ETV Bharat / state

ಸರ್ಕಾರದ ನೀತಿಗಳ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್​ನಿಂದ ಪ್ರತಿಭಟನೆ

author img

By

Published : Aug 21, 2020, 10:38 AM IST

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ

Congress Protest Against Govt Policies
ಸರ್ಕಾರದ ನೀತಿಗಳ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್​ನಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ : ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಖಂಡಿಸಿ ಮತ್ತು ಆರೋಗ್ಯ ಉಪಕರಣಗಳ ಖರೀದಿಯಲ್ಲಿ ನಡೆದ ಅವ್ಯವಹಾರದ ತನಿಖೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್​​​​​​ನಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್​ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಯ್ದೆಗಳ ತಿದ್ದುಪಡಿ ಮಾಡಿ ಕಾರ್ಪೋರೇಟ್​ ಕ್ಷೇತ್ರಕ್ಕೆ ಸರ್ಕಾರ ಲಾಭ ಮಾಡಿಕೊಡುತ್ತಿದೆ. ಆದ್ದರಿಂದ, ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತಕ್ಷಣವೇ ವಾಪಸ್​ ಪಡೆಯಬೇಕು ಎಂದು ಆಗ್ರಹಿಸಿದರು.

ಚಿಕ್ಕಬಳ್ಳಾಪುರ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಿತು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ , ಮುಖಂಡರಾದ ಎಂ.ಆಂಜಿನಪ್ಪ , ನವೀನ್ ಕಿರಣ್, ಯಲುವಳ್ಳಿ ರಮೇಶ್, ಬ್ಲಾಕ್ ಕಾಂಗ್ರೆಸ್​ ಅಧ್ಯಕ್ಷ ಜಯರಾಂ ಸೇರಿದಂತೆ ಮುಖಂಡರು ಕಾರ್ಯಕರ್ತರು ಇದ್ದರು.

ಚಿಕ್ಕಬಳ್ಳಾಪುರ : ಭೂ ಸುಧಾರಣೆ, ಎಪಿಎಂಸಿ, ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ಖಂಡಿಸಿ ಮತ್ತು ಆರೋಗ್ಯ ಉಪಕರಣಗಳ ಖರೀದಿಯಲ್ಲಿ ನಡೆದ ಅವ್ಯವಹಾರದ ತನಿಖೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್​​​​​​ನಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶಿಡ್ಲಘಟ್ಟ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್​ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಯ್ದೆಗಳ ತಿದ್ದುಪಡಿ ಮಾಡಿ ಕಾರ್ಪೋರೇಟ್​ ಕ್ಷೇತ್ರಕ್ಕೆ ಸರ್ಕಾರ ಲಾಭ ಮಾಡಿಕೊಡುತ್ತಿದೆ. ಆದ್ದರಿಂದ, ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ತಕ್ಷಣವೇ ವಾಪಸ್​ ಪಡೆಯಬೇಕು ಎಂದು ಆಗ್ರಹಿಸಿದರು.

ಚಿಕ್ಕಬಳ್ಳಾಪುರ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಿತು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ , ಮುಖಂಡರಾದ ಎಂ.ಆಂಜಿನಪ್ಪ , ನವೀನ್ ಕಿರಣ್, ಯಲುವಳ್ಳಿ ರಮೇಶ್, ಬ್ಲಾಕ್ ಕಾಂಗ್ರೆಸ್​ ಅಧ್ಯಕ್ಷ ಜಯರಾಂ ಸೇರಿದಂತೆ ಮುಖಂಡರು ಕಾರ್ಯಕರ್ತರು ಇದ್ದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.