜಿಲ್ಲೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾಲ್ಮೀಕಿ ಗುರಪೀಠದ ಶಾಖಾ ಮಠ ತೆರೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು.

ನಕಲಿ ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆ ಆಗಲಿ: ರಾಜ್ಯದಲ್ಲಿ ಅನೇಕರು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಉನ್ನತ ಹುದ್ದೆಗಳನ್ನು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಹಣಕ್ಕೆ ಆಸೆ ಬಿದ್ದು ಅಧಿಕಾರಿಗಳು ಪ್ರಮಾಣ ಪತ್ರಗಳನ್ನು ನೀಡುತ್ತಿದ್ದಾರೆ. ಹೀಗಾಗಿ ವಾಲ್ಮೀಕಿ ಸಮುದಾಯದ ಅರ್ಹರಿಗೆ ಅನ್ಯಾಯವಾಗುತ್ತಿದ್ದು, ಸರ್ಕಾರ ನಕಲಿ ಪ್ರಮಾಣ ಪತ್ರಗಳನ್ನು ಪಡೆದಿರುವ ಹಾಗೂ ವಿತರಣೆ ಮಾಡಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

Intro:ನಕಲಿ ಪ್ರಮಾಣ ಪತ್ರಗಳಿಗೆ ಶಿಕ್ಷೆ ಆಗಲಿ : ಪ್ರಸನ್ನ ನಂದ ಸ್ವಾಮೀಜಿBody:ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ತಾಲೂಕು ವಾಲ್ಮೀಕಿ ಸಭೆConclusion:         ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮುಂಬರುವ ಫೆ.8, 9 ರಂದು ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕೂ ಹೆಚ್ಚು ಪರಿಶಿಷ್ಟ ಪಂಗಂಡ ಸಮುದಾಯವಿದೆ. ಆದರೆ ಸಮುದಾಯದ ಅನೇಕರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈಗಾಗಲೇ ಯಡಿಯೂರಪ್ಪ ಸರ್ಕಾರ ವಾಲ್ಮೀಕಿ ಸಮಾಜದ ಮೀಸಲಾತಿಗೆ ಸಂಬಂಧಿಸಿದಂತೆ ನಾಗಮೋಹನ್ ದಾಸ್ ಸಮಿತಿ ರಚಿಸಿದ್ದಾರೆ. ಮುಖ್ಯಮಂತ್ರಿಗಳು ಸಮಿತಿಯಿಂದ ವರದಿ ತರಿಸಿಕೊಂಡು ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆಯಂದೇ ಮೀಸಲಾತಿಯನ್ನು ಘೋಷಣೆ ಮಾಡಬೇಕು. ವಿಳಂಭ ಮಾಡಿದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ. ಕಳೆದ ವರ್ಷ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಸಮುದಾಯದಿಂದ ಸುಮಾರು 3 ಕೋಟಿಯಷ್ಟು ದೇಣಿಗೆ ಬಂದಿದ್ದು, ಜಾತ್ರೆಗೆ ಒಂದೂವರೆ ಕೋಟಿಯಷ್ಟು ಖರ್ಚಾಗಿದ್ದು, ಉಳಿದ ದೇಣಿಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 17 ಎಕರೆ ವಾಲ್ಮೀಕಿ ಪೀಠದ ಹೆಸರಿನಲ್ಲಿ ಖರೀದಿ ಮಾಡಲಾಗಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಭಾಗಗಳ ಜಿಲ್ಲೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾಲ್ಮೀಕಿ ಗುರಪೀಠದ ಶಾಖಾ ಮಠ ತೆರೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು.

ನಕಲಿ ಪ್ರಮಾಣ ಪತ್ರಗಳಿಗೆ ಶಿಕ್ಷೆ ಆಗಲಿ: ರಾಜ್ಯದಲ್ಲಿ ಅನೇಕರು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಉನ್ನತ ಹುದ್ದೆಗಳನ್ನು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಹಣಕ್ಕೆ ಆಸೆ ಬಿದ್ದು ಅಧಿಕಾರಿಗಳು ಪ್ರಮಾಣ ಪತ್ರಗಳನ್ನು ನೀಡುತ್ತಿದ್ದಾರೆ. ಈ ರೀತಿಯಲ್ಲಿ ವಾಲ್ಮೀಕಿ ಸಮುದಾಯದ ಅರ್ಹರಿಗೆ ಅನ್ಯಾಯವಾಗುತ್ತಿದ್ದು ಸರ್ಕಾರ ನಕಲಿ ಪ್ರಮಾಣ ಪತ್ರಗಳನ್ನು ಪಡೆದಿರುವ ಹಾಗೂ ವಿತರಣೆ ಮಾಡಿರುವ ಅಧಿಕಾರಿಗಳ ವಿರುದ್ದ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.